ಕೊರೋನಾ ವಾರಿಯರ್ಸ್ಗಳಿಗೆ ಪರಿಹಾರ ನೀಡದ ಸರ್ಕಾರ: ಎಎಪಿ
ಬೆಂಗಳೂರು, ಫೆಬ್ರವರಿ 19: ಸರ್ಕಾರ ಅಳೆದು ತೂಗಿ ಸರ್ಕಾರಿ ನೌಕರರನ್ನೂ ಕೊರೋನಾ ವಾರಿಯರ್ಸ್ಗಳೆಂದು ಘೋಷಿಸಿತು ಆದರೆ ಪ್ರಾಣಪಣಕ್ಕಿಟ್ಟು ಕೆಲಸ ಮಾಡಿದ ಇವರುಗಳಿಗೆ ಕನಿಷ್ಟ ಗೌರವ, ನ್ಯಾಯಯುತ ಪರಿಹಾರ ನೀಡದೆ ರಾಜ್ಯ ಬಿಜೆಪಿ ಸರ್ಕಾರ ಅಮಾನವೀಯವಾಗಿ ನಡೆದುಕೊಂಡಿದೆ, ಇದೊಂದು ಅಸಮರ್ಥ, ನಾಲಾಯಕ್ ಸರ್ಕಾರ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಕಿಡಿಕಾರಿದ್ದಾರೆ.
ಕೊರೋನಾ ವಾರಿಯರ್ಸ್ಗಳಾಗಿ ದುಡಿದು ಮಡಿದವರಿಗೆ ಈ ಕೂಡಲೇ 30 ಲಕ್ಷ ಪರಿಹಾರ ನೀಡಬೇಕು ಎಂದು ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ಸದಂ, ಉಷಾ ಮೋಹನ್ ಆಗ್ರಹಿಸಿದರು.
ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರವೇ ಘೋಷಿಸಿದ್ದ 30 ಲಕ್ಷ ರೂಪಾಯಿ ಪರಿಹಾರವನ್ನು ಬಿಬಿಎಂಪಿಯ 17 ಸಿಬ್ಬಂದಿಗಳ ಕುಟುಂಬದವರಿಗೆ ಇನ್ನೂ ತಲುಪಿಸದಿರುವುದು ಅಮಾನವೀಯ ವರ್ತನೆ. ಅಲ್ಲದೇ, ಕೊರೋನಾ ಸಂದರ್ಭದಲ್ಲಿ ನಡೆದ ವ್ಯಾಪಕ ಭ್ರಷ್ಟಾಚಾರದಿಂದ ತನ್ನ ಜೇಬು ತುಂಬಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ಕಾರದ ಬೊಕ್ಕಸವನ್ನು ಖಾಲಿ ಮಾಡಿ, ತಾವೇ ಘೋಷಿಸಿದ ಪರಿಹಾರ ನೀಡಲು ಹಣವಿಲ್ಲದಷ್ಟು ಈ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿದ್ದಾರೆ ಎಂದು ಆರೋಪಿಸಿದರು.

ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೊರೋನಾ ಯೋಧರು ಮೃತಪಟ್ಟ ಮರುಕ್ಷಣವೇ 1 ಕೋಟಿ ರೂಪಾಯಿ ಪರಿಹಾರ ನೀಡುತ್ತಿದ್ದಾರೆ. ಕಳೆದ ಗುರುವಾರ ಮೃತಪಟ್ಟ ಇಬ್ಬರು ಕೊರೋನಾ ಯೋಧರ ಕುಟುಂಬಗಳನ್ನು ಖುದ್ದಾಗಿ ಭೇಟಿ ನೀಡಿ ಚೆಕ್ ಹಸ್ತಾಂತರಿಸಿದ್ದಾರೆ. ಕೇವಲ 60 ಸಾವಿರ ಕೋಟಿ ಬಜೆಟ್ ಹೊಂದಿರುವ ರಾಜ್ಯ ಇಷ್ಟು ಪ್ರಮಾಣದಲ್ಲಿ ಪರಿಹಾರ ನೀಡುವುದಾದರೆ, ಲಕ್ಷ ಕೋಟಿ ಲೆಕ್ಕದಲ್ಲಿ ಬಜೆಟ್ ಮಾಡುವ ನಿಮಗೆ ಪರಿಹಾರ ನೀಡಲು ಯಾವ ಅಡೆ ತಡೆ ಇದೆ ಎಂದು ಪ್ರಶ್ನಿಸಿದರು.
ಈ ಕೂಡಲೇ ಬಿಬಿಎಂಪಿ ಹಾಗೂ ಇತರೇ ಇಲಾಖೆಗಳಲ್ಲಿ ಕೊರೋನಾ ಯೋಧರಾಗಿ ದುಡಿದು ಮೃತಪಟ್ಟ ಸಿಬ್ಬಂದಿಗಳ ಕುಟುಂಬದವರಿಗೆ ಈ ಕೂಡಲೇ 30 ಲಕ್ಷ ಪರಿಹಾರ ನೀಡಬೇಕು. ಇಲ್ಲದಿದ್ದ ಪಕ್ಷದಲ್ಲಿ ಎಲ್ಲಾ ಕುಟುಂಬದ ಸದಸ್ಯರನ್ನು ಸೇರಿಸಿಕೊಂಡು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಬಿಬಿಎಂಪಿ ನೌಕರರ ಜತೆ ಆಮ್ ಆದ್ಮಿ ಪಕ್ಷ ಯಾವಾಗಲೂ ಇರುತ್ತದೆ ಎಂದರು.
-
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications