ವಿದ್ಯುತ್ ದರ ಏರಿಕೆ ಮಧ್ಯೆ ಲೋಡ್ ಶೆಡ್ಡಿಂಗ್ ಕೊಡುಗೆ
ಬೆಂಗಳೂರು, ಮೇ 12- 'ಲೋಕಸಭೆ ಚುನಾವಣೆ ಮುಗಿಯಲಿ ಅಂತ್ಲೇ ಕಾಯ್ತಿದ್ದಿವಿ. ಹಾಗಾಗಿ ಇದೀಗ ಒಂದೊಂದೇ ಸರಕು/ಸೇವೆಗಳ ದರಗಳನ್ನು ಏರಿಸುತ್ತಿದ್ದೇವೆ' ಎಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಆಘಾತಕಾರಿ ಹೇಳಿಕೆ ನೀಡಿದ ಮೇಲೆ ವಿದ್ಯುತ್ ದರ ಈ ತಿಂಗಳಿಂದಲೇ ಜಾರಿಗೆ ಬರುವಂತೆ ಇಂದು ಏರಿಸಲಾಗಿದೆ.
ಹೌದು, ವಿದ್ಯುತ್ ದರವನ್ನು ಪ್ರತಿ ಯೂನಿಟ್ಗೆ 66 ಪೈಸೆ ಹೆಚ್ಚಿಸುವಂತೆ ವಿದ್ಯುತ್ ವಿತರಣೆ ಕಂಪನಿಗಳು ಕೆಇಆರ್ಸಿಗೆ ಪ್ರಸ್ತಾವನೆ ಸಲ್ಲಿಸಿದ್ದವು. ಅದರಂತೆ ರಾಜ್ಯದ ಎಲ್ಲ ಐದು ವಿದ್ಯುತ್ ವಿತರಣಾ ಕಂಪನಿಗಳ (ಎಸ್ಕಾಂ) ವ್ಯಾಪ್ತಿಯಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್ ಸಿ) ಇಂದು ಸೋಮವಾರ ನಿರೀಕ್ಷೆಯಂತೆ 32 ಪೈಸೆಯಷ್ಟು ದರ ಹೆಚ್ಚಳ ಮಾಡಿದೆ. ಆಯೋಗದ ಅಧ್ಯಕ್ಷ ಎಂಆರ್ ಶ್ರೀನಿವಾಸಮೂರ್ತಿ ದರ ಏರಿಕೆಯನ್ನು ಸುದ್ದಿಗೋಷ್ಠಿಯಲ್ಲಿ ಇದೀಗತಾನೆ ಪ್ರಕಟಿಸಿದ್ದಾರೆ.

ವಿದ್ಯುತ್ ಕಂಪನಿಗಳನ್ನು ನಷ್ಟದಿಂದ (1229 ಕೋಟಿ ರೂ. ನಷ್ಟ) ಬಚಾವ್ ಮಾಡಲು, ಗ್ರಾಹಕರ ಹಿತದೃಷ್ಟಿಯಿಂದ ಈ ದರ ಏರಿಕೆ ಮಾಡಲಾಗಿದೆ. ಎಲ್ಲಾ ಐದು ವಿದ್ಯುತ್ ಕಂಪನಿಗಳಿಂದ ಯೂನಿಟ್ಗೆ 66 ಪೈಸೆ ಹೆಚ್ಚಳ ಮಾಡಬೇಕೆಂದು ಬೇಡಿಕೆ ಬಂದಿತ್ತು. ವಿದ್ಯುತ್ ನಿಯಂತ್ರಣ ಆಯೋಗ ಪರಿಶೀಲಿಸಿ ರೈತರು, ಗ್ರಾಹಕರು, ವಿದ್ಯುತ್ ಕಂಪನಿಗಳು, ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು ಮುಂತಾದವರಿಂದ ಅಹವಾಲು ಸ್ವೀಕರಿಸಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು.
ನಾಲ್ಕೂವರೆ ವರ್ಷದಲ್ಲಿ 6ನೇ ಬಾರಿ: 2009ರ ನವೆಂಬರ್ ತಿಂಗಳಿಂದ ಕಳೆದ ನಾಲ್ಕೂವರೆ ವರ್ಷದಲ್ಲಿ ವಿದ್ಯುತ್ ದರ ಹೆಚ್ಚಳವಾಗುತ್ತಿರುವುದು ಇದು 6ನೇ ಬಾರಿಯಾಗಿದೆ. ಈಗಾಗಲೇ ಬಸ್ ಪ್ರಯಾಣ ದರ ಏರಿಕೆಯಾಗಿದೆ. ನೀರಿನ ಶುಲ್ಕ ಹೆಚ್ಚಳ ಸಾಧ್ಯತೆ ಸದ್ಯದಲ್ಲೇ ಇದೆ. ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ದರ ಏರಿಕೆ ಇಲ್ಲ.
ಗೃಹ ಬಳಕೆ ಪ್ರಮಾಣ 30 ಯೂನಿಟಿಗಿಂತ ಕಡಿಮೆ ಇದ್ದರೆ 32 ಪೈಸೆ ಹೆಚ್ಚಳ ಮಾಡಲಾಗಿದೆ. ಇದಕ್ಕಿಂತ ಮೇಲಿದ್ದರೆ 30 ಪೈಸೆ ಹೆಚ್ಚಳ ನಿಗದಿ ಮಾಡಲಾಗಿದೆ. ನಗರ ಪ್ರದೇಶಗಳಲ್ಲಿ 30 ಯೂನಿಟ್ ವೊಳಗಿದ್ದರೆ 2.70 ಪೈಸೆ, 30-100 ಯೂನಿಟ್ ವರೆಗಿದ್ದರೆ 4 ರೂ. ಅದಕ್ಕಿಂತ ಜಾಸ್ತಿ ಇದ್ದರೆ 6.25 ರೂ. ಆಗುತ್ತದೆ. ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ 30 ರಿಂದ 40 ಪೈಸೆ ಹೆಚ್ಚಳ ಮಾಡಲಾಗಿದೆ. ನಗರದ ಅಪಾರ್ಟ್ ಮೆಂಟುಗಳಲ್ಲಿ 4.90 ಪೈಸೆ ಇದ್ದ ವಿದ್ಯುತ್ ದರವನ್ನು 5.35 ಪೈಸೆಗೆ ಏರಿಸಲಾಗಿದೆ.
ಲೋಡ್ ಶೆಡ್ಡಿಂಗ್ ಅನಿವಾರ್ಯ: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಪ್ರಮಾಣ ಹೆಚ್ಚಾಗಿ ಉತ್ಪಾದನೆ ಕೊರತೆ ಇರುವ ಕಾರಣ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಿ ಮುಂದುವರಿಯಲಿದೆ ಎಂದು ಕೆಇಆರ್ಸಿ ಅಧ್ಯಕ್ಷ ಶ್ರೀನಿವಾಸಮೂರ್ತಿ ಸ್ಪಷ್ಟಪಡಿಸಿದ್ದಾರೆ.
ಯಾವ ಎಸ್ಕಾಂನಲ್ಲಿ ಎಷ್ಟು ಏರಿಕೆ?:
ಬೆಂಗಳೂರು ವಿದ್ಯುತ್ ಸರಬರಾಜು ನಿಗಮ -ಬೆಸ್ಕಾಂ, ಹಾಸನ ವಿದ್ಯುತ್ ಸರಬರಾಜು ನಿಗಮ - ಹೆಸ್ಕಾಂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ -ಚೆಸ್ಕಾಂ, ಮಂಗಳೂರು ವಿದ್ಯುತ್ ಸರಬರಾಜು ನಿಗಮ - ಮೆಸ್ಕಾಂ ಮತ್ತು ಗುಲ್ಬರ್ಗ ವಿದ್ಯುತ್ ಸರಬರಾಜು ನಿಗಮ - ಗೆಸ್ಕಾಂ ವಲಯಗಳಲ್ಲಿ ಈ ದರ ನೀತಿ ಏಕ ರೀತಿಯಲ್ಲಿ ಮೇ 1ರಿಂದ ಜಾರಿಗೆ ಬಂದಿದೆ.
-
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications