ಮೋಡ ಬಿತ್ತನೆಗೆ ಚಾಲನೆ; ಮೊದಲ ಫಲಾನುಭವಿ 'ರಾಮನಗರ' ಜಿಲ್ಲೆ
ಕರ್ನಾಟಕ ಸರ್ಕಾರದಿಂದ ಮೋಡ ಬಿತ್ತನೆ ಕಾರ್ಯ ಆರಂಭ. ಜಕ್ಕೂರು ವಿಮಾನ ನಿಲ್ದಾಣದಿಂದ ಕಾರ್ಯಕ್ಕೆ ಚಾಲನೆ. ಅಮೆರಿಕದಿಂದ ಬಂದಿದ್ದ ತಜ್ಞರುಳ್ಳ ವಿಮಾನದಿಂದ ಮೋಡ ಬಿತ್ತನೆ. ರಾಮನಗರ ಜಿಲ್ಲೆ ಮೊದಲ ಫಲಾನುಭವಿ.
ಬೆಂಗಳೂರು, ಆಗಸ್ಟ್ 21: ಬೆಂಗಳೂರಿನಲ್ಲಿ ಮೋಡ ಬಿತ್ತನೆ ಕಾರ್ಯ ಸೋಮವಾರ (ಆಗಸ್ಟ್ 21) ಮಧ್ಯಾಹ್ನ ಆರಂಭವಾಯಿತು. ಜಕ್ಕೂರು ವಿಮಾನ ಏರೋಡ್ರಂ ನಲ್ಲಿ ಅಮೆರಿಕದಿಂದ ಬಂದಿರುವ ವಿಶೇಷ ತಜ್ಞರುಳ್ಳ ವಿಮಾನದ ಮೂಲಕ ಈ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಮೋಡ ಬಿತ್ತನೆಗೂ ಮೊದಲು ಸಚಿವರಾದ ಎಚ್.ಕೆ. ಪಾಟೀಲ್, ಸೀತಾರಾಂ, ಕೃಷ್ಣ ಭೈರೇಗೌಡ ವಿಮಾನದೊಳಗೆ ಪರಿವೀಕ್ಷಣೆ ನಡೆಸಿದರು. ಮೋಡಗಳ ಮೇಲೆ ಸಿಲ್ವರ್ ಅಯೋಡಿನ್, ಪೊಟ್ಯಾಸಿಯಂ ಐಯೋಡೈಡ್ ಹಾಗೂ ಡ್ರೈ ಐಸ್ ಗಳನ್ನು ಈ ಕಾರ್ಯಾಚರಣೆಗೆ ಸಾಮಾನ್ಯವಾಗಿ ಬಳಸಲಾಗುತ್ತದೆ.
ಆರಂಭಿಕ ಹೆಜ್ಜೆಯಾಗಿ, ರಾಮನಗರದ ಜಿಲ್ಲೆಗಳಲ್ಲಿ ಈ ಮೋಡ ಬಿತ್ತನೆ ಮಾಡಲಾಗುತ್ತಿದೆ. ಬಿತ್ತನೆಯಾದ ಅರ್ಧ ಗಂಟೆಯಲ್ಲೇ ಮಳೆಯೂ ಬೀಳಲಿದೆ ಎಂದು ತಜ್ಞರು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಈ ಮಹತ್ವದ ಯೋಜನೆಗೆ ಕಳೆದ ವಾರ ಅಂತಿಮ ಸ್ಪರ್ಶ ಸಿಕ್ಕಿತ್ತು. ಅಮೆರಿಕದಿಂದ ಬಂದ ವಿಶೇಷವಾದ ಮೋಡ ಬಿತ್ತುವ ವಿಮಾನವೊಂದು ಜಕ್ಕೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು.

ಜಿಕೆವಿಕೆಯಲ್ಲಿ ನಿರಂತರ ಅಧ್ಯಯನ
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ (ಆರ್ ಡಿಪಿಆರ್) ವತಿಯಿಂದ ಈ ಯೋಜನೆಯನ್ನು ಸಾಕಾರಗೊಳಿಸಲಾಗುತ್ತಿದೆ. ಮೋಡ ಬಿತ್ತನೆಗೆ ಸೂಕ್ತ ಸಮಯವನ್ನು ಲೆಕ್ಕ ಹಾಕಲು ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ (ಜಿಕೆವಿಕೆ) ನಿರಂತರ ಅಧ್ಯಯನ ನಡೆಸಲಾಗಿತ್ತು.

ತಾಂತ್ರಿಕ ಕಾರಣಗಳಿಂದಾಗಿ ಮುಂದೂಡಿಕೆ
ಈ ಮೊದಲು ಆಗಸ್ಟ್ 18ರಂದು ಈ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿತ್ತಾದರೂ, ಆನಂತರ ಕೆಲವಾರು ತಾಂತ್ರಿಕ ಕಾರಣಗಳಿಂದಾಗಿ ಈ ಯೋಜನೆಯನ್ನು ಆಗಸ್ಟ್ 21ಕ್ಕೆ ಮುಂದೂಡಲಾಗಿತ್ತು. ಅದರಿಂದಾಗಿ, ಈಗ ಈ ಯೋಜನೆಗೆ ಚಾಲನೆ ನೀಡಲಾಗಿದೆ.

ಸಚಿವರು ಹೇಳಿದ್ದೇನು?
ಈ ಬಗ್ಗೆ ವಿವರಣೆ ನೀಡಿದ ಗ್ರಾಮೀಣಾಭಿವೃದ್ಧಿ ಸಚಿವ ಎಚ್. ಕೆ. ಪಾಟೀಲ್, ''ಹವಾಮಾನ ರೇಡಾರ್ ಗಳು ನೀಡಿದ ಮಾಹಿತಿಯ ಮೇರೆಗೆ ಆಗಸ್ಟ್ 21ರ ದಿನವನ್ನು ನಾವು ಮೋಡ ಬಿತ್ತನೆಗೆ ಆಯ್ಕೆ ಮಾಡಿಕೊಂಡೆವು. ಈ ಯೋಜನೆ ಫಲಕಾರಿಯಾಗುವುದೆಂಬ ವಿಶ್ವಾಸವಿದೆ'' ಎಂದರು.

ಎಸ್ಸೆಂ ಕೃಷ್ಣ ಆಳ್ವಿಕೆಯ ನೆನಪು
ಈ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯೆ ನೀಡಿ, ''ಈ ಹಿಂದೆ 2003ರಲ್ಲಿ, ಅಂದಿನ ಎಸ್.ಎಂ. ಕೃಷ್ಣ ಸರ್ಕಾರ, 83 ದಿನಗಳ ಕಾಲ ಸತತವಾಗಿ ಮೋಡ ಬಿತ್ತನೆ ಮಾಡಿತ್ತು. ಇದರಿಂದ ಉತ್ತಮ ಮಳೆಯೂ ಆಗಿತ್ತು'' ಎಂದು ತಿಳಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications