Get Updates
Get notified of breaking news, exclusive insights, and must-see stories!

ಸಾಹಿತ್ಯಪ್ರಿಯರಿಗೆ ಖುಷಿ ಸುದ್ದಿ ನೀಡಿದ ಸರ್ಕಾರ: ಗ್ರಂಥಾಲಯ ತೆರೆಯಲು ಅನುಮತಿ

ಬೆಂಗಳೂರು, ಸೆಪ್ಟೆಂಬರ್ 11: ಲಾಕ್‌ಡೌನ್ ಆರಂಭವಾದಾಗಿನಿಂದ ಗ್ರಂಥಾಲಯಗಳಿಗೆ ಹೋಗಲು ಸಾಧ್ಯವಾಗದೆ ಓದುವ ಅಭ್ಯಾಸದಿಂದ ವಂಚಿತರಾಗಿದ್ದ ಸಾಹಿತ್ಯಪ್ರಿಯರಿಗೆ ನೆಮ್ಮದಿಯ ಸುದ್ದಿಯನ್ನು ಸರ್ಕಾರ ನೀಡಿದೆ. ಕಂಟೇನ್ಮೆಂಟ್ ವಲಯಗಳನ್ನು ಹೊರತುಪಡಿಸಿ ಉಳಿದೆಲ್ಲ ಕಡೆ ಗ್ರಂಥಾಲಯಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಕೇಂದ್ರ ಸರ್ಕಾರವು ಆಗಸ್ಟ್ 29ರಂದು ಬಿಡುಗಡೆ ಮಾಡಿದ ಅನ್‌ಲಾಕ್‌ 4.0ರ ಮಾರ್ಗಸೂಚಿಗಳಲ್ಲಿ ಸೆಪ್ಟೆಂಬರ್ 30ರವರೆಗೆ ಇನ್ನಷ್ಟು ಕಾರ್ಯಚಟುವಟಿಕೆಗಳನ್ನು ಆರಂಭಿಸಲು ಅವಕಾಶ ನೀಡಿದೆ. ಕಂಟೇನ್ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಹೆಚ್ಚಿನ ಕಾರ್ಯಗಳನ್ನು ಆರಂಭಿಸಲು ಅನುಮತಿ ನೀಡಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಕಂಟೇನ್ಮೆಂಟ್ ವಲಯಗಳನ್ನು ಹೊರತುಪಡಿಸಿ ಇತರೆ ಎಲ್ಲ ವಲಯಗಳಲ್ಲಿಯೂ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಆದರೆ ಗ್ರಂಥಾಲಯಗಳಲ್ಲಿ ಕೋವಿಡ್ ಸಂಬಂಧಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.

 Karnataka Government Orders To Open Public Libraries Except In Containment Zone

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್ ಸೋಂಕು ನಿಯಂತ್ರಣ ಸಂಬಂಧ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಗ್ರಂಥಾಲಯ ಪ್ರವೇಶಿಸುವವರನ್ನು ಥರ್ಮಲ್ ತಪಾಸಣೆ ನಡೆಸಬೇಕು. ಅವರಿಗೆ ಸೂಕ್ತ ಗ್ರಂಥಾಲಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚನೆ ನೀಡಲಾಗಿದೆ.

Recommended Video

      ಪೋಷಕರಿಗೆ ಸಿಹಿ ಸುದ್ದಿ ಕೊಟ್ಟ BJP government | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+