ಆಗ ರಾಜಕಾರಣಿಗಳ ಗನ್ ಮ್ಯಾನ್, ಈಗ ಜೆಡಿಎಸ್ ಶಾಸಕ!
ಬೆಂಗಳೂರು, ಮೇ 19 : ಒಂದು ಕಾಲದಲ್ಲಿ ರಾಜಕಾರಣಿಗಳ ಗನ್ ಮ್ಯಾನ್ ಆಗಿದ್ದವರು ಈಗ ಶಾಸಕರು. ಹೌದು, ಎಸ್.ಎಂ.ಕೃಷ್ಣ ಸೇರಿದಂತೆ ಹಲವಾರು ನಾಯಕರಿಗೆ ಗನ್ ಮ್ಯಾನ್ ಆಗಿದ್ದ ಆರ್.ಮಂಜುನಾಥ ಈಗ ಜೆಡಿಎಸ್ ಶಾಸಕರು.
ಸುಮಾರು 18 ವರ್ಷಗಳ ಕಾಲ ಗನ್ ಮ್ಯಾನ್ ಆಗಿ ರಾಜಕಾರಣಿಗಳಿಗೆ ಭದ್ರತೆ ನೀಡಿದ್ದರು ಆರ್.ಮಂಜುನಾಥ. 2018ರ ಚುನಾವಣೆಯಲ್ಲಿ ಬೆಂಗಳೂರಿನ ದಾಸರಹಳ್ಳಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಜಯಗಳಿಸಿದ್ದಾರೆ.
ಈಗಲೂ ಹಲವಾರು ಜನರು 'ಗನ್ ಮ್ಯಾನ್ ಮಂಜಣ್ಣ' ಎಂದೇ ಅವರನ್ನು ಕರೆಯುತ್ತಾರೆ. ಎಸ್.ಎಂ.ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಮಂಜುನಾಥ ಅವರು ಗನ್ ಮ್ಯಾನ್ ಆಗಿದ್ದರು. ಕೃಷ್ಣ ಅವರು ಮಹಾರಾಷ್ಟ್ರದ ರಾಜ್ಯಪಾಲರಾದ ಬಳಿಕ ಇವರು ಸ್ವಯಂ ನಿವೃತ್ತಿ ಪಡೆದರು.

2015ರಲ್ಲಿ ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಮಂಜುನಾಥ ಅವರು ಸ್ಪರ್ಧಿಸಿದ್ದರು. ಮಲ್ಲಸಂದ್ರ ವಾರ್ಡ್ನಿಂದ ಕಣಕ್ಕಿಳಿದಿದ್ದ ಮಂಜುನಾಥ 300 ಮತಗಳ ಅಂತರದಿಂದ ಸೋಲು ಕಂಡಿದ್ದರು. ಈಗ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ನಗರದ ಸಶಸ್ತ್ರ ಮೀಸಲು ಪಡೆಯಲ್ಲಿ ಮೊದಲು ಕೆಲಸ ಮಾಡಿದ್ದ ಮಂಜುನಾಥ ಅವರು, ಗುಪ್ತಚರ ವಿಭಾಗದಲ್ಲಿಯೂ ಕೆಲಸ ಮಾಡಿದ್ದರು. ಬಳಿಕ ರಾಜಕಾರಣಿಗಳ ಗನ್ ಮ್ಯಾನ್ ಆಗಿ ಕೆಲಸ ಮಾಡಿದ್ದರು. ಈಗ ಶಾಸಕರಾಗಿ ಜನಸೇವೆ ಮಾಡಲಿದ್ದಾರೆ.
ಎಸ್.ಮುನಿರಾಜು ಸೋಲಿಸಿದ್ದಾರೆ : ದಾಸರಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿಜೆಪಿಯ ಎಸ್.ಮುನಿರಾಜು. 2 ಬಾರಿ ಅವರು ಕ್ಷೇತ್ರದಿಂದ ಆಯ್ಕೆಯಾಗಿದ್ದರು. 2018ರ ಚುನಾವಣೆಯಲ್ಲಿ ಅವರ ವಿರುದ್ಧ ಸ್ಪರ್ಧಿಸಿದ ಆರ್.ಮಂಜುನಾಥ ಅವರು 94,044 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್












Click it and Unblock the Notifications