ಉಕ್ಕಿನ ಸೇತುವೆ ಯೋಜನೆ ಬಗ್ಗೆ ಶುಕ್ರವಾರ ಕೋರ್ಟ್ ಗೆ ಸರಕಾರ ನೀಡಬೇಕು ಮಾಹಿತಿ
ಬೆಂಗಳೂರು, ಜೂನ್ 4: ಬೆಂಗಳೂರಿನಲ್ಲಿ ಚಾಲುಕ್ಯ ವೃತ್ತದಿಂದ ಹೆಬ್ಬಾಳ ವೃತ್ತದ ತನಕ ಉಕ್ಕಿನ ಸೇತುವೆ ನಿರ್ಮಿಸುವ ಸರಕಾರ ಯೋಜನೆ ವಿರೋಧಿಸಿ ನಮ್ಮ ಬೆಂಗಳೂರು ಫೌಂಡೇಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಕರ್ನಾಟಕ ಹೈ ಕೋರ್ಟ್ ಕೈಗೆತ್ತಿಕೊಂಡಿತು. ನಮ್ಮ ಬೆಂಗಳೂರು ಫೌಂಡೇಷನ್ ಪರ ವಕೀಲರು ಅರ್ಜಿಯ ಸ್ವರೂಪವನ್ನು ಕೋರ್ಟ್ ಗೆ ವಿವರಿಸಿದರು.
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಅದೇಶದ ಪರಿಣಾಮದ ಬಗ್ಗೆ ವಿಚಾರಿಸಿದ ಹೈ ಕೋರ್ಟ್ ನ ನ್ಯಾಯಮೂರ್ತಿಗಳಿಗೆ, ಎನ್ ಜಿಟಿ ಆದೇಶದ ಪ್ರಕಾರ ಈ ಉಕ್ಕಿನ ಸೇತುವೆ ಯೋಜನೆ ಮುಂದುವರಿಸಲು ಸಾಧ್ಯವಿಲ್ಲ. ಅದಕ್ಕೆ ಪರಿಸರ ಇಲಾಖೆಯ ಒಪ್ಪಿಗೆ ಪಡೆಯಬೇಕಾಗುತ್ತದೆ ಎಂದು ಫೌಂಡೇಷನ್ ನ ವಕೀಲರು ವಿವರಿಸಿದ್ದಾರೆ.
ಉಕ್ಕಿನ ಸೇತುವೆ ನಿರ್ಮಾಣ ಯೋಜನೆಯನ್ನು ಸರಕಾರ ಕೈಗೆತ್ತಿಕೊಳ್ಳಲಿಲ್ಲ. ಆದ್ದರಿಂದ ಅರ್ಜಿಯಲ್ಲಿ ಅರ್ಥವಿಲ್ಲ ಎಂದು ಕೋರ್ಟ್ ಹೇಳಿದೆ. ಆಗ ನಮ್ಮ ಬೆಂಗಳೂರು ಫೌಂಡೇಷನ್ ನ ವಕೀಲರು, ನಮ್ಮ ಅರ್ಜಿದಾರರು ಯೋಜನೆಯನ್ನು ಪ್ರಶ್ನೆ ಮಾಡಿರುವುದು ಬಿಎಂಪಿಸಿಯಿಂದ ಅನುಮತಿ ಪಡೆಯದೆ, ಬೆಂಗಳೂರು ವಿಷನ್ ಗ್ರೂಪ್ ನಿಂದ (ಬಿವಿಜಿ) ಅನುಮೋದನೆ ಪಡೆದಿರುವುದಕ್ಕೆ ಎಂದು ಹೇಳಿದ್ದಾರೆ.

ಸರಕಾರವು ಹೊರಡಿಸಿದ ಅಧಿಸೂಚನೆ ಬಿವಿಜಿಯ ಸಂವಿಧಾನಕ್ಕೆ ಮೀರಿದ್ದಾಗಿದೆ. ಮತ್ತು ಬಿವಿಜಿಯಿಂದ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದ್ದು, ಹೊಸದಾಗಿ ಮಂಜೂರು ಪ್ರಕ್ರಿಯೆ ನಡೆದು, ಎಂಪಿಸಿ ಮುಂದೆ ಇಡಬೇಕಾಗುತ್ತದೆ ಎಂದು ಎಂದು ಮೂರು ವರ್ಷದ ಹಿಂದಿನ ಅರ್ಜಿಯನ್ನು ವಕೀಲರು ಪ್ರಸ್ತಾಪಿಸಿದರು.
ಈ ಅಂಶವನ್ನು ಕೇಳಿದ ನಂತರ ಕೋರ್ಟ್, ಈ ಪ್ರಕರಣದಲ್ಲಿ ಮುಖ್ಯ ಎಂಪಿಸಿಯನ್ನು ಸೇರಿಸಿ ಅರ್ಜಿಯನ್ನು ಪ್ರಶ್ನಿಸಬೇಕೆ ಹಾಗೂ ಸರಕಾರಿ ಪರ ವಕೀಲರು ಮಾಹಿತಿ ನೀಡುವುದಾಗಿ ಹಾಗೂ ಸರಕಾರವು ಈ ಯೋಜನೆ ಕೈಗೆತ್ತಿಕೊಳ್ಳುವುದೇ ಇಲ್ಲವೆ ಎಂಬುದನ್ನು ಶುಕ್ರವಾರ ತಿಳಿಸುವುದಾಗಿ ಹೇಳಿದರು. ಆದ್ದರಿಂದ ಈ ಪ್ರಕರಣವನ್ನು ಜೂನ್ ಏಳಕ್ಕೆ ಮುಂದೂಡಲಾಯಿತು.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications