ಲಾಕ್ಡೌನ್: 'ಪತ್ರಕರ್ತೆಯರ ಸಂಕಷ್ಟಕ್ಕೆ ಸರ್ಕಾರ ನೆರವಾಗಲಿ'
ಬೆಂಗಳೂರು, ಮೇ 14: ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕೊಳಗಾಗಿರುವ ಪತ್ರಕರ್ತೆಯರ ಅಹವಾಲುಗಳನ್ನು ಇಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸ್ವೀಕರಿಸಿ, ಮಾನಸಿಕ ಸ್ಥೈರ್ಯ ತುಂಬಿದರು.
ಲಾಕ್ಡೌನ್ ಹಿನ್ನೆಲೆಯಿಂದ ಪತ್ರಕರ್ತೆಯರು ಬಾದಿತರಾಗಿದ್ದು, ಅವರಿಗೆ ಸರ್ಕಾರ ನೆರವಾಗಬೇಕು. ಅನಿವಾರ್ಯವಾಗಿ ಇತರೆ ವೃತ್ತಿಪರರಂತೆ ಪತ್ರಕರ್ತೆಯರು ಮನೆಯಿಂದಲೇ ಕಾರ್ಯನಿರ್ವಹಿಸುವ ಪರಿಸ್ಥಿತಿ ಎದುರಾಗಿದೆ. ಇದಕ್ಕೆ ಪೂರಕ ಪರಿಕರಗಳನ್ನು ಒದಗಿಸಬೇಕು ಎಂದು ಪತ್ರಕರ್ತೆಯರು ಕಾರಜೋಳ ಅವರಲ್ಲಿ ಮನವಿ ಮಾಡಿದರು.
ಸಾಮಾಜಿಕ ಪಿಡುಗುಗಳ ನಿವಾರಣೆಗಾಗಿ ಕಾರ್ಯಾಗಾರ, ಶಿಬಿರ, ಕ್ಷೇತ್ರ ಪ್ರಾತ್ಯಾಕ್ಷಿಕೆಗಳನ್ನು ಕರ್ನಾಟಕ ಪತ್ರಕರ್ತೆಯರ ಸಂಘವು ಆಯೋಜಿಸಲು ಸಮಾಜ ಕಲ್ಯಾಣ ಇಲಾಖೆಯು ಸಹಭಾಗಿತ್ವ ನೀಡಬೇಕು. ವೃತ್ತಿ ಪರ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ, ಕೋರ್ಸುಗಳನ್ವಯ ವೃತ್ತಿಪರ ಕೋರ್ಸುಗಳನ್ನು ಕರ್ನಾಟಕ ಪತ್ರಕರ್ತೆಯರ ಸಂಘದ ಸಹಭಾಗಿತ್ವದಲ್ಲಿ ಆಯೋಜಿಸಬೇಕು ಎಂದು ಮನವಿ ಮಾಡಿದರು.

ಮನವಿಗೆ ಡಿಸಿಎಂ ಪೂರಕವಾಗಿ ಸ್ವಂದಿಸಿ, ಪತ್ರಕರ್ತೆಯರು ವೃತ್ತಿಪರತೆಯಿಂದ ಕಾರ್ಯನಿರ್ವಹಿಸಲು ಅನುಕೂಲವಾಗುವಂತಹ ಕಾರ್ಯಾಗಾರಗಳನ್ನು ಆಯೋಜಿಸಲು ಸರ್ಕಾರದಿಂದ ನೆರವು ನೀಡಲಾಗುತ್ತದೆ. ಸಂಘದ ಕಾರ್ಯಚಟುವಟಿಕೆಗಳನ್ನು ಪ್ರೋತ್ಸಾಹಿಸಲಾಗುವುದು ಎಂದು ಅವರು ತಿಳಿಸಿದರು.
ಸಂಘದ ಹಿರಿಯ ಸಲಹೆಗಾರರಾದ ಕೆ.ಎಚ್.ಸಾವಿತ್ರಿ ಸುರೇಶ್ ಕುಮಾರ್, ಅಧ್ಯಕ್ಷರಾದ ಶಾಂತಲಾ ಧರ್ಮರಾಜ್ ಅವರು ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕುಮಾರ ನಾಯಕ್, ಆಯುಕ್ತ, ಪೆದ್ದಪ್ಪಯ್ಯ, ಅಪರ ನಿರ್ದೇಶಕ ನಾಗೇಶ್, ಸಂಘದ ಕಾರ್ಯದರ್ಶಿ ಮಾಲತಿ ಭಟ್, ಎನ್ ವನಿತಾ, ಸೌಮ್ಯಶ್ರೀ, ಅಕ್ಷರ, ಗೋರೂರು ಪಂಕಜ ಮತ್ತಿತರರು ಉಪಸ್ಥಿತರಿದ್ದರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications