ಅಬಕಾರಿ ಸಚಿವ ಎಚ್.ನಾಗೇಶ್ ರಿಗೂ ಕೊರೊನಾವೈರಸ್ ಭೀತಿ!
ಬೆಂಗಳೂರು, ಆಗಸ್ಟ್.05: ಕರ್ನಾಟಕ ರಾಜ್ಯ ಅಬಕಾರಿ ಸಚಿವ ಎಚ್.ನಾಗೇಶ್ ಅವರ ಆಪ್ತ ಸಹಾಯಕ ಮತ್ತು ಇಬ್ಬರು ಗನ್ ಮ್ಯಾನ್ ಸೇರಿ ಮೂವರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.
Recommended Video
ರಾಜ್ಯದ ಅಬಕಾರಿ ಸಚಿವ ಎಚ್.ನಾಗೇಶ್ ಅವರ ಮೂವರು ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ವಿಕಾಸಸೌಧದಲ್ಲಿ ಇರುವ ಅಬಕಾರಿ ಸಚಿವರ ಕೊಠಡಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಸಿಹಿಸುದ್ದಿ: 35 ರೂಪಾಯಿಗೆ ಕೊರೊನಾವೈರಸ್ ಸೋಂಕಿತರಿಗೆ ಔಷಧಿ!
ಆಪ್ತ ಸಹಾಯಕ ಸೇರಿದಂತೆ ಇಬ್ಬರು ಗನ್ ಮ್ಯಾನ್ ಗಳ ಜೊತೆಗೆ ಪ್ರಾಥಮಿಕ ಸಂಪರ್ಕ ಹೊಂದಿರುವ ಹಿನ್ನೆಲೆ ಸಚಿವರಿಗೂ ಸೋಂಕು ತಗಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಚಿವ ಎಚ್.ನಾಗೇಶ್ ಅವರು ಗೃಹ ದಿಗ್ಬಂಧನದಲ್ಲಿದ್ದಾರೆ.
ಜನಪ್ರತಿನಿಧಿಗಳಿಗೆ ಕೊರೊನಾವೈರಸ್ ಆತಂಕ:
ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾವೈರಸ್ ಸೋಂಕು ತಗಲಿರುವ ಹಿನ್ನೆಲೆ ಇಬ್ಬರು ನಾಯಕರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ನಾಯಕರ ಜೊತೆಗೆ ಸಂಪರ್ಕ ಹೊಂದಿರುವ ಸಚಿವರು ಮತ್ತು ಸಿಬ್ಬಂದಿ ಸಹ ಹೋಮ್ ಕ್ವಾರೆಂಟೈನ್ ನಲ್ಲಿದ್ದಾರೆ.