ಜೂ. 27ರಂದು ಬೆಂಗಳೂರು ನಿರ್ಮಾತೃ ಕೆಂಪೇಗೌಡ ಜಯಂತಿ
ಬೆಂಗಳೂರು, ಜೂನ್ 24 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜೂನ್ 27ರಂದು ಬೆಳಿಗ್ಗೆ 11.30 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಆಚರಿಸಲಾಗುತ್ತಿದೆ.
ಕಾರ್ಯಕ್ರಮದ ಉದ್ಫಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ.
ಮಾಜಿ ಪ್ರಧಾನ ಮಂತ್ರಿ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಎಚ್.ಡಿ. ದೇವೇಗೌಡ, ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಅನಂತಕುಮಾರ್, ಕೇಂದ್ರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ. ಸದಾನಂದಗೌಡ, ವಿಧಾನ ಪರಿಷತ್ತಿನ ಸಭಾಪತಿ ಡಿ.ಎಚ್. ಶಂಕರಮೂರ್ತಿ, ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ಶಿವಶಂಕರ್ ರೆಡ್ಡಿ ಅವರು ಭಾಗವಹಿಸಲಿದ್ದಾರೆ.

ಅಂದು ಬೆಳಿಗ್ಗೆ 9.30 ಗಂಟೆಗೆ ಸ್ವಾತಂತ್ರ್ಯ ಉದ್ಯಾನವನದಿಂದ ವಿಧಾನಸೌಧಕ್ಕೆ ನಾಡಪ್ರಭು ಕೇಂಪೇಗೌಡರ ಸ್ತಬ್ಧಚಿತ್ರದೊಂದಿಗೆ ಜಾನಪದ ಕಲಾತಂಡಗಳ ಮೆರವಣಿಗೆಯನ್ನು ಹಾಗೂ ಬೆಳಿಗ್ಗೆ 10.30 ಗಂಟೆಗೆ ಸುಗಮ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತುಮಕೂರು ಜಿಲ್ಲೆಯ ಹರೀಶ್ ಮತ್ತು ತಂಡದವರಿಂದ ಅರೆವಾದ್ಯ, ಬೆಂಗಳೂರು ಜಿಲ್ಲೆಯ ಕೀರ್ತನ್ ಮತ್ತು ತಂಡದವರಿಂದ ನಂದಿಧ್ವಜ, ಮೈಸೂರು ಜಿಲ್ಲೆಯ ಗಣೇಶ್ ಮತ್ತು ತಂಡದವರಿಂದ ನಗಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರಸ ಕುಮಾರ್ ಮತ್ತು ತಂಡದವರಿಂದ ಕೀಲು ಕುದುರೆ, ತುಮಕೂರು ಜಿಲ್ಲೆಯ ಎಚ್.ಬಿ. ರಾಜೇಗೌಡ ಮತ್ತು ತಂಡದವರಿಂದ ಪೂಜಾ ಕುಣಿತ ಇರಲಿದೆ.
ಚಾಮರಾಜನಗರ ಜಿಲ್ಲೆಯ ಮಾದಶೆಟ್ಟಿ ಮತ್ತು ತಂಡದವರಿಂದ ಕಂಸಾಳೆ, ಚಿತ್ರದುರ್ಗ ಜಲ್ಲೆಯ ಜಿ.ಎಸ್. ಲಿಂಗರಾಜ ಮತ್ತು ತಂಡದವರಿಂದ ಕೀಲು ಕುದುರೆ, ರಾಮನಗರ ಜಿಲ್ಲೆಯ ಶ್ರೀನಿವಾಸ ಮತ್ತು ತಂಡದವರಿಂದ ಸೋಮನ ಕುಣಿತ, ರಾಮನಗರ ಜಿಲ್ಲೆಯ ಶಿವಣ್ಣ ಅಂಕನಹಳ್ಳಿ ಮತ್ತು ತಂಡದವರಿಂದ ಡೊಳ್ಳು ಕುಣಿತ ಹಾಗೂ ಮೈಸೂರು ಜಿಲ್ಲೆಯ ರಾಜಪ್ಪ ಮತ್ತು ತಂಡದವರಿಂದ ವೀರಗಾಸೆ ಕುಣಿತ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದೆ.
ಸಚಿವ ಸಂಪುಟದ ಸದಸ್ಯರು, ವಿರೋಧ ಪಕ್ಷದ ನಾಯಕರು ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು, ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಮಹಾಪೌರರು ಸೇರಿದಂತೆ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
-
ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ










Click it and Unblock the Notifications