ವೈದ್ಯರ ರಕ್ಷಣೆಗೆ ಸರ್ಕಾರ ಬದ್ಧ, ವೈದ್ಯರ ಮೇಲೆ ಹಲ್ಲೆಗೈದವರ ವಿರುದ್ಧ ಕ್ರಮ:ಸುಧಾಕರ್
ಬೆಂಗಳೂರು, ಆಗಸ್ಟ್ 25: ವೈದ್ಯರಿಗೆ ಭದ್ರತೆ ನೀಡಲು ಮತ್ತು ವೈದ್ಯರ ಸುರಕ್ಷತೆಗೆ ಕ್ರಮ ಕೈಗೊಳ್ಳಲು ಸರ್ಕಾರ ಕಟಿಬದ್ಧವಾಗಿದೆ. ವಿವಿಧ ಕಾರಣಗಳಿಗೆ ವೈದ್ಯರ ಮೇಲೆ ಹಲ್ಲೆ ಮಾಡಿದ ಪ್ರಕರಣಗಳಲ್ಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಗುರುವಾರ 'ಯುವ ಸಂವಾದ' ಕಾರ್ಯಕ್ರಮದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು. ವಿದ್ಯಾರ್ಥಿಗಳ ಆಶೋತ್ತರಗಳನ್ನು ತಿಳಿದುಕೊಳ್ಳುವ ಜತೆಗೆ ಅವರ ಸಮಸ್ಯೆಗಳಿಗೆ ಪರಿಹಾರ ಕ್ರಮ ವಹಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಲವು ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಆರೋಗ್ಯ ಸಚಿವನಾಗಿ ವೈದ್ಯರ ಸುರಕ್ಷತೆಗೆ ಎಚ್ಚರಿಕೆ ಕ್ರಮ ವಹಿಸಿದ್ದೇನೆ. ಕೆಲ ರೋಗಿಗಳು ಮೃತಪಟ್ಟಾಗ ವೈದ್ಯರಿಂದ ತಪ್ಪಾಗಿದೆ ಎಂದೇ ಕುಟುಂಬದವರು ಆಲೋಚಿಸುತ್ತಾರೆ. ಆದರೆ ವಾಸ್ತವವಾಗಿ ಪ್ರತಿ ವೈದ್ಯರು ತಮ್ಮ ಶಕ್ತಿಮೀರಿ ಪ್ರಯತ್ನ ಮಾಡಿ ರೋಗಿಯನ್ನು ಬದುಕಿಸುವ ಯತ್ನ ಮಾಡುತ್ತಾರೆ ಎಂದರು.
ವಿನಾಕಾರಣ ವೈದ್ಯರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾನೂನಿನ ಅವಕಾಶವಿದೆ. ಈ ರೀತಿ ಹಲ್ಲೆ ಮಾಡಿದ ಘಟನೆಗಳಲ್ಲಿ ಸರ್ಕಾರ ಕಠಿಣ ಕ್ರಮ ವಹಿಸಿದೆ. ಹೀಗಾಗಿ ಇತ್ತೀಚೆಗೆ ಇಂತಹ ಹಲ್ಲೆ ಪ್ರಕರಣಗಳು ಕಡಿಮೆಯಾಗಿದೆ. ಅಲ್ಲದೇ ಈ ಬಗ್ಗೆ ಜಾಗೃತಿಯು ಮೂಡಿದೆ.
ವೈದ್ಯರ ಮೇಲೆ ಹಲ್ಲೆ ಮಾಡಿದವರಿಗೆ ಹಲವು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಬಹುದು. ಈ ಕ್ರಮಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಬೇಕು. ಸರ್ಕಾರ ಸದಾ ವೈದ್ಯರ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳಿಗೆ ಕೋವಿಡ್ ಸವಾಲಿನ ಅನುಭವ
ಪ್ರಸ್ತುತ ಕಾಲಘಟ್ಟದ ವೈದ್ಯಕೀಯ ವಿದ್ಯಾರ್ಥಿಗಳು ಕೋವಿಡ್ ಸಾಂಕ್ರಾಮಿಕದ ಪರಿಸ್ಥಿತಿಯ ಹೊಸ ಅನುಭವವನ್ನು ಪಡೆದುಕೊಂಡಿದ್ದಾರೆ. ಕಳೆದ ನೂರು ವರ್ಷದ ಹಿಂದಿನ ಬ್ಯಾಚ್ ಕೂಡ ಈ ಸನ್ನಿವೇಶದ ಸವಾಲನ್ನು ಎದುರಿಸಿರಲಿಲ್ಲ. ಆದ್ದರಿಂದ 2020ನೇ ಸಾಲಿನಲ್ಲಿ ವ್ಯಾಸಂಗ ಮಾಡಿ ವೈದ್ಯಕೀಯ ವಿದ್ಯಾರ್ಥಿಗಳು ಈ ದೊಡ್ಡ ಸವಾಲನ್ನು ಎದುರಿಸುವ ಅನುಭವ ಹೊಂದಿದ್ದಾರೆ ಎಂದರು.

ಸದ್ಯ 900 ಜನರಿಗೆ 1 ವೈದ್ಯರಿದ್ದಾರೆ
ಎಂಜಿನಿಯರಿಂಗ್ನಂತೆ ಹೆಚ್ಚು ಮೆಡಿಕಲ್ ಕಾಲೇಜುಗಳನ್ನು ಆರಂಭಿಸುವುದರಿಂದ ನಿರುದ್ಯೋಗ ಉಂಟಾಗುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಹಿಂದೆ 2,300 ಜನಸಂಖ್ಯೆಗೆ ಒಬ್ಬ ವೈದ್ಯರಿದ್ದರು. ಈಗ 900 ಜನಸಂಖ್ಯೆಗೆ ಒಬ್ಬ ವೈದ್ಯರಿದ್ದಾರೆ. ಆಯುಷ್ ವೈದ್ಯರನ್ನು ಈ ಲೆಕ್ಕದಲ್ಲಿ ಪಡಿಗಣಿಸಿದರೆ 700ಜನರಿಗೆ ಒಬ್ಬರು ವೈದ್ಯರು ಇದ್ದಂತಾಗುತ್ತದೆ. 130 ಕೋಟಿ ಜನರು ಇರುವ ದೇಶದಲ್ಲಿ ಹೆಚ್ಚಿನ ಮೆಡಿಕಲ್ ಕಾಲೇಜುಗಳು ಬೇಕಾಗುತ್ತದೆ. ಅಲ್ಲದೆ ಮೆಡಿಕಲ್ ಟೂರಿಸಂ ಕೂಡ ಈಗ ಬೆಳೆಯುತ್ತಿದೆ. ಒಂದು ಮೆಡಿಕಲ್ ಕಾಲೇಜಿಗೆ 750 ಕೋಟಿ ರೂ. ನಷ್ಟು ಖರ್ಚಾಗುತ್ತದೆ. ಈ ಹೊರೆ ಕಡಿಮೆ ಮಾಡಲು ಪಿಪಿಪಿ ಮಾದರಿಯಲ್ಲಿ ಕಾಲೇಜು ನಿರ್ಮಿಸುವ ಪ್ರಸ್ತಾಪವಿದೆ ಎಂದು ವಿವರಿಸಿದರು.

9ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ
ರಾಜ್ಯದಲ್ಲಿ ಇನ್ನೂ 9 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜುಗಳು ಸ್ಥಾಪನೆ ಆಗಿಲ್ಲ. ಆದ್ದರಿಂದ ಸರ್ಕಾರವು ಅಗತ್ಯದ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮೆಡಿಕಲ್ ಕಾಲೇಜುಗಳನ್ನು ನಿರ್ಮಿಸಲು ಚಿಂತನೆ ನಡೆಸಿದೆ. ದಾವಣಗೆರೆ, ಉಡುಪಿ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂತಹ ಕಾಲೇಜು ಆರಂಭಿಸುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ ಎಂಜಿನಿಯರಿಂಗ್ನಂತೆ ವೈದ್ಯ ಕ್ಷೇತ್ರದಲ್ಲಿ ಉದ್ಯೋಗ ಇಳಿಕೆಯಾಗುವುದಿಲ್ಲ. ವೈದ್ಯರಿಗೆ ಇನ್ನಷ್ಟು ಹೆಚ್ಚು ಅವಕಾಶಗಳು ಸೃಷ್ಟಿಯಾಗುತ್ತಿವೆ. ವೈದ್ಯರಿಗೆ ನಿರುದ್ಯೋಗ ಸಮಸ್ಯೆ ಎಂದಿಗೂ ಎದುರಾಗುವುದಿಲ್ಲ ಎಂದು ಹೇಳಿದರು.

ಯುವಜನರು ರಾಜಕೀಯಕ್ಕೆ ಬನ್ನಿ
ಯುವಜನರನ್ನು ರಾಜಕೀಯಕ್ಕೆ ನೀವೆಲ್ಲರೂ ರಾಜಕೀಯ ಪ್ರವೇಶ ಮಾಡಬಹುದು. ಜನರು ಆರಿಸಿದ ಜನಪ್ರತಿನಿಧಿಯಿಂದಲೇ ಕಾನೂನುಗಳು ಜಾರಿ ಆಗುತ್ತವೆ. ಜನರಿಗಾಗಿ ಸೇವೆ ಮಾಡುವ, ಶಿಕ್ಷಣ ಹೊಂದಿರುವ ವ್ಯಕ್ತಿಯನ್ನು ರಾಜಕೀಯಕ್ಕೆ ಆರಿಸದಿದ್ದರೆ ಸಮಸ್ಯೆ ಉಂಟಾಗುತ್ತದೆ. ರಾಜಕೀಯಕ್ಕೆ ಬರುವುದು ಬಹಳ ಶ್ರಮದಾಯಕ ಎಂಬುದು ನಿಜ. ಪ್ರಧಾನಿ ನರೇಂದ್ರ ಮೋದಿಯವರು ಚಹಾ ಮಾರುವುದರಿಂದ ಆರಂಭವಾಗಿ ಪ್ರಧಾನಿಯಾಗುವವರೆಗೆ ಬೆಳೆದಿದ್ದಾರೆ. ಇದೇ ಪ್ರಜಾಪ್ರಭುತ್ವದ ಸೌಂದರ್ಯ. ಉತ್ತಮ ಜಗತ್ತಿನ ನಿರ್ಮಾಣಕ್ಕಾಗಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯಕ್ಕೆ ಬರಬೇಕು ಎಂದು ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಉತ್ತರಿಸುವ ಮೂಲಕ ಅವರು ಕರೆ ನೀಡಿದರು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications