KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ್ದ ಒಂದಷ್ಟು ಪರೀಕ್ಷೆಗಳಲ್ಲಿ ಅಕ್ರಮ ಸಾಬೀತಾಗಿತ್ತು. ಈ ಸಂಬಂಧ ರಾಜ್ಯ ಸರ್ಕಾರ ವ್ಯಾಪಕ ಟೀಕೆಗಳನ್ನು ಎದುರಿಸಬೇಕಾಯಿತು. ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಆಕ್ರೋಶ, ಅಸಮಾಧಾನಕ್ಕೂ ಕಾರಣವಾಗಿತ್ತು. ಇದೀಗ ಕೃಷಿ ಇಲಾಖೆಗೆ ಸಂಬಂಧಿಸಿದ ನಿರ್ದಿಷ್ಟ ಹುದ್ದೆಗಳ ನೇಮಕಾತಿಯನ್ನು ಕೆಪಿಎಸ್ಸಿ ಬದಲಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವಂತೆ ರಾಜ್ಯ ಸರ್ಕಾರ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ.
ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸುತ್ತಿದ್ದ ಕೃಷಿ ಇಲಾಖೆ ಸಂಬಂಧಿ ಖಾಲಿ ಹುದ್ದೆಗಳ ನೇಮಕಾತಿಯ ಆದೇಶ ಬದಲಾಗಿದೆ. ಅಂದರೆ ಕಳೆದ ವರ್ಷ ಕೃಷಿ ಇಲಾಖೆಯ ಸುಮಾರು 945 ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿಯನ್ನು KPSC ಮೂಲಕ ನಡೆಸಲು ಆದೇಶಿಸಲಾಗಿತ್ತು. ಇದೀಗ ಆ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ದ ಹೆಗಲಿದೆ ಹಾಕಲಾಗಿದೆ. ಇಂದಿನಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.

ಅಭ್ಯರ್ಥಿಗಳ ಮನವಿಗೆ ಸರ್ಕಾರ ಸ್ಪಂದನೆ
ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಸಚಿವ ಚೆಲುವರಾಯಸ್ವಾಮಿ ಅವರು, ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ ಲಕ್ಷಾಂತರ ರೈತಾಪಿ ಕುಟುಂಬಗಳ ಆಶೋತ್ತರಗಳಿಗೆ ಸ್ಪಂದಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆ ಆಗಿದೆ. ಕೃಷಿ ಇಲಾಖೆಯ ನೇಮಕಾತಿಗಳ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಇರಬೇಕು. ಶೀಘ್ರವಾಗಿ ನೇಮಕಾತಿ ನಡೆಯಬೇಕು ಎಂಬುದು ರಾಜ್ಯದ ಸಾವಿರಾರು ಅಭ್ಯರ್ಥಿಗಳ ಮನವಿ ಹಾಗೂ ಒತ್ತಾಯವಾಗಿತ್ತು.
ಉದ್ಯೋಗಾಕಾಂಕ್ಷಿಗಳ ನ್ಯಾಯಯುತ ಬೇಡಿಕೆಯನ್ನು ಸರ್ಕಾರ ಪರಿಗಣಿಸಿದೆ. KPSC ಮೂಲಕ ನೇಮಕಾತಿ ನಡೆಸುವ ಹಳೆಯ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಇಂದು ರದ್ದುಗೊಳಿಸಿದ್ದೇವೆ. ಈ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಇನ್ನು ಮುಂದೆ KEA ಮೂಲಕವೇ ನಡೆಸಲು ಅಧಿಕೃತವಾಗಿ ಆದೇಶ ಹೊರಡಿಸಿದ್ದೇವೆ ಎಂದು ತಿಳಿಸಿದ್ದಾರೆ.
ಪ್ರತಿಭಾವಂತರಿಗೆ ಅನ್ಯಾಯ ಆಗದಂತೆ ಕ್ರಮ
ಪಾರದರ್ಶಕತೆ ಮತ್ತು ಅರ್ಹತೆಗೆ ಆದ್ಯತೆ ನೀಡುವುದು ನಮ್ಮ ಬದ್ಧತೆ. ಗ್ರಾಮೀಣ ಭಾಗದ, ಕೃಷಿ ಕುಟುಂಬದ ಹಿನ್ನೆಲೆಯುಳ್ಳ ಪ್ರತಿಭಾವಂತ ಯುವಕರಿಗೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಎಲ್ಲಾ ಅಭ್ಯರ್ಥಿಗಳಿಗೆ ನನ್ನ ಕಡೆಯಿಂದ ಶುಭ ಹಾರೈಕೆಗಳು. ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿ, ನಮ್ಮ ಸರ್ಕಾರ ಸದಾ ನಿಮ್ಮ ಬೆನ್ನಿಗಿರುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ. ಅವರ ಈ ಎಕ್ಸ್ ಪೋಸ್ಟ್ಗೆ ಸಾಕಷ್ಟು ಮಂದಿ ಉದ್ಯೋಗಾಕಾಂಕ್ಷಿಗಳ ಪರವಾಗಿ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಕೆಇಎ ಸಹ ಅಧಿಕೃತ ಮಾಹಿತಿ ಹಂಚಿಕೊಳ್ಳಲಿದೆ.
ಆದರೆ, ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಇರಬೇಕು ಮತ್ತು ಶೀಘ್ರವಾಗಿ ನೇಮಕಾತಿ ನಡೆಯಬೇಕು ಎಂಬುದು ರಾಜ್ಯದ ಸಾವಿರಾರು ಅಭ್ಯರ್ಥಿಗಳ ಮನವಿ ಹಾಗೂ ಒತ್ತಾಯವಾಗಿತ್ತು.
— N Cheluvarayaswamy (@NCheluvarayaS) March 23, 2026
ಈ ನ್ಯಾಯಯುತ ಬೇಡಿಕೆಯನ್ನು ಪರಿಗಣಿಸಿ, KPSC ಮೂಲಕ ನೇಮಕಾತಿ ನಡೆಸುವ ಹಳೆಯ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಇಂದು ರದ್ದುಗೊಳಿಸಿದ್ದೇವೆ.
2/4
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications