Get Updates
Get notified of breaking news, exclusive insights, and must-see stories!

ಬೆಂಗಳೂರು ಅಭಿವೃದ್ಧಿಗಾಗಿ 124 ಕೋಟಿ ರೂ. ಅನುದಾನ: ಡಿಕೆ ಶಿವಕುಮಾರ್

ಬೆಂಗಳೂರು, ಅಕ್ಟೋಬರ್ 05: ಕರ್ನಾಟಕ ರಾಜ್ಯ ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಆಧ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಈಗಾಗಲೇ ತಂದಿದೆ. ಇದರೊಂದಿಗೆ ಗ್ರೇಟರ್‌ ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಇದೀಗ 124 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಅನುದಾನದಲ್ಲಿ ನಗರದಲ್ಲಿನ ಫುಟ್‌ಪಾತ್‌ಗಳ ಅಗಲೀಕರಣ, ಟ್ರಾಫಿಕ್‌ ಸಮಸ್ಯೆ ನಿವಾರಣೆ, ಹೊಸ ಸೈಕಲ್‌ ಮಾರ್ಗಗಳು, ಪಾರ್ಕ್‌ಗಳ ನವೀಕರಣ, ಅತ್ಯಾಧುನಿಕ ಶವಾಗಾರಗಳ ನಿರ್ಮಾಣ ಸೇರಿದಂತೆ ಹಲವು ಮೂಲಸೌಕರ್ಯಗಳನ್ನು ಒದಗಿಸಲು ನಿರ್ಧರಿಸಲಾಗಿದೆ. ಇದರಿಂದ ಪಾದಚಾರಿ ಮಾರ್ಗದಲ್ಲಿ ಸುಸೂತ್ರ ಸಾರ್ವಜನಿರ ಸಂಚಾರ ಸಾಧ್ಯವಾಗುತ್ತದೆ. ಹಸರೀಕರಣ ಹೆಚ್ಚಿಸಲಾಗುತ್ತದೆ. ಸ್ಮಶಾನಗಳ ಮೆಲ್ದರ್ಜೆಗೆ ಏರಿಸುವ ಮೂಲಕ ಅಗತ್ಯ ವ್ಯವಸ್ಥೆ ಕಲ್ಪಿಸಲು ಸರ್ಕಾರ ಮುಂದಾಗಿದೆ.

Karnataka Govt Allocates Rs 124 Crore for Bengaluru Full Development DK Shivakumar

ಇಷ್ಟು ಮಾತ್ರವಲ್ಲದೇ ಬೆಂಗಳೂರನ್ನು ರಸ್ತೆ ಗುಂಡಿ ಮುಕ್ತ ಮಾಡುವ ಗುರಿ ಹೊಂದಿದ್ದೇವೆ. ಬೆಂಗಳೂರಲ್ಲಿ ರಸ್ತೆ ಗುಂಡಿಗಳನ್ನು ಸಂಪೂರ್ಣವಾಗಿ ಮುಚ್ಚಿ ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದರು.

ಬೆಂಗಳೂರಲ್ಲಿ ಇಲ್ಲಿಯವರೆಗೆ 13,000ಕ್ಕಿಂತ ಹೆಚ್ಚು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಇನ್ನೂ ನಗರದ ಹಲವೆಡೆ ವೈಟ್‌ ಟಾಪಿಂಗ್‌ ಕಾಮಗಾರಿಗಾಗಿ 1,100 ಕೋಟಿ ರೂಪಾಯಿಗಳ ಅನುದಾನ ನೀಡಲಾಗಿದೆ. ಇದರ ಜೊತೆಗೆ ರಸ್ತೆ ಗುಂಡಿಗಳ ಬಗ್ಗೆ ಗುಂಡಿ ಗಮನ ಅಪ್ಲಿಕೇಷನ್‌ನಲ್ಲೂ ಸಾರ್ವಜನಿಕರು ದೂರು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

05 ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗುಂಡಿ ದುರಸ್ತಿ

ಸೆಪ್ಟಂಬರ್ ಮೊದಲ ವಾರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಐದು ನಗರ ಪಾಲಿಕೆಗಳಾಗಿ ವಿಂಗಡಿಸಲಾಯಿತು. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಎಂದು ಮಾಡಲಾಯಿತು. ಅದರಡಿ "ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ಬೆಂಗಳೂರು ಪೂರ್ವ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆ ಮತ್ತು ಬೆಂಗಳೂರು ಪೂರ್ವ ನಗರ ಪಾಲಿಕೆ' ಎಂದು ಐದು ಪಾಲಿಕೆಗಳು ಬರುತ್ತವೆ. ಇವುಗಳ ಅಡಿಯಲ್ಲಿ ಐದು ಆಯುಕ್ತರ ನೃತೃತ್ವದಲ್ಲಿ ನಗರದಲ್ಲಿ ರಸ್ತೆಗುಂಡಿ ದುರಸ್ತಿ, ಒತ್ತುವರಿ ತೆರವು ಕೆಲಸ ನಡೆಯುತ್ತಿದೆ.

ದಸರಾ: ಕಸ ತೆರವಿಗೆ ಸೂಚನೆ

ನಾಡ ಹಬ್ಬ ದಸರಾ ಹಾಗೂ ಆಯುಧ ಪೂಜೆ ಹಬ್ಬದ ಆಚರಣೆಗಳ ನಂತರ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಬಹಳ ಪ್ರಮಾಣದಲ್ಲಿ ಕಸ ಹಾಗೂ ಹಬ್ಬದ ಅವಶೇಷಗಳು ಬಿದ್ದಿರುವುದು ಗಮನಕ್ಕೆ ಬಂದಿದೆ. ಬೆಂಗಳೂರಿನ ಮಹಾಜನತೆಗೆ ಶುದ್ಧ ಮತ್ತು ಆರೋಗ್ಯಕರ ಪರಿಸರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗಿ ನಗರದಲ್ಲಿನ ಕಸವನ್ನು ತೆರವುಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+