ಹಂಪಿ: ಪಾಳುಬಿದ್ದ ಹಿರೇಛತ್ರದ ಪುನರುತ್ಥಾನಕ್ಕೆ 2 ಕೋಟಿ ರು.
ಹಂಪಿಯಲ್ಲಿನ ಹಿರೇಛತ್ರದ ಅಭಿವೃದ್ಧಿಗಾಗಿ 2 ಕೋಟಿ ರು. ಹೆಚ್ಚುವರಿ ಅನುದಾನ ನೀಡಿದ ರಾಜ್ಯ ಸರ್ಕಾರ. ಈ ಮೊದಲು 1 ಕೋಟಿ ರು. ಅನುದಾನ ನೀಡಿದ್ದ ರಾಜ್ಯ ಸರ್ಕಾರ. ಇದೀಗ, ಹೆಚ್ಚುವರಿಯಾಗಿ ಹಣ ಮಂಜೂರು.
ಬೆಂಗಳೂರು, ಜುಲೈ 20: ಹಂಪಿಯಲ್ಲಿ ಪಾಳುಬಿದ್ದಿರುವ ವಿಜಯ ನಗರ ಅರಸರ ಕಾಲದ ಹಿರೇಛತ್ರದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 2.75 ಕೋಟಿ ರು. ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ.
ಈ ಹಿಂದೆ, ಛತ್ರದ ಅಭಿವೃದ್ಧಿಗಾಗಿ 1 ಕೋಟಿ ರು. ಅನುದಾನವನ್ನು ಬಿಡುಗಡೆ ಮಾಡಿತ್ತು. ಆದರೆ, ಅದು ಅಭಿವೃದ್ಧಿಗೆ ಸಾಕಾಗಲಿಲ್ಲವೆಂಬ ಕೂಗು ಕೇಳಿಬಂದಿದ್ದರಿಂದಾಗಿ, ಈಗ ಮತ್ತೆ ಅದಕ್ಕೆ ಹಣದ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದೆ.

ವಿಜಯ ನಗರ ಅರಸರ ಕಾಲದಲ್ಲಿ ನಿರ್ಮಿತವಾಗಿದ್ದ ಈ ಛತ್ರವು ವಿಚಾರ ವಿನಿಮಯದ ವೇದಿಕೆಯಾಗಿ ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿತ್ತೆಂದು ಇತಿಹಾಸಕಾರರು ಹೇಳಿದ್ದಾರೆ. ಸುಮಾರು 1 ಸಾವಿರ ಕಂಬಗಳನ್ನು ಹೊಂದಿರುವ, ವಿಶಾಲವಾಗಿರುವ ಈ ಛತ್ರವು ಹಂಪಿಯ ಪ್ರಮುಖ ದೇಗುಲವಾದ ವಿರೂಪಾಕ್ಷೇಶ್ವರ ದೇವಸ್ಥಾನದ ಬಳಿಯಲ್ಲೇ ಇದೆ.
ಇಲ್ಲಿ, ಕವಿಗಳು, ಕಲಾವಿದರು, ಬುದ್ಧಿಜೀವಿಗಳು, ತರ್ಕ ಶಾಸ್ತ್ರ ಪಂಡಿತರು, ವೈದಿಕರು ತಂಗುತ್ತಿದ್ದರಲ್ಲದೆ, ಅವರ ನಡುವೆ ಸ್ವಾರಸ್ಯಕರವಾದ ಚರ್ಚೆಗಳು, ವಿಚಾರ ವಿನಿಮಯಗಳು ನಡೆಯುತ್ತಿದ್ದವು ಎಂದು ಹೇಳಲಾಗಿದೆ.
ಇತ್ತೀಚಿನ ವರ್ಷಗಳಲ್ಲಿ ಪಾಳು ಬಿದ್ದ ಹಂಪೆಯನ್ನು ಉದ್ಧರಿಸಿ, ಅದನ್ನು ಪ್ರವಾಸಿ ತಾಣವನ್ನಾಗಿ ಪರಿವರ್ತಿಸಲಾಗಿತ್ತಾದರೂ, ಈ ಹಿರೇಛತ್ರದ ಅಭಿವೃದ್ಧಿಯ ಬಗ್ಗೆ ತಾತ್ಸಾರ ವಹಿಸಲಾಗಿತ್ತು.
ಇದನ್ನು ಅನೇಕ ಇತಿಹಾಸಕಾರರು ಪದೇ ಪದೇ ಸರ್ಕಾರದ ಗಮನಕ್ಕೆ ತಂದ ನಂತರ, ಸರ್ಕಾರ ಇದರ ಪುನರುತ್ಥಾನಕ್ಕೆ ಆರ್ಥಿಕ ಸಹಕಾರ ನೀಡಿತ್ತು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Davanagere By Election: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ: ಸಿ.ಎಂ ಸಿದ್ದರಾಮಯ್ಯ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ












Click it and Unblock the Notifications