Breaking: ಜಕ್ಕೂರು ಏರೋಡ್ರಮ್ ಖಾಸಗೀಕರಣ ಹುನ್ನರಾ: ಲೋಕಾಯುಕ್ತರಕ್ಕೆ ದೂರು ದಾಖಲು
ಬೆಂಗಳೂರು, ಸೆಪ್ಟೆಂಬರ್ 17: ಜಕ್ಕೂರು ಪ್ಲೈಯಿಂಗ್ ಶಾಲೆಗಾಗಿ ಮೈಸೂರು ಮಹಾರಾಜರು ಕೊಟ್ಟ ಜಾಗವನ್ನು ಖಾಸಗಿ ಕಂಪನಿಗೆ ನೀಡಲು ಕ್ರೀಡಾ ಇಲಾಖೆ ಸಜ್ಜಾಗಿದೆಯಾ ಎಂಬ ಅನುಮಾನ ಮೂಡಿದೆ ಎಂದು ರಾಘವೇಂದ್ರ ಎಂಬುವವರು ಲೋಕಾಯುಕ್ತಕ್ಕೆ ದೂರನ್ನು ನೀಡಿದ್ದಾರೆ.
211 ಎಕರೆ ಜಾಗದಲ್ಲಿ 75 ಎಕರೆ ಜಾಗವನ್ನು ಖಾಸಗಿಯವರಿಗೆ ನೀಡುವ ಹುನ್ನಾರದ ಬಗ್ಗೆ ಆರೋಪ ಕೇಳಿ ಬಂದಿದೆ. 1500 ಕೋಟಿ ಮೌಲ್ಯದ ಜಾಗ ಇದಾಗಿದ್ದು, ಈ ವಿಚಾರದಲ್ಲಿ ತನಿಖೆ ಮಾಡುವಂತೆ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯಿಂದ ರಾಜ್ಯಪಾಲ ಹಾಗೂ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.

ಜಕ್ಕೂರು ಏರೋ ಡ್ರಮ್ ಜಾಗವನ್ನು PPP (ಸಾರ್ವಜನಿಕ ಖಾಸಗಿ ಸಹಭಾಗಿತ್ವ) ಮಾದರಿಯಲ್ಲಿ ಸರ್ಕಾರ ಖಾಸಗಿಗೆ ಮಾರುವ ಹುನ್ನಾರ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಜಾಗದಲ್ಲಿ 25 ಎಕರೆ ಏರೋ ಕ್ಲಬ್, 50 ಎಕರೆಯನ್ನು ಕಮರ್ಷಿಯಲ್ ಕಾಂಪ್ಲೆಕ್ಸ್ ಏರಿಯಾ ಎಂದು ಅಭಿವೃದ್ಧಿ ಪಡಿಸಲು ಕ್ರೀಡಾ ಮತ್ತು ಯುವಜನ ಇಲಾಖೆ ಪ್ರಸ್ತಾವ ಸಿದ್ಧಪಡಿಸಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

"ಮಹಾರಾಜರು ಕೊಟ್ಟ ಜಾಗ ಒತ್ತುವರಿಯಾಗಿ 350 ಮೀಟರ್ನಲ್ಲಿ ರನ್ ವೇಯಾಗಿದೆ. ಇದರಿಂದ ಅಪಘಾತ ವಾಗುತ್ತಿದೆ. ಭೂಸ್ವಾಧೀನಕ್ಕೆ ಸರ್ಕಾರ ಸಮಿತಿ ರಚನೆ ಮಾಡಿದ್ದು ಅದು ಅನರ್ಹವಾಗಿತ್ತು. 170 ಮೀಟರ್ ರನ್ ವೇ ವಿಸ್ತರಣೆ ಮಾಡಲು ಸಾಧ್ಯವಾಗತ್ತಿಲ್ಲ. ವಿದ್ಯಾರ್ಥಿಗಳು ತರಬೇತಿಯ ವೇಳೆ ಅಪಘಾತವಾಗುತ್ತಿದೆ. ಯುಬಿ ಸಿಟಿ, ಗಾಲ್ಫ್ ಕ್ಲಬ್ ರೀತಿಯಂತೆ ಇದನ್ನು ಹೊಡೆಯುವ ಹುನ್ನಾರ ನಡೆಯುತ್ತಿದೆ. ಪ್ರಾರಂಭಿಕ ಹಂತದಲ್ಲೇ ತಡೆಯಬೇಕು ಎಂಬುದು ನಮ್ಮ ಉದ್ದೇಶ. ಲೋಕಾಯುಕ್ತಕ್ಕೆ ದಾಖಲೆ ಸಹಿತವಾಗಿ ದೂರನ್ನು ನೀಡಿದ್ದೇವೆ" ಎಂದು ರಾಘವೇಂದ್ರ ಎಂಬ ಸಾಮಾಜಿಕ ಹೋರಾಟಗಾರರು ಲೋಕಾಯುಕ್ತಕ್ಕೆ ದೂರನ್ನು ನೀಡಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ












Click it and Unblock the Notifications