ರಾಜ್ಯದ ಐದು ಕಡೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಬೆಂಗಳೂರು, ಸೆ.6: ಬೆಳಗಾವಿ, ಮೈಸೂರು, ಹುಬ್ಬಳ್ಳಿ, ಗುಲ್ಬರ್ಗಾ ಹಾಗೂ ಬಳ್ಳಾರಿಯಲ್ಲಿ ಈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಬೆಳಗಾವಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ ಎಂದು ವೈದ್ಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ ತಿಳಿಸಿದ್ದಾರೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.
ನರರೋಗ, ಹೃದ್ರೋಗ, ಮೂತ್ರ ಪಿಂಡ ಸಮಸ್ಯೆ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆ ಎದುರಾದಾಗ ಚಿಕಿತ್ಸೆ ಪಡೆಯಲು ಇನ್ನು ಮುಂದೆ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಮೊರೆ ಹೋಗಬೇಕಿಲ್ಲ. ರಾಜ್ಯ ಸರ್ಕಾರವೇ ರಾಜ್ಯದ ಐದು ಕಡೆ ಇಂಥ ಆಸ್ಪತ್ರೆಗಳನ್ನು ಸ್ಥಾಪಿಸಲು ಮುಂದಾಗಿದೆ. ಹಾಲಿ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳನ್ನು ಸುಧಾರಿಸಲಾಗುವುದು, ಪ್ರತಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ಸ್ಥಾಪಿಸುವುದು ನಮ್ಮ ಉದ್ದೇಶ ಎಂದರು.

ರಾಜ್ಯದಲ್ಲಿ 6 ಹೊಸ ವೈದ್ಯ ಕಾಲೇಜು ಗಳನ್ನು ಸ್ಥಾಪಿಸಲು ಸರಕಾರ ನಿರ್ಧರಿಸಿದೆ. ಆದರೆ ಇದಕ್ಕೆ ಈ ವರ್ಷಭಾರತೀಯ ವೈದ್ಯ ಮಂಡಳಿ ಅನುಮತಿ ಸಿಕ್ಕಿಲ್ಲ. ಹೀಗಾಗಿ ಮುಂದಿನ ವರ್ಷ ದಿಂದ ಈ ಕಾಲೇಜುಗಳನ್ನು ಆರಂಭಿಸಲಾಗುವುದು. ಇತ್ತೀಚೆಗೆ ಕರ್ನಾಟಕಕ್ಕೆ ಭೇಟಿ ನೀಡಿದ್ದ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರು ಗುಲ್ಬರ್ಗಾದಲ್ಲಿ ಏಮ್ಸ್ ಸ್ಥಾಪನೆ ಶಿಫಾರಸು ಪರಿಗಣಿಸುವುದಾಗಿ ಹೇಳಿದ್ದಾರೆ.[ಜೆನರಿಕ್ ಔಷಧಿ ಖರೀದಿಗೆ ಪ್ರತ್ಯೇಕ ನಿಗಮ]
ಹೆಚ್ಚುವರಿ ನೇಮಕಾತಿ ಅಗತ್ಯ: ಹೊಸ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳಿಗೆ ಅಗತ್ಯವಿರುವ ವೈದ್ಯ ಸಿಬ್ಬಂದಿ ನೇಮಕ ಪ್ರಕ್ರಿಯೆ ಆರಂಭಿಸಲಾಗಿದೆ. ಈಗಾಗಲೇ ರಾಯಚೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಗತ್ಯ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಬೆಳಗಾವಿ ವೈದ್ಯ ಕಾಲೇಜಿ ನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಕೇಳಲಾಗಿದೆ. ವರದಿ ಬಂದ ತಕ್ಷಣ ಅವಶ್ಯ ಸಿಬ್ಬಂದಿ ನೇಮಕ ಮಾಡಲಾಗುವುದು ಎಂದರು.
ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರಕಾರ ಆರಂಭಿ ಸಿದ್ದ ಜೆನರಿಕ್ ಔಷಧ ಕೇಂದ್ರಗಳನ್ನು ನಮ್ಮ ಸರಕಾರ ಮುಚ್ಚಿಲ್ಲ. ಆದರೆ ಬಿಜೆಪಿ ನಾಯಕರು ವಿನಾಕಾರಣ ನಮ್ಮ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದರು.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications