ಬಿಬಿಎಂಪಿ ವಿಭಜನೆ ಬಗ್ಗೆ ಶೀಘ್ರವೇ ನಿರ್ಧಾರ: ಕುಮಾರಸ್ವಾಮಿ
ಬೆಂಗಳೂರು, ಜೂನ್ 28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಹಾಗೂ ಆಡಳಿತ ವಿಕೇಂದ್ರಿಕರಣ ಕುರಿತಂತೆ ಬಿಬಿಎಂಪಿ ಪುನರ್ ವಿಂಗಡಣಾ ಸಮಿತಿಯು ತನ್ನ ಅಂತಿಮ ವರದಿ ಸಲ್ಲಿಸಿದೆ.
ಈ ವರದಿ ಪರಿಶೀಲಿಸಿ, ಅಧ್ಯಯನ ನಡೆಸಿದ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಿಬಿಎಂಪಿಯನ್ನು ಐದು ಕಾರ್ಪೋರೇಷನ್ಗಳಾಗಿ ವಿಭಜಿಸಬೇಕೆಂಬ ಕುರಿತು ಬಿ.ಎಸ್. ಪಾಟೀಲ್ ನೇತೃತ್ವದ ತಜ್ಞರ ಸಮಿತಿ ಶಿಫಾರಸು ಅಂತಿಮ ವರದಿ ಸಲ್ಲಿಸಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್ ಪಾಟೀಲ್ ಅಧ್ಯಕ್ಷರಾಗಿರುವ ಸಮಿತಿ ಜತೆ ಮುಖ್ಯಮಂತ್ರಿ ಅವರು ಸಭೆ ನಡೆಸಿದರು.
ಅಂತಿಮ ವರದಿ ಪ್ರಕಾರ:
* ಬಿಬಿಎಂಪಿಯನ್ನು ಐದು ಕಾರ್ಪೋರೇಷನ್ಗಳಾಗಿ ವಿಭಜಿಸಬೇಕು. * ಬೆಂಗಳೂರಿನ ಸಮಗ್ರತೆ ಕಾಪಾಡಲು ಗ್ರೇಟರ್ ಬೆಂಗಳೂರು ಕಾರ್ಪೋರೇಷನ್ ಅಡಿಯಲ್ಲಿ ತರಬೇಕು,
* ಮೂರು ಜೋನ್ ಗಳಲ್ಲಿ ಕಾರ್ಪೋರೇಷನ್-ನಗರಪಾಲಿಕೆ-ಕಾರ್ಪೋರೇಟರ್ ನೇತೃತ್ವದ ಆಡಳಿತ ವ್ಯವಸ್ಥೆ.
* ಬೆಂಗಳೂರು ಆಡಳಿತಕ್ಕೆ ಪ್ರತ್ಯೇಕವಾದ ಕಾಯಿದೆ.
* ಬಿಬಿಎಂಪಿ 5000- 6000 ಕೋಟಿ ರೂ. ಕಂದಾಯ ಸಂಗ್ರಹದ ಸಾಮರ್ಥ್ಯ ಹೊಂದಿದೆ. ಹಳೆ ನಗರ ಪ್ರದೇಶದಲ್ಲಿ 30,000 ಜನಸಂಖ್ಯೆಗೆ ಅನುಗುಣವಾಗಿ ವಾರ್ಡ್ ಪುನರ್ ವಿಂಗಡಣೆ ಮಾಡಿ 400 ವಾರ್ಡ್ ರಚನೆಗೂ ಸಮಿತಿ ಶಿಫಾರಸು
* ಬಿಬಿಎಂಪಿ ಅಧಿಕಾರಿಗಳ ನೇಮಕಾತಿ ವಿಷಯದಲ್ಲೂ ಸುಧಾರಣೆಯಾಗಬೇಕು. * ಪೌರ ಕಾರ್ಮಿಕ ಹೊರತುಪಡಿಸಿ ಉಳಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮಾಡುವುದು ಸೂಕ್ತ
* ಗ್ರೇಟರ್ ಬೆಂಗಳೂರು ಅಥಾರಿಟಿಗೆ ಮೇಯರ್ ಆಯ್ಕೆ ಜನರಿಂದಲೇ ಆಗಬೇಕು ಮತ್ತು ಮೇಯರ್ ಅಧಿಕಾರಾವಧಿ 5 ವರ್ಷಗಳಿಗೆ ನಿಗದಿಯಾಗಬೇಕು
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ












Click it and Unblock the Notifications