ಶಿವಕುಮಾರ ಸ್ವಾಮಿಗಳ ಲಿಂಗೈಕ್ಯ ದಿನವನ್ನು 'ದಾಸೋಹ ದಿನ' ಆಚರಿಸಲು ಆದೇಶ
ಬೆಂಗಳೂರು, ಸೆಪ್ಟೆಂಬರ್ 4: ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆಯ ದಿನವನ್ನು ದಾಸೋಹ ದಿನವೆಂದು (ಜನವರಿ 21) ಘೋಷಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಶಿವಕುಮಾರ ಮಹಾಸ್ವಾಮಿಗಳು ಕಾಯಕವೇ ಕೈಲಾಸ ಎಂಬ ತತ್ವದಡಿ 1930ರಲ್ಲಿ ಸಿದ್ದಗಂಗಾ ಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದಲೂ ನಿರಂತರವಾಗಿ ಮಠಕ್ಕೆ ಬರುವ ಲಕ್ಷಾಂತರ ಬಡ ಮಕ್ಕಳಿಗೆ ಜಾತಿ-ಧರ್ಮ ಭೇದವಿಲ್ಲದೆ ವಿದ್ಯೆ, ವಸತಿ ಹಾಗೂ ಅನ್ನ ದಾಸೋಹ ನೀಡಿ ತ್ರಿವಿದ ದಾಸೋಹಿಗಳಾಗಿದ್ದರು.
1960ರ ದಶಕದಲ್ಲಿ ಭಾರತ ದೇಶವೇ ಆಹಾರದ ಕೊರತೆಯನ್ನು ಎದುರಿಸುತ್ತಿದ್ದಾಗ ಶ್ರೀಗಳು ತಾವೇ ಜೋಳಿಗೆ ಹಿಡಿದು ಜನರಿಂದ ದಾನ ಪಡೆದು ಹಸಿವು ನೀಗಿಸಿದರು.

ಶ್ರೀಗಳ ಪರಂಪರೆಯಂತೆ ಇಂದಿಗೂ ಸಾವಿರಾರು ಬಡ ಮಕ್ಕಳಿಗೆ ಹಾಗೂ ಭಕ್ತರಿಗೆ ನಿತ್ಯ ದಾಸೋಹ ಮಾಡಲಾಗುತ್ತಿದೆ. ಶಿವಕುಮಾರ ಶ್ರೀಗಳು ಒಂಬತ್ತು ದಶಕಗಳಿಗೂ ಮೀರಿ ನಿತ್ಯ ದಾಸೋಹಗೈದು ನಾಡಿನ ಇತರೆ ಎಲ್ಲರಿಗೂ ಮಾದರಿಯಾಗಿದ್ದು, ದಾಸೋಹ ಶ್ರೇಷ್ಠರಾಗಿದ್ದರು.
ಶಿವಕುಮಾರ ಮಹಾಸ್ವಾಮಿಗಳ ಈ ಕೈಂಕರ್ಯ ಪರಿಗಣನೆಯಲ್ಲಿ 2007ರಲ್ಲಿ ಭಾರತ ಸರ್ಕಾರವು ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿರುತ್ತದೆ.
ಶಿವಕುಮಾರ ಮಹಾಸ್ವಾಮಿಗಳ ಸಮಾಜ ಸೇವಾ ಕಾರ್ಯ ಕ್ಷೇತ್ರಗಳಾದ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮನ್ನೆ ತಾವು ತೊಡಗಿಸಿಕೊಂಡು ಲಿಂಗೈಕ್ಯರಾಗಿದ್ದು, ಇವರು ನಿತ್ಯಪೂಜ್ಯರು ಹಾಗೂ ಕಾಲಕಾಲಕ್ಕೂ ಅನುಸರಣೀಯವಾಗಿದ್ದು, ಇವರ ಅಭೂತಪೂರ್ವ ಸೇವೆಯನ್ನು ಸ್ಮರಿಸುವ ಸಲುವಾಗಿ, ಶ್ರೀಗಳು ಲಿಂಗೈಕ್ಯರಾದ ದಿನವನ್ನು ಅಂದರೆ ಜನವರಿ 21ರಂದು ಸರ್ಕಾರದ ವತಿಯಿಂದ ದಾಸೋಗ ದಿನವೆಂದು ಆಚರಿಸುವಂತೆ ಆದೇಶ ಹೊರಡಿಸಲಾಗಿದೆ.

ಈ ಬಗ್ಗೆ ಪೂಜ್ಯ ಡಾ. ಶಿವಕುಮಾರ ಮಹಾಸ್ವಾಮಿಗಳ ಭಾವಚಿತ್ರದ ಪ್ರತಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪಡೆದುಕೊಂಡು, ಸದರಿ ದಿನದಂದು ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ಈ ಬಗ್ಗೆ ರೂಪುರೇಷೆಗಳನ್ನು ತಯಾರಿಸಿ ಕಾರ್ಯಕ್ರಮವನ್ನು ಜಾರಿಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಎಂ. ಎಂ. ರಾಜು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
Recommended Video
-
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications