ಪೌರ ಕಾರ್ಮಿಕರಿಗೆ ಸಿಹಿಸುದ್ದಿ ಕೊಟ್ಟ ಕರ್ನಾಟಕ ಸರ್ಕಾರ
ಬೆಂಗಳೂರು, ಜುಲೈ 01: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರು ಪೌರ ಕಾರ್ಮಿಕರಿಗೆ ಸರ್ಕಾರ ಅಲ್ಪ ಪ್ರಮಾಣದ ಗುಡ್ ನ್ಯೂಸ್ ಅನ್ನು ನೀಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪೌರಕಾರ್ಮಿಕರಿಗೆ ಸಂಕಷ್ಟ ಭತ್ಯೆಯನ್ನು ನೀಡಲು ತೀರ್ಮಾನಿಸಿದೆ. ಪೌರಕಾರ್ಮಿಕರಿಗೆ ಸಂಕಷ್ಟ ಭತ್ಯೆ ಎಂದು ಎರಡು ಸಾವಿರ ಪ್ರತಿ ತಿಂಗಳು ಕೊಡಲಾಗುವುದು. ಮೊದಲು ನಗರದಲ್ಲಿ ಬಿಬಿಎಂಪಿಯೇ ಕೊಡಬೇಕು ಅಂತ ಇತ್ತು. ಆದರೆ ಸಂಪುಟ ಸಭೆಯಲ್ಲಿ ಸರ್ಕಾರವೇ ಭರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.
ಎಲ್ಲಾ ಸ್ಥಳೀಯ ಪೌರಕಾರ್ಮಿಕರಿಗೆ ಅನ್ವಯ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿಯನ್ನು ಸಂಕಷ್ಟ ಭತ್ಯೆಯನ್ನಾಗಿ ನೀಡಲು ಸಂಪುಟ ಅಸ್ತು ಎನ್ನುವ ಮೂಲಕ ಪೌರಕಾರ್ಮಿಕರ ಆಕ್ರೋಶವನ್ನು ತಣಿಸುವ ಕೆಲಸವನ್ನು ಮಾಡಿದ್ದಾರೆ.
ಇನ್ನು ಬಿಬಿಎಂಪಿ ಪೌರ ನೌಕರರ ಮಾಡುತ್ತಿರುವ ಹೋರಾಟದ ಫಲವಾಗಿ ಸಂಕಷ್ಟ ಭತ್ಯೆಯನ್ನು ನೀಡಲಾಗುತ್ತಿದೆಯೇ ಎಂದು ಕೇಳಿದ ಪ್ರಶ್ನೆಗೆ, "ಇಲ್ಲ ಎಂದು ಸಚಿವ ಸಂಪುಟ ಪೌರ ಕಾರ್ಮಿಕ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ಸಂಕಷ್ಟ ಭತ್ಯೆ ನೀಡಲಾಗುವುದು" ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

ಪೌರ ಕಾರ್ಮಿಕರ ಬೇಡಿಕೆಗೆ ಸ್ಪಂದಿಸದ ಸರ್ಕಾರ
- ಬೆಂಗಳೂರು ಹಾಗೂ ರಾಜ್ಯಾದ್ಯಂತ ನೇರವೇತನ ಪೌರ ಕಾರ್ಮಿಕರನ್ನು ಖಾಯಂ ಮಾಡಬೇಕು
- ಬೆಂಗಳೂರು ನಗರ ಮೇಲ್ಚಚಾರನ್ನು ( ಮೇಸ್ತ್ರಿ) ಖಾಯಂ ಮಾಡಬೇಕು
- ಬೆಂಗಳೂರು ನಗರ ಆಟೋಚಾಲಕರು, ಲಾರಿ ಚಾಲಕರು, ಲೋಡರ್ಸ್ ಸಹಾಯಕರನ್ನು ಖಾಯಂ ಮಾಡಬೇಕು
- ದಿವಂತಗ ಐ.ಡಿ.ಪಿ. ಸಾಲಪ್ಪರವರ ವರದಿಯನ್ನು ಜಾರಿಗೆ ತರಬೇಕು
ಬೆಂಗಳೂರು ಹಾಗೂ ರಾಜ್ಯಾದ್ಯಂತ ನೇರವೇತನ ಪೌರ ಕಾರ್ಮಿಕರನ್ನು ಖಾಯಂ ಮಾಡಬೇಕು. ಬೆಂಗಳೂರು ನಗರ ಮೇಲ್ಚಚಾರನ್ನು ( ಮೇಸ್ತ್ರಿ) ಖಾಯಂ ಮಾಡಬೇಕು. ಬೆಂಗಳೂರು ನಗರ ಆಟೋಚಾಲಕರು, ಲಾರಿ ಚಾಲಕರು, ಲೋಡರ್ಸ್ ಸಹಾಯಕರನ್ನು ಖಾಯಂ ಮಾಡಬೇಕು. ದಿವಂತಗ ಐ.ಡಿ.ಪಿ. ಸಾಲಪ್ಪರವರ ವರದಿಯನ್ನು ಜಾರಿಗೆ ತರಬೇಕು. ಒಳಚರಂಡಿ ಸ್ವಚ್ಛತಾ ಕಾರ್ಮಿಕರನ್ನು ಖಾಯಂ ಮಾಡ್ಬೇಕು ಎಂಬ ಬೇಡಿಕೆಯನ್ನು ಬಿಬಿಎಂಪಿಯ ಪೌರ ಕಾರ್ಮಿಕರು ಮಾಡಿದ್ದರು. ಆದರೆ ಬಿಬಿಎಂಪಿಯ ಪೌರಕಾರ್ಮಿಕರ ಬೇಡಿಕೆಗೆ ಸರ್ಕಾರ ಈಡೇರಿಸಿಲ್ಲ. ಸಂಕಷ್ಟ ಭತ್ಯೆ ಎಂದು ತಿಂಗಳಿಗೆ ಎರಡು ಸಾವಿರ ನೀಡಲು ಮಾತ್ರ ಸಂಪುಟ ತೀರ್ಮಾನಿಸಿದೆ.

ಗುತ್ತಿಗೆ ಪದ್ದತಿ ಬಿಟ್ಟು ನೇರ ವೇತನ ಪದ್ದತಿ ಜಾರಿ
2017ರಲ್ಲಿ ಮೂರು ದಿನ ಪೌರ ಕಾರ್ಮಿಕರು ಬೃಹತ್ ಪ್ರತಿಭಟನೆ. ಅಂದಿನ ಸರ್ಕಾರ ಗುತ್ತಿಗೆ ಪದ್ಧತಿಯನ್ನು ರದ್ದು ಮಾಡಿ ನೇರ ವೇತನ ಪದ್ಧತಿ ಜಾರಿ ಮಾಡಿದ್ದರು. ಆದರೆ ನೇರ ವೇತನ ಪದ್ಧತಿಯಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೋರಾಟ ಮಾಡಲಾಗುತ್ತಿದೆ. ನೇರವೇತನ ಪೌರಕಾರ್ಮಿಕರಿಗೆ ಒಟ್ಟು 17,995 ರೂ. ಸಂಬಳ, ಇದರಲ್ಲಿ ಇಎಸ್ಐ, ಪಿಎಫ್, ಕಟ್ ಮಾಡಿ ವೇತನ ಸಿಗುವುದು 11000 ರೂ ದಿಂದ 14000 ಸಾವಿರ ಮಾತ್ರ ಎಂಬುದು ಪೌರ ಕಾರ್ಮಿಕರ ಅಳಲಾಗಿದೆ.

ಆರೋಗ್ಯದ ಸಮಸ್ಯೆ ಹೆಚ್ಚಳದ ಸಮಸ್ಯೆ
ಬಿಬಿಂಪಿ ನೀಡುತ್ತಿರುವ ಸಂಬಳದಿಂದ ಕುಟುಂಬ ನಡೆಸಲು ಕಷ್ಟವಾಗುತ್ತಿದೆ. ಮನೆ ಬಾಡಿಗೆ, ಮಕ್ಕಳಿಗೆ ವಿದ್ಯಾಭ್ಯಾಸ, ಕುಟುಂಬವನ್ನು ಪೋಷಣೆ, ದಿನ ನಿತ್ಯದ ಭತ್ಯಗಳು ದರ ಹೆಚ್ಚಾಗಿವೆ. ಬೆಂಗಳೂರಿನಲ್ಲಿ ನಿತ್ಯ ಪೌರ ಕಾರ್ಮಿಕರು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆ ಸ್ವಚ್ಛ ಮಾಡಲಿದ್ದಾರೆ. ಆದರೆ ನೇರವೇತನ ಪೌರ ಕಾರ್ಮಿಕರಿಗೆ ನಾನಾ ರೀತಿಯ ಕಾಯಿಲೆ ಬರುತ್ತಿವೆ. ಹೃದಯಘಾತ, ಡಯಾಬಿಟಿಸ್, ಕಿಡ್ನಿ ವೈಫಲ್ಯ, ಉಸಿರಾಟದ ತೊಂದರೆ ಆಗುತ್ತಿದೆ. ಇದರ ಜೊತೆಗೆ ನೇರವೇತನ ಪೌರಾ ಕಾರ್ಮಿಕರಿಗೆ ಆರೋಗ್ಯ ಭದ್ರತೆ ಹೆಲ್ತ್ ಕಾಡ್೯, ಹೆಚ್ಚುವರಿ ವೇತನ ಹಾಗೂ ಬೋನಸ್ ನೀಡುತ್ತಿಲ್ಲ ಎಂಬುದು ಪೌರಕಾರ್ಮಿಕರ ಸಮಸ್ಯೆಗಳಾಗಿತ್ತು.

ಸಂಕಷ್ಟ ಭತ್ಯೆ ಹೆಚ್ಚಳ ಮಾಡಿ ಸುಮ್ಮನಾದ ಸರ್ಕಾರ
ಪೌರ ಕಾರ್ಮಿಕರು ನೇರ ವೇತನ ಪದ್ದತಿಯಿಂದ ನೇಮಕಾತಿಯನ್ನು ಖಾಯಂ ಮಾಡುವಂತೆ ಆಗ್ರಹಿಸುತ್ತಿದ್ದರು. ಆದರೆ ಪೌರ ಕಾರ್ಮಿಕರ ಆಗ್ರಹಕ್ಕೆ ಮಣಿಯದ ಸರ್ಕಾರ ಸಂಕಷ್ಟ ಭತ್ಯೆ ಎರಡು ಸಾವಿರ ಹೆಚ್ಚಳ ಮಾಡಿದೆ. ಪ್ರತಿ ತಿಂಗಳು ಸಂಕಷ್ಟ ಭತ್ಯೆ ನೀಡಲಾಗುವುದು ಎಂದು ಮಾತ್ರ ಸಂಪುಟ ಸಭೆಯಲ್ಲಿ ತೀರ್ಮಾನವನ್ನು ಮಾಡಲಾಗಿದೆ.
-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications