ರೇಷ್ಮೆ ರೀಲರ್ಸ್, ಟ್ರೇಡರ್ಸ್ಗೆ ಸಂತಸದ ಸುದ್ದಿ ನೀಡಿದ ಸರ್ಕಾರ
ಬೆಂಗಳೂರು ಮೇ 9: ಕೋವಿಡ್ -19 ನಿಂದ ಸಂಕಷ್ಟಕ್ಕೆ ಸಿಲುಕಿರುವ ರೇಷ್ಮೆ ರೀಲರ್ಸ್ ಹಾಗೂ ಟ್ರೇಡರ್ಸ್ ಗಳಿಗೆ ರೇಷ್ಮೆ ಇಲಾಖೆ ಸಂತಸದ ಸುದ್ದಿ ನೀಡಿದೆ.
Recommended Video
ಈ ಕುರಿತು ಶನಿವಾರ ರಿಲರ್ಸ್ ಹಾಗೂ ಟ್ರೇಡರ್ಸ್ ಗಳ ಜೊತೆ ಪ್ರತ್ಯೇಕ ಸಭೆ ನಡೆಸಿದ ಸಚಿವ ಡಾ. ನಾರಾಯಣಗೌಡ, ಸಮಸ್ಯೆಗಳನ್ನು ಆಲಿಸಿ ಪರಿಹಾರವನ್ನೂ ಸೂಚಿಸಿದ್ದಾರೆ.
ಸಚಿವರು ತೆಗೆದುಕೊಂಡ ನಿರ್ಧಾರದಿಂದ ನೂಲುಬಿಚ್ಚಣಿಕೆದಾರರು (ರೀಲರ್ಸ್) ಹಾಗೂ ಟ್ರೇಡರ್ಸ್ ಸಂತಸಗೊಂಡಿದ್ದಾರೆ. ಅಡಮಾನ ಸಾಲ ಮಿತಿ ಈ ವರೆಗೆ ಒಂದು ಲಕ್ಷ ರೂ. ಇತ್ತು. ಅದನ್ನ ಈಗ 2 ಲಕ್ಷ ರೂಪಾಯಿಗೆ ಏರಿಕೆ ಮಾಡುವುದಾಗಿ ಸಚಿವರು ಸಭೆಯಲ್ಲಿ ತಿಳಿಸಿದ್ದಾರೆ. ರೇಷ್ಮೆ ಗೆ ಹೆಚ್ಚಿನ ದರ ನಿಗದಿ ಮಾಡುವ ಬಗ್ಗೆಯೂ ಪರಿಶೀಲಿಸುವ ಭರವಸೆಯನ್ನ ಸಚಿವರು ನೀಡಿದ್ದಾರೆ. ಆ ಬಳಿಕ ಟ್ರೇಡರ್ಸ್ ಗಳ ಜೊತೆ ಸಭೆ ನಡೆಸಿ ಕುಂದುಕೊರತೆ ಆಲಿಸಿದ್ದಾರೆ.

ಹೊರ ರಾಜ್ಯಗಳಲ್ಲಿ ವಹಿವಾಟು ನಡೆಸುವುದು ಕಷ್ಟವಾಗಿದೆ
ಹೊರ ರಾಜ್ಯಗಳಿಗೆ ರೇಷ್ಮೆ ಸಾಗಿಸಲು ಸಾಧ್ಯವಾಗುತ್ತಿಲ್ಲ. ಕೋವಿಡ್ 19 ಬರುವುದಕ್ಕು ಮುನ್ನ ಹೆಚ್ಚಿನ ಬೆಲೆಗೆ ರೇಷ್ಮೆ ಖರೀದಿಸಲಾಗಿತ್ತು. ಈಗ ಹೊರ ರಾಜ್ಯಗಳಲ್ಲಿ ವಹಿವಾಟು ನಡೆಸುವುದು ಕಷ್ಟವಾಗಿದೆ. ಅಲ್ಲದೆ ಹೊರ ರಾಜ್ಯಗಳಲ್ಲಿ ನಡೆಸಿದ ವಹಿವಾಟಿನ ಹಣ ಕೂಡ ಬರದೆ ಬಾಕಿಯಾಗಿದೆ ಎಂದು ಸಚಿವರಲ್ಲಿ ಟ್ರೇಡರ್ಸ್ ಮನವಿ ಮಾಡಿದ್ರು.

ರೇಷ್ಮೆ ದರ ಕುಸಿಯುವ ಸಾಧ್ಯತೆ ಇದೆ
ಇದರಿಂದ ಹೊಸದಾಗಿ ಖರೀದಿಗು ಸಮಸ್ಯೆ ಆಗಿದೆ. ಲಾಕ್ ಡೌನ್ ಮುಗಿದ ತಕ್ಷಣ ಚೀನಾ, ವಿಯೆಟ್ನಾಂ ಸೇರಿದಂತೆ ಬೇರೆ ಬೇರೆ ದೇಶಗಳಿಂದ ರೇಷ್ಮೆ ಆಮದಾಗುತ್ತೆ. ಆಗ ರಾಜ್ಯದ ರೇಷ್ಮೆ ದರ ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವರಲ್ಲಿ ಟ್ರೇಡರ್ಸ್ ಮನವಿ ಮಾಡಿದ್ರು.

ಆಂಟಿ ಡಂಪಿಂಗ್ ಚಾರ್ಜ್ ಏರಿಕೆ
ಆಂಟಿ ಡಂಪಿಂಗ್ ಚಾರ್ಜ್ ಏರಿಕೆ ಸಂಬಂಧ ತಕ್ಷಣವೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಸಚಿವರು ಸಭೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ ರೇಷ್ಮೆ ಆಮದಿಗೂ ಮಿತಿ ಹೇರುವ ಪ್ರಯತ್ನ ಮಾಡಲಾಗುವುದು. ಇನ್ನು ಹೊರ ರಾಜ್ಯಗಳಿಗೆ ರೇಷ್ಮೆ ಸಾಗಿಸಲು ಕಮರ್ಷಿಯಲ್ ವೆಹಿಕಲ್ ಗೆ ಯಾವುದೆ ಸಮಸ್ಯೆ ಇಲ್ಲ. ಜೊತೆ ಅಗತ್ಯವಿದ್ದಲ್ಲಿ ಪಾಸ್ ವ್ಯವಸ್ಥೆ ಕೂಡ ಮಾಡಲಾಗುವುದು ಎಂದಿದ್ದಾರೆ.

ವಹಿವಾಟು ನಡೆಸಬಹುದು
ಈಗಾಗಲೆ ಕೋರಿಯರ್ ಸರ್ವಿಸ್ ಕೂಡ ಆರಂಭವಾಗಿದೆ. ಟ್ರೇಡರ್ಸ್ ಈ ಎಲ್ಲ ಸೌಲಭ್ಯ ಬಳಸಿಕೊಂಡು ವಹಿವಾಟು ನಡೆಸಬಹುದು. ಯಾವುದೆ ಸಂದರ್ಭದಲ್ಲಿ ವಹಿವಾಟು ನಡೆಸಲು ಸಮಸ್ಯೆ ಎದುರಾದರೆ ತಕ್ಷಣ ಸರ್ಕಾರ ನಿಮ್ಮ ನೆರವಿಗೆ ಬರಲಿದೆ ಎಂದು ಸಚಿವರು ರೇಷ್ಮೆ ರೀಲರ್ಸ್ ಹಾಗೂ ಟ್ರೇಡರ್ಸ್ ಗಳಿಗೆ ಭರವಸೆ ನೀಡಿದ್ದಾರೆ.












Click it and Unblock the Notifications