ಬೆಂಗಳೂರಿನ ಪ್ರತಿ ಠಾಣೆಗೂ ಪಿಂಕ್ ಹೊಯ್ಸಳ ವಾಹನ: ಸಿದ್ದರಾಮಯ್ಯ
ಬೆಂಗಳೂರು, ಜುಲೈ 11: ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯವನ್ನು ನಿಯಂತ್ರಣಕ್ಕೆ ತರಲು ನಗರದ ಪ್ರತಿ ಪೊಲೀಸ್ ಠಾಣೆಯಲ್ಲೂ ಪಿಂಕ್ ಹೊಯ್ಸಳ ವಾಹನವನ್ನು ನಿಯೋಜಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಹಿರಿಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿರುವ 110 ಪೊಲೀಸ್ ಠಾಣೆಗಳಿಗೂ ಇನ್ನೊಂದು ವಾರದಲ್ಲಿ ಪಿಂಕ್ ಹೊಯ್ಸಳ ವಾಹನ ನಿಯೋಜಿಸಲಾಗುವುದು ಎಂದು ಅವರು ಹೇಳಿದ್ದಾರೆ.

ರಾಜಧಾನಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯವನ್ನು ನಿಯಂತ್ರಣಕ್ಕೆ ತರಲು ಕರ್ನಾಟಕ ಸರ್ಕಾರವು ಏಪ್ರಿಲ್ ತಿಂಗಳಿನಲ್ಲಿ ಆರಂಭಿಸಿದ ಸುರಕ್ಷಾ ಆಪ್ ಮತ್ತು 'ಪಿಂಕ್ ಹೊಯ್ಸಳ' ವಾಹನ ಸೌಲಭ್ಯದ ಕುರಿತು ಬೆಂಗಳೂರಿನಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.












Click it and Unblock the Notifications