ಶಿವಕುಮಾರ ಸ್ವಾಮಿಗಳ ಲಿಂಗೈಕ್ಯ ದಿನವನ್ನು 'ದಾಸೋಹ ದಿನ' ಆಚರಿಸಲು ಆದೇಶ
ಬೆಂಗಳೂರು, ಸೆಪ್ಟೆಂಬರ್ 4: ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆಯ ದಿನವನ್ನು ದಾಸೋಹ ದಿನವೆಂದು (ಜನವರಿ 21) ಘೋಷಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಶಿವಕುಮಾರ ಮಹಾಸ್ವಾಮಿಗಳು ಕಾಯಕವೇ ಕೈಲಾಸ ಎಂಬ ತತ್ವದಡಿ 1930ರಲ್ಲಿ ಸಿದ್ದಗಂಗಾ ಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದಲೂ ನಿರಂತರವಾಗಿ ಮಠಕ್ಕೆ ಬರುವ ಲಕ್ಷಾಂತರ ಬಡ ಮಕ್ಕಳಿಗೆ ಜಾತಿ-ಧರ್ಮ ಭೇದವಿಲ್ಲದೆ ವಿದ್ಯೆ, ವಸತಿ ಹಾಗೂ ಅನ್ನ ದಾಸೋಹ ನೀಡಿ ತ್ರಿವಿದ ದಾಸೋಹಿಗಳಾಗಿದ್ದರು.
1960ರ ದಶಕದಲ್ಲಿ ಭಾರತ ದೇಶವೇ ಆಹಾರದ ಕೊರತೆಯನ್ನು ಎದುರಿಸುತ್ತಿದ್ದಾಗ ಶ್ರೀಗಳು ತಾವೇ ಜೋಳಿಗೆ ಹಿಡಿದು ಜನರಿಂದ ದಾನ ಪಡೆದು ಹಸಿವು ನೀಗಿಸಿದರು.

ಶ್ರೀಗಳ ಪರಂಪರೆಯಂತೆ ಇಂದಿಗೂ ಸಾವಿರಾರು ಬಡ ಮಕ್ಕಳಿಗೆ ಹಾಗೂ ಭಕ್ತರಿಗೆ ನಿತ್ಯ ದಾಸೋಹ ಮಾಡಲಾಗುತ್ತಿದೆ. ಶಿವಕುಮಾರ ಶ್ರೀಗಳು ಒಂಬತ್ತು ದಶಕಗಳಿಗೂ ಮೀರಿ ನಿತ್ಯ ದಾಸೋಹಗೈದು ನಾಡಿನ ಇತರೆ ಎಲ್ಲರಿಗೂ ಮಾದರಿಯಾಗಿದ್ದು, ದಾಸೋಹ ಶ್ರೇಷ್ಠರಾಗಿದ್ದರು.
ಶಿವಕುಮಾರ ಮಹಾಸ್ವಾಮಿಗಳ ಈ ಕೈಂಕರ್ಯ ಪರಿಗಣನೆಯಲ್ಲಿ 2007ರಲ್ಲಿ ಭಾರತ ಸರ್ಕಾರವು ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿರುತ್ತದೆ.
ಶಿವಕುಮಾರ ಮಹಾಸ್ವಾಮಿಗಳ ಸಮಾಜ ಸೇವಾ ಕಾರ್ಯ ಕ್ಷೇತ್ರಗಳಾದ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮನ್ನೆ ತಾವು ತೊಡಗಿಸಿಕೊಂಡು ಲಿಂಗೈಕ್ಯರಾಗಿದ್ದು, ಇವರು ನಿತ್ಯಪೂಜ್ಯರು ಹಾಗೂ ಕಾಲಕಾಲಕ್ಕೂ ಅನುಸರಣೀಯವಾಗಿದ್ದು, ಇವರ ಅಭೂತಪೂರ್ವ ಸೇವೆಯನ್ನು ಸ್ಮರಿಸುವ ಸಲುವಾಗಿ, ಶ್ರೀಗಳು ಲಿಂಗೈಕ್ಯರಾದ ದಿನವನ್ನು ಅಂದರೆ ಜನವರಿ 21ರಂದು ಸರ್ಕಾರದ ವತಿಯಿಂದ ದಾಸೋಗ ದಿನವೆಂದು ಆಚರಿಸುವಂತೆ ಆದೇಶ ಹೊರಡಿಸಲಾಗಿದೆ.

ಈ ಬಗ್ಗೆ ಪೂಜ್ಯ ಡಾ. ಶಿವಕುಮಾರ ಮಹಾಸ್ವಾಮಿಗಳ ಭಾವಚಿತ್ರದ ಪ್ರತಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪಡೆದುಕೊಂಡು, ಸದರಿ ದಿನದಂದು ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ಈ ಬಗ್ಗೆ ರೂಪುರೇಷೆಗಳನ್ನು ತಯಾರಿಸಿ ಕಾರ್ಯಕ್ರಮವನ್ನು ಜಾರಿಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಎಂ. ಎಂ. ರಾಜು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
Recommended Video
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications