ವಿದ್ಯುತ್ ದರ ಏರಿಕೆ ಮಧ್ಯೆ ಲೋಡ್ ಶೆಡ್ಡಿಂಗ್ ಕೊಡುಗೆ
ಬೆಂಗಳೂರು, ಮೇ 12- 'ಲೋಕಸಭೆ ಚುನಾವಣೆ ಮುಗಿಯಲಿ ಅಂತ್ಲೇ ಕಾಯ್ತಿದ್ದಿವಿ. ಹಾಗಾಗಿ ಇದೀಗ ಒಂದೊಂದೇ ಸರಕು/ಸೇವೆಗಳ ದರಗಳನ್ನು ಏರಿಸುತ್ತಿದ್ದೇವೆ' ಎಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಆಘಾತಕಾರಿ ಹೇಳಿಕೆ ನೀಡಿದ ಮೇಲೆ ವಿದ್ಯುತ್ ದರ ಈ ತಿಂಗಳಿಂದಲೇ ಜಾರಿಗೆ ಬರುವಂತೆ ಇಂದು ಏರಿಸಲಾಗಿದೆ.
ಹೌದು, ವಿದ್ಯುತ್ ದರವನ್ನು ಪ್ರತಿ ಯೂನಿಟ್ಗೆ 66 ಪೈಸೆ ಹೆಚ್ಚಿಸುವಂತೆ ವಿದ್ಯುತ್ ವಿತರಣೆ ಕಂಪನಿಗಳು ಕೆಇಆರ್ಸಿಗೆ ಪ್ರಸ್ತಾವನೆ ಸಲ್ಲಿಸಿದ್ದವು. ಅದರಂತೆ ರಾಜ್ಯದ ಎಲ್ಲ ಐದು ವಿದ್ಯುತ್ ವಿತರಣಾ ಕಂಪನಿಗಳ (ಎಸ್ಕಾಂ) ವ್ಯಾಪ್ತಿಯಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್ ಸಿ) ಇಂದು ಸೋಮವಾರ ನಿರೀಕ್ಷೆಯಂತೆ 32 ಪೈಸೆಯಷ್ಟು ದರ ಹೆಚ್ಚಳ ಮಾಡಿದೆ. ಆಯೋಗದ ಅಧ್ಯಕ್ಷ ಎಂಆರ್ ಶ್ರೀನಿವಾಸಮೂರ್ತಿ ದರ ಏರಿಕೆಯನ್ನು ಸುದ್ದಿಗೋಷ್ಠಿಯಲ್ಲಿ ಇದೀಗತಾನೆ ಪ್ರಕಟಿಸಿದ್ದಾರೆ.

ವಿದ್ಯುತ್ ಕಂಪನಿಗಳನ್ನು ನಷ್ಟದಿಂದ (1229 ಕೋಟಿ ರೂ. ನಷ್ಟ) ಬಚಾವ್ ಮಾಡಲು, ಗ್ರಾಹಕರ ಹಿತದೃಷ್ಟಿಯಿಂದ ಈ ದರ ಏರಿಕೆ ಮಾಡಲಾಗಿದೆ. ಎಲ್ಲಾ ಐದು ವಿದ್ಯುತ್ ಕಂಪನಿಗಳಿಂದ ಯೂನಿಟ್ಗೆ 66 ಪೈಸೆ ಹೆಚ್ಚಳ ಮಾಡಬೇಕೆಂದು ಬೇಡಿಕೆ ಬಂದಿತ್ತು. ವಿದ್ಯುತ್ ನಿಯಂತ್ರಣ ಆಯೋಗ ಪರಿಶೀಲಿಸಿ ರೈತರು, ಗ್ರಾಹಕರು, ವಿದ್ಯುತ್ ಕಂಪನಿಗಳು, ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು ಮುಂತಾದವರಿಂದ ಅಹವಾಲು ಸ್ವೀಕರಿಸಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು.
ನಾಲ್ಕೂವರೆ ವರ್ಷದಲ್ಲಿ 6ನೇ ಬಾರಿ: 2009ರ ನವೆಂಬರ್ ತಿಂಗಳಿಂದ ಕಳೆದ ನಾಲ್ಕೂವರೆ ವರ್ಷದಲ್ಲಿ ವಿದ್ಯುತ್ ದರ ಹೆಚ್ಚಳವಾಗುತ್ತಿರುವುದು ಇದು 6ನೇ ಬಾರಿಯಾಗಿದೆ. ಈಗಾಗಲೇ ಬಸ್ ಪ್ರಯಾಣ ದರ ಏರಿಕೆಯಾಗಿದೆ. ನೀರಿನ ಶುಲ್ಕ ಹೆಚ್ಚಳ ಸಾಧ್ಯತೆ ಸದ್ಯದಲ್ಲೇ ಇದೆ. ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ದರ ಏರಿಕೆ ಇಲ್ಲ.
ಗೃಹ ಬಳಕೆ ಪ್ರಮಾಣ 30 ಯೂನಿಟಿಗಿಂತ ಕಡಿಮೆ ಇದ್ದರೆ 32 ಪೈಸೆ ಹೆಚ್ಚಳ ಮಾಡಲಾಗಿದೆ. ಇದಕ್ಕಿಂತ ಮೇಲಿದ್ದರೆ 30 ಪೈಸೆ ಹೆಚ್ಚಳ ನಿಗದಿ ಮಾಡಲಾಗಿದೆ. ನಗರ ಪ್ರದೇಶಗಳಲ್ಲಿ 30 ಯೂನಿಟ್ ವೊಳಗಿದ್ದರೆ 2.70 ಪೈಸೆ, 30-100 ಯೂನಿಟ್ ವರೆಗಿದ್ದರೆ 4 ರೂ. ಅದಕ್ಕಿಂತ ಜಾಸ್ತಿ ಇದ್ದರೆ 6.25 ರೂ. ಆಗುತ್ತದೆ. ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ 30 ರಿಂದ 40 ಪೈಸೆ ಹೆಚ್ಚಳ ಮಾಡಲಾಗಿದೆ. ನಗರದ ಅಪಾರ್ಟ್ ಮೆಂಟುಗಳಲ್ಲಿ 4.90 ಪೈಸೆ ಇದ್ದ ವಿದ್ಯುತ್ ದರವನ್ನು 5.35 ಪೈಸೆಗೆ ಏರಿಸಲಾಗಿದೆ.
ಲೋಡ್ ಶೆಡ್ಡಿಂಗ್ ಅನಿವಾರ್ಯ: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಪ್ರಮಾಣ ಹೆಚ್ಚಾಗಿ ಉತ್ಪಾದನೆ ಕೊರತೆ ಇರುವ ಕಾರಣ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಿ ಮುಂದುವರಿಯಲಿದೆ ಎಂದು ಕೆಇಆರ್ಸಿ ಅಧ್ಯಕ್ಷ ಶ್ರೀನಿವಾಸಮೂರ್ತಿ ಸ್ಪಷ್ಟಪಡಿಸಿದ್ದಾರೆ.
ಯಾವ ಎಸ್ಕಾಂನಲ್ಲಿ ಎಷ್ಟು ಏರಿಕೆ?:
ಬೆಂಗಳೂರು ವಿದ್ಯುತ್ ಸರಬರಾಜು ನಿಗಮ -ಬೆಸ್ಕಾಂ, ಹಾಸನ ವಿದ್ಯುತ್ ಸರಬರಾಜು ನಿಗಮ - ಹೆಸ್ಕಾಂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ -ಚೆಸ್ಕಾಂ, ಮಂಗಳೂರು ವಿದ್ಯುತ್ ಸರಬರಾಜು ನಿಗಮ - ಮೆಸ್ಕಾಂ ಮತ್ತು ಗುಲ್ಬರ್ಗ ವಿದ್ಯುತ್ ಸರಬರಾಜು ನಿಗಮ - ಗೆಸ್ಕಾಂ ವಲಯಗಳಲ್ಲಿ ಈ ದರ ನೀತಿ ಏಕ ರೀತಿಯಲ್ಲಿ ಮೇ 1ರಿಂದ ಜಾರಿಗೆ ಬಂದಿದೆ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications