ಕೆಆರ್ಎಸ್, ಕಬಿನಿ ಜಲಾಶಯಗಳಿಂದ ಕುಡಿಯಲು ನೀರು, ಗದ್ದೆಗಳಿಗಿಲ್ಲ
ಬೆಂಗಳೂರು, ಆಗಸ್ಟ್ 09 : ನಾಲೆಗಳಿಗೆ ನೀರು ಹರಿಸುವಂತೆ ರೈತರ ಪ್ರತಿಭಟನೆಗೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದ್ದು, ಕೆಆರ್ ಎಸ್, ಕಬಿನಿ, ಹಾರಂಗಿ ಹೇಮಾವತಿ ಜಲಾಶಯಗಳಿಂದ ಕೆರೆ, ನಾಲೆಗಳಿಗೆ ನೀರು ಹರಿಸಲು ತೀರ್ಮಾನಿಸಿದೆ.
ಕುಡಿಯುವ ನೀರಿಗಾಗಿ, ಜಾನುವಾರುಗಳಿಗೆ ಹಾಗೂ ಅಂತರ್ಜಲದ ಮಟ್ಟ ಹೆಚ್ಚಿಸಲು ನಾಲೆಗಳಿಗೆ ಬುಧವಾರ ಮಧ್ಯರಾತ್ರಿಯಿಂದ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಜಲಾಶಯಗಳಿಂದ ನೀರು ಹರಿಸುವ ಸಂಬಂಧ ಇಂದು (ಬುಧವಾರ) ನಡೆದ ಸಭೆಯಲ್ಲಿ ಹೇಳಿದರು.

ಕೆರೆ-ಕಟ್ಟೆಗಳಿಗೆ ಹರಿಸಿದ ನೀರನ್ನು ಭತ್ತ ಕಬ್ಬು ಬೆಳೆಯಲು ಬಳಸಬೇಡಿ, ಅದಕ್ಕೆ ನೀರು ಹರಿಸಲು ಸಾಧ್ಯವಾಗುವುದಿಲ್ಲ. ಮಳೆಯ ಆಧಾರಿತ ಬೆಳೆಗಳನ್ನು ಮಾತ್ರ ಬೆಳೆಯುವಂತೆ ರೈತರಲ್ಲಿ ಮನವಿ ಮಾಡಿದರು.
ಕಬಿನಿ, ಕೆಆರ್ ಎಸ್, ಹಾರಂಗಿ ಹಾಗೂ ಹೇಮಾವತಿ ನಾಲ್ಕು ಜಲಾಶಯಗಳಲ್ಲಿ 45 ಟಿಎಂಸಿ ನೀರಿದ್ದು, ಒಳ ಹರಿವು ಕಡಿಮೆಯಿದೆ. ನಾಲ್ಕೂ ಅಚ್ಚುಕಟ್ಟು ಪ್ರದೇಶದಲ್ಲಿ ಸಾವಿರಾರು ಕೆರೆಗಳಿವೆ. ಎಷ್ಟು ಪ್ರಮಾಣದಲ್ಲಿ ನೀರು ಹರಿಸಬೇಕೆಂದು ಅಧಿಕಾರಿಗಳು ನಿರ್ಧರಿಸಲಿದ್ದಾರೆ. ನೀರು ಬಿಟ್ಟ ಕೂಡಲೇ ಗದ್ದೆಗಳಿಗೆ ಹಾಯಿಸಬಾರದು ಎಂದರು.
ಸಚಿವರಾದ ಎಂ.ಬಿ.ಪಾಟೀಲ, ಕೃಷ್ಣಬೈರೇಗೌಡ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಪ್ಪ, ಸಂಸದ ಪುಟ್ಟರಾಜು, ಶಾಸಕರಾದ ನರೇಂದ್ರಸ್ವಾಮಿ, ಪುಟ್ಟಣ್ಣಯ್ಯ, ಮರಿತಿಬ್ಬೇಗೌಡ, ಅಂಬರೀಶ್, ಶ್ರೀಕಂಠೇಗೌಡ, ಚಲುವರಾಯಸ್ವಾಮಿ ಸೇರಿದಂತೆ ಇತರೆ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications