ಸಿಡಿಲು ಮುನ್ಸೂಚನೆಗೆ ರಾಜ್ಯ ಸರ್ಕಾರದಿಂದ ವಿನೂತನ ಆಪ್
ಬೆಂಗಳೂರು, ಮೇ 24: ಹವಾಮಾನದ ಸ್ಥಿತಿಗತಿಯ ಆಧಾರದ ಮೇಲೆ ಸಿಡಿಲಿನ ಮುನ್ಸೂಚನೆ ನೀಡಬಲ್ಲ ಹೊಸ ಆಪ್ ವೊಂದನ್ನು ಸಿದ್ಧಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ರಾಜ್ಯ ವಿಪತ್ತು ನಿರ್ವಹಣಾ ಉಸ್ತುವಾರಿ ತಂಡ ಸಿದ್ಧತೆ ನಡೆಸುತ್ತಿದ್ದು, 50 ಲಕ್ಷ ರೂ.ವೆಚ್ಚದಲ್ಲಿ ಆಪ್ ನಿರ್ಮಿಸಲು ಈಗಾಗಲೇ ಟೆಂಡರ್ ಕರೆಯಲು ತೀರ್ಮಾನಿಸಿದೆ.
ಈ ಆಪ್ ಮೂಲಕ 30 ಲಕ್ಷ ರೈತರಿಗೆ ಸಿಡಿಲು ಬಡಿವ ಸ್ಥಳದ ನಿಖರ ಮಾಹಿತಿಯನ್ನು ಏಕಕಾಲದಲ್ಲಿ ನೀಡಲಾಗುತ್ತದೆ. ಇದರಿಂದಾಗಿ ಅಪಾಯ ಸಂಭವಿಸುವ ಸ್ಥಳಗಳಿಂದ ರೈತರು ಬೇರೆಡೆಗೆ ತೆರಳಲು ಸಹಕಾರಿಯಾಗಲಿದೆ. ರಾಜ್ಯ ವಿಪತ್ತು ನಿರ್ವಹಣ ಮಂಡಳಿ (KSNDMC) ರೈತರ ಸಂಪರ್ಕ ಸಂಖ್ಯೆಗಳನ್ನು ಸಂಗ್ರಹಿಸಲಿದ್ದು, ಆ ಎಲ್ಲ ಸಂಖ್ಯೆಗೂ ಸಂದೇಶ ರೂಪದಲ್ಲಿ ಸಿಡಿಲು ಬಡಿವ ಮಾಹಿತಿಯನ್ನು ಕಳಿಸಲಿದೆ.[ಹಸಿರು ಬೆಂಗಳೂರಿಗಾಗಿ 'ಬಿಬಿಎಂಪಿ ಗ್ರೀನ್' ಆ್ಯಪ್, ನೀವೂ ಗಿಡ ನೆಡಿ]

ಪ್ರತಿವರ್ಷ ನಮ್ಮ ರಾಜ್ಯದಲ್ಲಿ ಸಿಡಿಲಿಗೆ ಬಲಿಯಾಗುವ ರೈತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ದುರಂತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಈ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಎಲ್ಲಾ ಪ್ರದೇಶಗಳನ್ನೂ ಆವರಿಸುವಂತೆ, ಆಯಾ ಪ್ರದೇಶದ ಹವಾಗುಣ ಸಂಗ್ರಹಿಸುವಂತೆ ಸೆನ್ಸಾರ್ ಅಳವಡಿಸಲಾಗುತ್ತದೆ. ಈ ಸೆನ್ಸಾರ್ ನಿಂದಾಗಿ ಗುಡುಗು-ಸಿಡಿಲಿನ ಮಾಹಿತಿ ಆಪ್ ನಲ್ಲಿ ಲಭಿಸಲಿದ್ದು, ಇದರಿಂದ ಸಾವಿರಾರು ರೈತರಿಗೆ ಅನುಕೂಲವಾಗಲಿದೆ.[ರಸ್ತೆ ಸಂಚಾರ ನಿಮಯ ಮೀರಿದರೆ ಭಾರೀ ದಂಡದ ಹೊರೆ]
ಸಿಡಿಲು ಬಡಿದು ರಾಜ್ಯದಲ್ಲಿ ಅಪಾರ ಸಾವುನೋವು ಸಂಭವಿಸುತ್ತಿದೆ. ಮೊದಲೇ ಮಾಹಿತಿ ದೊರೆತರೆ ಅಪಾಯ ತಡೆಯಬಹುದು. ಆದ್ದರಿಂದ ಸರ್ಕಾರ ಈ ಆಪ್ ಸಿದ್ಧಪಡಿಸಲು ನಿರ್ಧರಿಸಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿತಿಳಿಸಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
2026ರ 'ಹೊಸ ಆಧಾರ್ ಆ್ಯಪ್'ನಲ್ಲಿರುವ ಟಾಪ್ 8 ಫೀಚರ್ಸ್ ಏನು ಗೊತ್ತಾ? ಇಲ್ಲಿದೆ ಮಾಹಿತಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications