ಜನತಾ ಥಿಯೇಟರ್ ಇರ್ಲಿ, ಮೊದ್ಲು ಟಿಕೆಟ್ ರೇಟ್ ಫಿಕ್ಸ್ ಮಾಡಿ
ಬೆಂಗಳೂರು, ಮಾರ್ಚ್ 09: ಕರ್ನಾಟಕದ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಏಕರೂಪದ ಟಿಕೆಟ್ ದರ ನಿಗದಿಪಡಿಸಲು ಆಗ್ರಹಿಸಿ ಚಿತ್ರಕರ್ಮಿ ದಯಾಳ್ ಪದ್ಮನಾಭನ್ ಹಾಗೂ ಸಮಾನ ಮನಸ್ಕರು ಆನ್ ಲೈನ್ ಅರ್ಜಿ ಹಾಕಿರುವುದು ಗೊತ್ತಿರಬಹುದು. ರಾಜ್ಯದಲ್ಲಿ ಚಲನಚಿತ್ರ ನೀತಿ ಪರಿಷ್ಕರಿಸುವ ಬಗ್ಗೆಯೂ ತಾನು ಚಿಂತನೆ ನಡೆದಿದೆ. ಹೊಸ ನೀತಿ ಜಾರಿಗೊಂಡರೆ ಮಲ್ಟಿಪ್ಲೆಕ್ಸ್ ನಲ್ಲಿ 120 ರು ಗೆ ಸಿನಿಮಾ ನೋಡ್ಬಹುದು.
ರಾಜ್ಯದಲ್ಲಿನ ಎಲ್ಲಾ ಜನಸಾಮಾನ್ಯರೂ ಚಲನ ಚಿತ್ರವನ್ನು ವೀಕ್ಷಿಸಲು ಅನುಕೂಲವಾಗುವಂತೆ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿನ ಟಿಕೆಟ್ ದರವನ್ನು ಕಡಿಮೆ ಮಾಡುವ ಸಂಬಂಧ ಸರಕಾರ ಚಿಂತನೆ ನಡೆಸಿದೆ. [ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ದರ 120ರುಗೆ ನಿಗದಿ ಪಡಿಸಿ]

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಂಬಾ ಉತ್ಸುಕರಾಗಿದ್ದಾರೆ ಎಂದು ಮೂಲ ಸೌಕರ್ಯ ಅಭಿವೃದ್ಧಿ, ವಾರ್ತಾ ಹಾಗೂ ಹಜ್ ಖಾತೆ ಸಚಿವ ರೋಷನ್ ಬೇಗ್ ಮತ್ತೊಮ್ಮೆ ಹೇಳಿದ್ದಾರೆ. ಆದರೆ, ಈ ಹೇಳಿಕೆ ನೀಡಿ ವರ್ಷ ಕಳೆದರೂ ನಿಯಮ ಕಾರ್ಯರೂಪಕ್ಕೆ ತರಲು ಆಗುತ್ತಿಲ್ಲ.
ರಾಜ್ಯದಲ್ಲಿ ಚಲನಚಿತ್ರ ನೀತಿ ಪರಿಷ್ಕರಿಸುವ ಬಗ್ಗೆಯೂ ತಾನು ಚಿಂತನೆ ನಡೆಸಿದೆ. ತಮಿಳುನಾಡು ಸೇರಿದಂತೆ ಇತರ ರಾಜ್ಯಗಳಲ್ಲಿನ ಚಲನಚಿತ್ರ ನೀತಿಯನ್ನು ಅಧ್ಯಯನ ಮಾಡಿ ಈ ಕುರಿತು ಕ್ರಮಕೈಗೊಳ್ಳಲಾಗುವುದು. ಸ್ಥಳೀಯ ಭಾಷಾ ಚಲನಚಿತ್ರ ವೀಕ್ಷಣೆ ಅನುಕೂಲಕ್ಕಾಗಿ ಪ್ರತಿ ಜಿಲ್ಲೆಗೊಂದು 200-300 ಆಸನ ಸಾಮರ್ಥ್ಯದ 'ಜನತಾ ಥಿಯೇಟರ್' ಸ್ಥಾಪಿಸುವ ಉದ್ದೇಶ ಸರಕಾರದ ಮುಂದಿದೆ ಎಂದು ಸಚಿವ ರೋಷನ್ ಬೇಗ್ ಹೇಳಿದ್ದಾರೆ.
ದಕ್ಷಿಣ ಭಾರತದಲ್ಲಿ ಬೆಂಗಳೂರಿನಲ್ಲೇ ಹೆಚ್ಚು ಟಿಕೆಟ್ ದರ ನಿಗದಿಯಾಗಿದೆ ಎಂದು ಟಿಎ ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ ಒಂದು ವರದಿ ತಯಾರಿಸಿದೆ. ಕನ್ನಡ ಪ್ರೇಕ್ಷಕರ ಬೇಡಿಕೆಗಳು ಇದರಲ್ಲಿವೆ. ಈ ವರದಿ ಜೊತೆಗೆ ಕನ್ನಡ ಚಿತ್ರರಂಗದ ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾರ್ಚ್ 11ರಂದು ಭೇಟಿ ಮಾಡುವ ಸಾಧ್ಯತೆಯಿದೆ. ರಾಜ್ಯ ಬಜೆಟ್ ಮಂಡನೆಗೂ ಮುನ್ನ ಪೂರ್ವಭಾವಿ ಸಭೆಯಲ್ಲೇ ಈ ಬಗ್ಗೆ ತೀರ್ಮಾನ ಹೊರ ಬೀಳುವ ಸಾಧ್ಯತೆಯೂ ಇದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications