ವಿಧಾನಸೌಧದ ಆವರಣದಲ್ಲಿ ಮಾಧ್ಯಮ ನಿರ್ಬಂಧ ಆದೇಶ ವಾಪಸ್
ಬೆಂಗಳೂರು, ಜುಲೈ 21: ವಿಧಾನಸೌಧ ಆವರಣದಲ್ಲಿ ಚಿತ್ರೀರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಹೇರಿದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ವಿಧಾನಸೌಧದ ಕಾರಿಡಾರ್ಗಳಲ್ಲಿ ಪತ್ರಿಕಾ ಛಾಯಾಗ್ರಾಹಕರು ಛಾಯಾಗ್ರಹಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ವಿಡಿಯೊ ಚಿತ್ರೀಕರಣ ನಡೆಸುವುದನ್ನು ನಿರ್ಬಂಧಿಸಿ ಈ ಹಿಂದೆ ಸುತ್ತೋಲೆ ಹೊರಡಿಸಲಾಗಿತ್ತು.
ಸುಗಮ ಚಲನೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಮುಖ್ಯಮಂತ್ರಿಯವರು ಮತ್ತು ಇತರ ಸಚಿವರಿಂದ ಹೇಳಿಕೆ ಪಡೆಯಲು ವಿಧಾನಸೌಧದ ಕೆಂಗಲ್ ದ್ವಾರದ ಬಳಿ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಸಚಿವಾಲಯದ ಈ ಕ್ರಮಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಕಾರಿಡಾರ್ಗಳಲ್ಲಿ ವಿಡಿಯೊ ಚಿತ್ರೀಕರಣ ಮತ್ತು ಪತ್ರಿಕಾ ಛಾಯಾಗ್ರಹಣ ಮಾಡುತ್ತಿದ್ದು, ಇದರಿಂದ ಹಲವಾರು ಬಾರಿ ಗಣ್ಯ ವ್ಯಕ್ತಿಗಳ ಸುಗಮ ಚಲನವಲನಕ್ಕೆ ಅಡ್ಡಿ ಉಂಟಾಗುತ್ತಿದೆ ಎಂದು ಸುತ್ತೋಲೆಯಲ್ಲಿ ಸಮರ್ಥನೆ ನೀಡಲಾಗಿತ್ತು.
ಈ ಆದೇಶ ಹಿಂಪಡೆಯದಿದ್ದರೆ ಎಲ್ಲಾ ಸರ್ಕಾರಿ ಕಾರ್ಯಕ್ರಮ ಹಾಗೂ ಮುಖ್ಯಮಂತ್ರಿಗಳ ಕಾರ್ಯಕ್ರಮ ಬಾಯ್ಕಾಟ್ ಮಾಡಲು ಮಾಧ್ಯಮ ಪ್ರತಿನಿಧಿಗಳು ತೀರ್ಮಾನಿಸಿದ್ದರು. ಆ ಹಿನ್ನೆಲೆಯಲ್ಲಿ, ಇದೀಗ ವಿಧಾನಸೌಧದ ಕಾರಿಡಾರ್ನಲ್ಲಿ ಮಾಧ್ಯಮ ನಿರ್ಬಂಧ ಆದೇಶ ಹಿಂಪಡೆಯಲು ಮುಖ್ಯಮಂತ್ರಿ ಸೂಚಿಸಿದ್ದಾರೆಂದು ತಿಳಿದುಬಂದಿದೆ.
ಇದಕ್ಕೂ ಮೊದಲು, ಇಂದು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪೊಲೀಸರಿಂದ ಅಡ್ಡಿ ಆಗಿತ್ತು. ಸಿಎಂ ಸಭೆ ನಡೆಯುವ ಜಾಗದಲ್ಲಿ ಪೊಲೀಸರಿಂದ ಅಡ್ಡಿಯಾಗಿತ್ತು. ಮಾಧ್ಯಮದವರನ್ನು ಪ್ರೆಸ್ ರೂಂ ಒಳಗೆ ಪೊಲೀಸರು ತಳ್ಳಿದ್ದರು. ಬಲವಂತವಾಗಿ ಮಾಧ್ಯಮದವರನ್ನು ತಳ್ಳಿದ್ದರು.
ಕಳೆದ ವಾರ ಮಾಧ್ಯಮಗಳಿಗೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿತ್ತು. ಕಾರಿಡಾರ್ಗಳಲ್ಲಿ ಮಾಧ್ಯಮದವರು ಓಡಾಡದಂತೆ ಆದೇಶ ನೀಡಲಾಗಿತ್ತು. ಸಿಎಂ ಅನುಮೋದನೆ ಮೇರೆಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿತ್ತು. ಕೇವಲ ಕೆಂಗಲ್ ಗೇಟ್ನಲ್ಲಿ ಮಾತ್ರ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಬಳಿಕ ಇದೀಗ ಮಾಧ್ಯಮ ನಿರ್ಬಂಧ ಆದೇಶ ಹಿಂಪಡೆಯಲಾಗಿದೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications