'ಚಕ್ರವರ್ತಿ ಸೂಲಿಬೆಲೆಗೆ ಸಂಸದರಾಗೋ ಹುಚ್ಚಿಲ್ಲ!' ಬೆಂಬಲಕ್ಕೆ ನಿಂತ ದೇವೇಗೌಡ್ರು
Recommended Video
ಬೆಂಗಳೂರು, ಅಕ್ಟೋಬರ್ 05: ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಸಂಸದ ಡಿವಿ ಸದಾನಂದ ಗೌಡ ಅವರು ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಮಾಡಿದ್ದ ಟ್ವೀಟ್ ಇನ್ನೂ ಚರ್ಚೆಯಲ್ಲಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು, "ಚಕ್ರವರ್ತಿ ಸೂಲಿಬೆಲೆ ಅವರೊಬ್ಬ ಉತ್ತಮ ವಾಗ್ಮಿ. ಅವರನ್ನು ದೇಶದ್ರೋಹಿ ಎಂದು ಕರೆದಿರುವುದು ಸರಿಯಲ್ಲ. ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಒಬ್ಬ ಪ್ರಜೆಯಾಗಿ ದನಿ ಎತ್ತಿದ್ದಾರೆ. ಆದರೆ ಅವರಿಗೆ ಶಾಸಕರಾಗುವ ಅಥವಾ ಸಂಸದರಾಗುವ ಹುಚ್ಚಿಲ್ಲ" ಎಂದು ಬೆಂಬಲ ಸೂಚಿಸಿದ್ದಾರೆ.
ಡಿವಿ ಸದಾನಂದಗೌಡರ ಹೇಳಿಕೆಯನ್ನು ಈ ಮೂಲಕ ವಿರೋಧಿಸಿದ್ದಾರೆ.

ಚಕ್ರವರ್ತಿ ಟ್ವೀಟ್
'ರಾಜ್ಯಕ್ಕೆ ಕೇಂದ್ರದಿಂದ ನೆರೆ ಪರಿಹಾರ ಕೊಡಿಸುವಲ್ಲಿ ಬಿಜೆಪಿ ಸಂಸದರು ಎಡವಿದ್ದಾರೆ, ಮೋದಿ ನಾಮಬಲದಿಂದ ಗೆದ್ದ ಅವರಿಗೆ ಸ್ವಂತ ಶಕ್ತಿ ಇಲ್ಲ' ಎಂದು ಚಕ್ರವರ್ತಿ ಸೂಲಿಬೆಲೆ ಟ್ವೀಟ್ ಮಾಡಿದ್ದರು.

ದೇಶದ್ರೋಹಿ ಎಂದಿದ್ದ ಸದಾನಂದಗೌಡ
ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದ ಸಂಸದ ಡಿವಿ ಸದಾನಂದ ಗೌಡ, "ಮಂತ್ರಿಗಿರಿ ಭಿಕ್ಷೆ ಅಂತ ನಮಗೆ ಹೇಳುವವರು, ಚಪ್ಪಾಳೆ ಗಿಟ್ಟಿಸಿಕೊಂಡು ದೇಶ ಕಟ್ಟುವವರು ಎಂದು ಹೇಳಿಕೊಳ್ಳುವವರು. ಈ ರೀತಿಯ ಮಾತುಗಳು ಸರಿಯಲ್ಲ. ಹಾರಿಕೆ ಸುದ್ದಿ ಹರಡುವವರು ದೇಶ ದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದಾರೆ. ಇವರೆಲ್ಲಾ ಅದೇ ಬ್ರಾಂಡ್ಗೆ ಸೇರುತ್ತಾರೆ" ಎಂದಿದ್ದರು.

ಚಕ್ರವರ್ತಿ ಪರ ನಿಂದ ಸಾಮಾಜಿಕ ಮಾಧ್ಯಮ
ಈ ಹೇಳಿಕೆಯ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಸದಾನಂದ ಗೌಡರ ಹೇಳಿಕೆಯ ವಿರುದ್ಧ ಮತ್ತು ಪರ ಚರ್ಚೆಗಳಾದವಾದರೂ ಹೆಚ್ಚಿನ ಜನ ಚಕ್ರವರ್ತಿ ಸೂಲಿಬೆಲೆ ಅವರ ಪರ ನಿಂತರು. ಸಂಸದರಾಗಿ ಒಬ್ಬ ವ್ಯಕ್ತಿಯನ್ನು ಹೀಗೆ ದೇಶದ್ರೋಹಿ ಎಂದು ಘೋಷಿಸುವುದು ಎಷ್ಟು ಸರಿ? ಕೇಂದ್ರ ಸರ್ಕಾರದ ವಿರುದ್ಧ ಮಾತನಾಡುವುದೇ ಅಪರಾದವೇ ಎಂಬಿತ್ಯಾದಿ ಪ್ರಶ್ನೆಗಳು ಎದ್ದವು.

ಕೊನೆಗೂ ಕ್ಷಮೆ ಯಾಚಿಸಿದ ಡಿವಿಎಸ್
ಈ ಬೆಳವಣಿಗೆಯ ನಂತರ ಬಿಜೆಪಿಯವರೇ ಕೆಲವರು ತಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದನ್ನು ನೋಡಿ ಎಚ್ಚೆತ್ತುಕೊಂಡ ಸದಾನಂದ ಗೌಡ, 'ನಾನು ಚಕ್ರವರ್ತಿ ಸೂಲಿಬೆಲೆ ಅವರ ಹೆಸರನ್ನೇ ಪ್ರಸ್ತಾಪಿಸಿರಲಿಲ್ಲ. ಆದರೆ ಮಾಧ್ಯಮದವರು ಅವರ ಹೆಸರನ್ನು ಸುಮ್ಮನೆ ಹಾಕುತ್ತಿದ್ದಾರೆ. ಹಾರಿಕೆ ಸುದ್ದಿ ಹರಡುವವರು ದೇಶದ್ರೋಹಿಗಳು ಎನ್ನುವುದು ಗಾಂಧೀಜಿ ಅವರ ಮಾತು. ಮೋದಿ ಬಗ್ಗೆ ಟೀಕೆಗಳನ್ನು ಮಾಡಿರುವುದಕ್ಕೆ ಅವರ ಸಂಪುಟದ ಸಚಿವನಾಗಿ ಹಾಗೆ ಪ್ರತಿಕ್ರಿಯೆ ನೀಡಿದ್ದೇನೆ. ಇದರಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ" ಎಂದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications