Get Updates
Get notified of breaking news, exclusive insights, and must-see stories!

SC ST: ಪರಿಶಿಷ್ಟರ ಯೋಜನೆಗಳಿಗೆ ₹16,000 ಕೋಟಿ ಅನುದಾನ ಬಿಡುಗಡೆ ಮಾಡದೇ ದ್ರೋಹ..

ಬೆಂಗಳೂರು, ಜನವರಿ 27: ರಾಜ್ಯ ಸರ್ಕಾರ ಪ್ರಸಕ್ತ ಆರ್ಥಿಕ (2024-25) ಪೂರ್ಣಗೊಳ್ಳುತ್ತಾ ಬಂದರೂ ಇನ್ನೂ ಸಹಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಗಳ ಅಭಿವೃದ್ಧಿ ಯೋಜನೆಗಳಿಗೆ ವಿವಿಧ ಕಾರ್ಯಕ್ರಮಗಳಡಿ ಇಟ್ಟಿದ್ದ ಶೇಕಡಾ 41ರಷ್ಟು ಅನುದಾನ ಬಿಡುಗಡೆ ಮಾಡಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ಬಾಕಿ ಉಳಿಸಿಕೊಂಡು ಪರಿಶಿಷ್ಟರಿಗೆ ದ್ರೋಹ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಹ್ತ ಸರ್ಕಾರ 2024-25 ಸಾಲಿನ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ, ಉಪಜಾತಿ ಯೋಜನೆ (SCSP) ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆ (TSP) ಕಾರ್ಯಕ್ರಮಗಳ ಅಡಿ ಕೋಟ್ಯಾಂತರ ರೂಪಾಯಿ ಹಣ ಹಂಚಿಕೆ ಮಾಡಿದೆ. ಇದರಲ್ಲಿ ಇನ್ನೂವರೆಗೆ ₹16,429 ಕೋಟಿ ರೂಪಾಯಿ ನೀಡದೇ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆರ್.ಅಶೋಕ್ ಸೋಮವಾರ ಮಾಹಿತಿ ಹಂಚಿಕೊಂಡಿದ್ದಾರೆ.

Karnataka Government When will release SCSP TSP Pending Rs 16 000 Crore R Ashok

ಪರಿಶಿಷ್ಟರಿಗೆಲ್ಲ SCSP/TSP ಅನುದಾನ ಗ್ಯಾರೆಂಟಿ? ಶಿರ್ಷಿಕೆಯಡಿ ವರದಿ ಹಂಚಿಕೊಂಡಿದ್ದಾರೆ. 2024-25 ನೇ ಆರ್ಥಿಕ ವರ್ಷ ಮುಗಿಯಲು ಇನ್ನು ಕೇವಲ 2 ತಿಂಗಳ ಬಾಕಿ ಉಳಿದಿದೆ. ಹೀಗಿದ್ದರೂ SCSP/TSP ಯೋಜನೆ ಅಡಿಯಲ್ಲಿ ಹಂಚಿಕೆ ಮಾಡಿದ್ದ ರೂ.39,914 ಕೋಟಿ ಅನುದಾನದಲ್ಲೊಇ ಬರೋಬ್ಬರಿ 16,429 ಕೋಟಿ ಹಣವನ್ನು (41%) ಬಿಡುಗಡೆ ಮಾಡದೆ ಪರಿಶಿಷ್ಟ ಸಮುದಾಯಗಳಿಗೆ ಸರ್ಕಾರ ದ್ರೋಹ ಬಗೆದಿದೆ. ರಾಜ್ಯದಲ್ಲಿ ದಲಿತ ವಿರೋಧಿ ಸರ್ಕಾರ ಇದೆ ಎಂದು ಅವರು ದೂರಿದರು.

ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌.ಸಿ.ಮಹದೇವಪ್ಪ ನವರೇ, ಬರುವ ತಿಂಗಳು 2025-26ನೇ ಸಾಲಿನ ಬಜೆಟ್ ಮಂಡನೆ ಆಗಬೇಕಿದೆ. ಇನ್ನೆರಡು ತಿಂಗಳಲ್ಲಿ ಹೊಸ ಆರ್ಥಿಕ ವರ್ಷ ಜಾರಿಗೆ ಬರಲಿದೆ. ಆದರೆ ಕಳೆದ ವರ್ಷದ ಬಜೆಟ್ ನಲ್ಲಿ ಘೋಷಣೆಯಾದ ಶೇ. 41.46% SCSP/TSP ಅನುದಾನವನ್ನೇ ಈ ಬಿಡುಗಡೆ ಮಾಡಿಲ್ಲ.

ಪರಿಶಿಷ್ಟರ ಮೂಗಿಗೆ ತುಪ್ಪ ಸವರಿದರೆ ಕಲ್ಯಾಣ ಆಗುತ್ತಾ?

ಹಂಚಿಕೆ ಮಾಡಿದ ಅನುದಾನದಲ್ಲಿ ಬಾಕಿ ಉಳಿಸಿಕೊಂಡ ಹಣ ಬಿಡುಗಡೆ ಮಾಡುವುದು ಯಾವಾಗ? ಖರ್ಚು ಯಾವಾಗ ಮಾಡುವುದು? ಅನುದಾನ ಹಂಚಿಕೆ ಮಾಡಲು ಹಣವಿಲ್ಲದ ಮೇಲೆ ಸುಮ್ಮನೆ ಕಾಟಾಚಾರಕ್ಕೆ ಬಜೆಟ್ ನಲ್ಲಿ ಘೋಷಣೆ ಮಾಡುವುದಾದರೂ ಯಾತಕ್ಕೆ?. ನಿಮ್ಮ ಬಜೆಟ್ ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿ, ಬಿಟ್ಟಿ ಪ್ರಚಾರ ಮಾಡಿದ್ದರೆ ಪರಿಶಿಷ್ಟ ಸಮುದಾಯಗಳು ಕಲ್ಯಾಣ ಆಗುತ್ತಾ? ಎಂದು ಸಚಿವರನ್ನು ಪ್ರಶ್ನಿಸಿದ್ದಾರೆ.

ಬಜೆಟ್ ನಲ್ಲಿ ಅವಾಸ್ತವಿಕ ಘೋಷಣೆ ಮಾಡಿ, ಅನುದಾನ ಬಾಕಿ ಉಳಿಸಿಕೊಳ್ಳಲಾಗಿದೆ. ಇದೇನಾ ತಮ್ಮ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ಸಿದ್ದರಾಮಯ್ಯನವರು ಮತ್ತು ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ? ಎಂದು ಸರ್ಕಾರದ ನಡೆ ಖಂಡಿಸಿದ್ದಾರೆ.

ಒಂದು ಕಡೆ ಬಿಡುಗಡೆ ಮಾಡಿರುವ ಸ್ವಲ್ಪ ಅನುದಾನವನ್ನು ಲೂಟಿ ಹೊಡೆಯುತ್ತೀರಿ, ಮತ್ತೊಂದು ಕಡೆ ಘೋಷಣೆ ಮಾಡಿದ ಅನುದಾನವನ್ನು ಹಂಚಿಕೆ ಮಾಡದೆ ಬಾಕಿ ಉಳಿಸಿಕೊಳ್ಳುತ್ತೀರಿ. ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ. ತಮಗೆ ಮತ್ತು ತಮ್ಮ ಮುಖ್ಯಮಂತ್ರಿಗಳಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಅನ್ನುವುದು ಇನ್ನು ಮುಂದೆ ಬುದ್ಧ, ಬಸವ, ಅಂಬೇಡ್ಕರ್ ಹೆಸರು ಹೇಳಿಕೊಂಡು ರಾಜಕೀಯ ಮಾಡಬೇಡಿ ಎಂದು ಅವರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+