ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಸರ್ಕಾರ ರೈತರ ನೆರವಿಗೆ ಬರಲಿ; ಎಚ್ ಡಿ ಕೆ ಆಗ್ರಹ

|
Google Oneindia Kannada News

ಬೆಂಗಳೂರು, ಮಾರ್ಚ್ 30; ಕೊರೊನಾದಿಂದ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ರೈತರು ತೀವ್ರ ತೊಂದರೆಗಿಡಾಗಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ, ರೈತರಿಗೆ ಆಸರೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸೋಮವಾರ ಟ್ವೀಟ್ ಮಾಡಿರುವ ಅವರು, ಸರ್ಕಾರವೇ ರೈತರ ಉತ್ಪನ್ನಗಳನ್ನು ಖರೀದಿಸಬೇಕು. ಇಲ್ಲದಿದ್ದರೆ ತೀವ್ರ ಸಂಕಷ್ಟವನ್ನು ರೈತರು ಅನುಭವಿಸಬೇಕಾಗುತ್ತದೆ. ಅದರ ಪರಿಣಾಮ ಇನ್ನೂ ಭೀಕರ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಳ; ಸರ್ಕಾರಕ್ಕೆ ಎಚ್‌ಡಿಕೆ ತೀವ್ರ ತರಾಟೆರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಳ; ಸರ್ಕಾರಕ್ಕೆ ಎಚ್‌ಡಿಕೆ ತೀವ್ರ ತರಾಟೆ

ಸರ್ಕಾರ ಕೃಷಿ ಉತ್ಪನ್ನಗಳ ಸಾಗಾಟಕ್ಕೆ ನಿರ್ಬಂಧ ವಿಧಿಸಬಾರದು. ತರಕಾರಿ ಹಣ್ಣುಗಳನ್ನು ವಾರ್ಡ್ ನಲ್ಲಿ ಮಾರಾಟ ಮಾಡಿಸಲು ಕ್ರಮ ಕೈಗೊಳ್ಳಬೇಕು. ಈ ಸಂದರ್ಭದಲ್ಲಿ ರೈತರ ಪರ ಅಗತ್ಯ ಕ್ರಮಗಳನ್ನು ಕೈಗೊಳ್ಳದಿದ್ದರೆ ತೀವ್ರ ಆರ್ಥಿಕ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Karnataka Government Must Takes Actions For Farmer Welfare HDK tweet

ರೈತರ ಉತ್ಪನ್ನಗಳನ್ನು ಸರ್ಕಾರವೇ ಸ್ವಯಂಸೇವಕರ ಮೂಲಕ ಖರೀದಿಸಿ ಮಾರಾಟ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ.

English summary
Karnataka Government Must Takes Actions For Farmer Welfare HD Kumaraswamy Tweet
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X