KAS Exam: ಯುಪಿಎಸ್ಸಿ ಮಾದರಿಯಂತೆ ಕೆಪಿಎಸ್ಸಿ ಪರೀಕ್ಷೆ ನಡೆಸಿ: ಬಸನಗೌಡ ಯತ್ನಾಳ್
ಬೆಂಗಳೂರು, ಜನವರಿ 02: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಇತ್ತೀಚೆಗೆ ಕರ್ನಾಟಕ ಆಡಳಿತ ಸೇವೆ (ಕೆಎಎಸ್) ನೇಮಕಾತಿ ಸಂಬಂಧ ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆಯಲ್ಲೂ ಸಹ ಲೋಪದೋಷಗಳು ಕಂಡು ಬಂದಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಭ್ಯರ್ಥಿಗಳು ಕನಸುಗಳ ಜೊತೆಗೆ ಆಟವಾಡಬೇಡಿ ಎಂದು ಸರ್ಕಾರ ಹಾಗೂ ಆಯೋಗದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಡಿಸೆಂಬರ್ 29 ರಂದು ಮರು ಪರೀಕ್ಷೆ ನಡೆಯಿತು. ಮೊದಲಿನಂತ ಈ ವೇಳೆಯು ಪ್ರಶ್ನೆ ಪತ್ರಿಕೆಗಳಲ್ಲಿ ತಪ್ಪುಗಳಾಗಿವೆ. ಆಯೋಗದ ಈ ನಡೆಗೆ ಗುಡುಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಪದೇ ಪರೀಕ್ಷಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿರುವ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತ್ತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕನಿಷ್ಠ ಸಾಮಾನ್ಯ ಜ್ಞಾನ ಇಲ್ಲವೇ?. ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಸಾಲು ಸಾಲು ತಪ್ಪುಗಳನ್ನು ಮಾಡುತ್ತಿರುವುದು ಆಯೋಗದ ಅಸಮರ್ಥತೆ, ನಿರುತ್ಸಾಹ, ಬೇಜವಾಬ್ದಾರಿ, ಜಡ್ಡುಗಟ್ಟಿರುವ ಮನಃಸ್ಥಿತಿಗೆ ಹಿಡಿದಿರುವ ಕೈಗನ್ನಡಿ ಎಂದು ಅವರು ದೂರಿದರು.
UPSC ಮಾದರಿಯಲ್ಲಿ KPSC ಪರೀಕ್ಷೆ ನಡೆಯಲಿ
ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರು ಕ್ರಿಯಾತ್ಮಕವಾಗಿ ಕೆಲಸ ಮಾಡಬೇಕು. ಕೇವಲ ಹೇಳಿಕೆಗಳಿಗೆ ಸೀಮಿತ ಆಗಬಾರದು. ಪರೀಕ್ಷಾರ್ಥಿಗಳ ಹತ್ತಾರು ತಿಂಗಳ ಪರಿಶ್ರಮ ಪಟ್ಟಿರುತ್ತಾರೆ. ಅವರು ಶ್ರಮ ನೀರುಪಾಲು ಆಗದಂತೆ ತಡೆಯಬೇಕು. ಅದಕ್ಕಾಗಿ ಆಯೋಗವು UPSC ಮಾದರಿಯಲ್ಲಿ ಲೋಕಸೇವಾ ಆಯೋಗ ಪರೀಕ್ಷೆಯನ್ನು ನಡೆಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಪ್ರಶ್ನೆ ಪತ್ರಿಕೆಯಲ್ಲಿ ತಪ್ಪುಗಳನ್ನು ಮಾಡಿ ಅದಕ್ಕೆ ಕೃಪಾಂಕವನ್ನು ಕೊಡುವುದರಿಂದ ಸರ್ಕಾರದ ಅಥವಾ ಪರೀಕ್ಷಾ ನಿಯಂತ್ರಕರ ತಪ್ಪನು ಮರೆಮಾಚಲು ಸಾಧ್ಯವಿಲ್ಲ. ಆಯೋಗದಲ್ಲಿ ಇಚ್ಛಾಶಕ್ತಿ ಹಾಗೂ ವೃತ್ತಿಪರತೆಯ ಕೊರತೆ ಎದ್ದು ಕಾಣುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಶ್ನೆ ಪತ್ರಿಕೆಗಳಲ್ಲಿ ವಾಕ್ಯ ರಚನೆಯಲ್ಲಿ ಲೋಪ ದೋಷಗಳು, ಪ್ರಶ್ನೆಗಳ ಉತ್ತರದ ಆಯ್ಕೆಗಳೇ ಕಣ್ಮರೆಯಾಗಿವೆ. ಕನ್ನಡದಲ್ಲಿ ಒಂದು, ಆಂಗ್ಲದಲ್ಲಿ ಒಂದು ಅರ್ಥ ನೀಡುವ ವಾಕ್ಯಗಳು ರಚನೆಯಾಗದೆ 'ಪರೀಕ್ಷಾರ್ಥಿ ಸ್ನೇಹಿ' ಯಾಗಿ ಪ್ರಶ್ನೆ ಪತ್ರಿಕೆ ಮೂಡಿ ಬರಬೇಕು.
ಆಯೋಗವು ಇಂತಹ ಪರೀಕ್ಷೆಗಳನ್ನು ಒಂದು ಬಾರಿ ಕೋಟ್ಯಾಂತರ ರೂಪಾಯಿ ಹಣವನ್ನು ವ್ಯಯಿಸಿರುತ್ತದೆ. ಆಯೋಗ ತನ್ನ ಜವಾಬ್ದಾರಿ ಅರಿತು ಮತ್ತಷ್ಟು ಪ್ರಬುದ್ಧತೆಯಿಂದ, ಪಕ್ವವಾಗಿ, ವೃತ್ತಿಪರತೆಯಿಂದ ಕೆಲಸ ಮಾಡಬೇಕು. ಈ ರೀತಿಯ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಶಾಸಕರು ಸಲಹೆ ನೀಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications