ಜನತಾ ಥಿಯೇಟರ್ ಇರ್ಲಿ, ಮೊದ್ಲು ಟಿಕೆಟ್ ರೇಟ್ ಫಿಕ್ಸ್ ಮಾಡಿ
ಬೆಂಗಳೂರು, ಮಾರ್ಚ್ 09: ಕರ್ನಾಟಕದ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಏಕರೂಪದ ಟಿಕೆಟ್ ದರ ನಿಗದಿಪಡಿಸಲು ಆಗ್ರಹಿಸಿ ಚಿತ್ರಕರ್ಮಿ ದಯಾಳ್ ಪದ್ಮನಾಭನ್ ಹಾಗೂ ಸಮಾನ ಮನಸ್ಕರು ಆನ್ ಲೈನ್ ಅರ್ಜಿ ಹಾಕಿರುವುದು ಗೊತ್ತಿರಬಹುದು. ರಾಜ್ಯದಲ್ಲಿ ಚಲನಚಿತ್ರ ನೀತಿ ಪರಿಷ್ಕರಿಸುವ ಬಗ್ಗೆಯೂ ತಾನು ಚಿಂತನೆ ನಡೆದಿದೆ. ಹೊಸ ನೀತಿ ಜಾರಿಗೊಂಡರೆ ಮಲ್ಟಿಪ್ಲೆಕ್ಸ್ ನಲ್ಲಿ 120 ರು ಗೆ ಸಿನಿಮಾ ನೋಡ್ಬಹುದು.
ರಾಜ್ಯದಲ್ಲಿನ ಎಲ್ಲಾ ಜನಸಾಮಾನ್ಯರೂ ಚಲನ ಚಿತ್ರವನ್ನು ವೀಕ್ಷಿಸಲು ಅನುಕೂಲವಾಗುವಂತೆ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿನ ಟಿಕೆಟ್ ದರವನ್ನು ಕಡಿಮೆ ಮಾಡುವ ಸಂಬಂಧ ಸರಕಾರ ಚಿಂತನೆ ನಡೆಸಿದೆ. [ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ದರ 120ರುಗೆ ನಿಗದಿ ಪಡಿಸಿ]

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಂಬಾ ಉತ್ಸುಕರಾಗಿದ್ದಾರೆ ಎಂದು ಮೂಲ ಸೌಕರ್ಯ ಅಭಿವೃದ್ಧಿ, ವಾರ್ತಾ ಹಾಗೂ ಹಜ್ ಖಾತೆ ಸಚಿವ ರೋಷನ್ ಬೇಗ್ ಮತ್ತೊಮ್ಮೆ ಹೇಳಿದ್ದಾರೆ. ಆದರೆ, ಈ ಹೇಳಿಕೆ ನೀಡಿ ವರ್ಷ ಕಳೆದರೂ ನಿಯಮ ಕಾರ್ಯರೂಪಕ್ಕೆ ತರಲು ಆಗುತ್ತಿಲ್ಲ.
ರಾಜ್ಯದಲ್ಲಿ ಚಲನಚಿತ್ರ ನೀತಿ ಪರಿಷ್ಕರಿಸುವ ಬಗ್ಗೆಯೂ ತಾನು ಚಿಂತನೆ ನಡೆಸಿದೆ. ತಮಿಳುನಾಡು ಸೇರಿದಂತೆ ಇತರ ರಾಜ್ಯಗಳಲ್ಲಿನ ಚಲನಚಿತ್ರ ನೀತಿಯನ್ನು ಅಧ್ಯಯನ ಮಾಡಿ ಈ ಕುರಿತು ಕ್ರಮಕೈಗೊಳ್ಳಲಾಗುವುದು. ಸ್ಥಳೀಯ ಭಾಷಾ ಚಲನಚಿತ್ರ ವೀಕ್ಷಣೆ ಅನುಕೂಲಕ್ಕಾಗಿ ಪ್ರತಿ ಜಿಲ್ಲೆಗೊಂದು 200-300 ಆಸನ ಸಾಮರ್ಥ್ಯದ 'ಜನತಾ ಥಿಯೇಟರ್' ಸ್ಥಾಪಿಸುವ ಉದ್ದೇಶ ಸರಕಾರದ ಮುಂದಿದೆ ಎಂದು ಸಚಿವ ರೋಷನ್ ಬೇಗ್ ಹೇಳಿದ್ದಾರೆ.
ದಕ್ಷಿಣ ಭಾರತದಲ್ಲಿ ಬೆಂಗಳೂರಿನಲ್ಲೇ ಹೆಚ್ಚು ಟಿಕೆಟ್ ದರ ನಿಗದಿಯಾಗಿದೆ ಎಂದು ಟಿಎ ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ ಒಂದು ವರದಿ ತಯಾರಿಸಿದೆ. ಕನ್ನಡ ಪ್ರೇಕ್ಷಕರ ಬೇಡಿಕೆಗಳು ಇದರಲ್ಲಿವೆ. ಈ ವರದಿ ಜೊತೆಗೆ ಕನ್ನಡ ಚಿತ್ರರಂಗದ ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾರ್ಚ್ 11ರಂದು ಭೇಟಿ ಮಾಡುವ ಸಾಧ್ಯತೆಯಿದೆ. ರಾಜ್ಯ ಬಜೆಟ್ ಮಂಡನೆಗೂ ಮುನ್ನ ಪೂರ್ವಭಾವಿ ಸಭೆಯಲ್ಲೇ ಈ ಬಗ್ಗೆ ತೀರ್ಮಾನ ಹೊರ ಬೀಳುವ ಸಾಧ್ಯತೆಯೂ ಇದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications