ಗುತ್ತಿಗೆದಾರರ ಬಿಲ್ ಪಾವತಿಗೆ ಸಾಲ ಪಡೆಯಲು ಬಿಬಿಎಂಪಿಗೆ ಅನುಮತಿ
ಬೆಂಗಳೂರು ನಗರ ವ್ಯಾಪ್ತಿಯ ಕಾಮಗಾರಿಗಳ ಬಾಕಿ ಬಿಲ್ ಪಾವತಿಗೆ ಹೊಸ ಯೋಜನೆ ತರಲಾಗುತ್ತಿದೆ. ಇದರಡಿ ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಯಾಗಲಿದೆ. ಯಾವ ವ್ಯವಸ್ಥೆಯಡಿ ಪಾವತಿಯಾಗಲಿದೆ ತಿಳಿಯಿರಿ.
ಬೆಂಗಳೂರು, ಫೆಬ್ರವರಿ 07: ಬೆಂಗಳೂರು ನಗರ ವ್ಯಾಪ್ತಿಯ ಕಾಮಗಾರಿಗಳ ಬಾಕಿ ಬಿಲ್ ಪಾವತಿಗೆ 400 ಕೋಟಿ ರೂಪಾಯಿಗಳ ಬ್ಯಾಂಕ್ ಸಾಲ ಪಡೆಯಲು ಬಿಬಿಎಂಪಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಒಂದು ವಿನೂತನ ಯೋಜನೆ ತರುತ್ತಿದೆ. ಅದರಿಂದಲೇ ಎರಡು ವರ್ಷಗಳವರೆಗೆ ಬಾಕಿ ಬಿಲ್ ಪಾವತಿಗೆ ಕಾಯುತ್ತಿರುವ ಗುತ್ತಿಗೆದಾರರಿಗೆ ಹಣ ಪಾವತಿಯಾಗಲಿದೆ. ಗುತ್ತಿಗೆದಾರರು ಬ್ಯಾಂಕ್ ಬಡ್ಡಿದರ ಪಾವತಿಸಲು ಈ ಹೊ ವ್ಯವಸ್ಥೆ ಸಹಕಾರಿಯಗಲಿದೆ. ಒಟ್ಟಾರೆ ಗುತ್ತಿಗೆದಾರರಿಗೆ 2020-2021, 2021-2022 ಹಾಗೂ 2022-2023 ವರ್ಷಗಳಲ್ಲಿನ ಕಾಮಗಾರಿ ಹಣ 2,782 ಕೋಟಿ ರೂ. ಬರಬೇಕಿದೆ.
ಗುತ್ತಿಗೆದಾರರ ಬಾಕಿ ಬಿಲ್ಗಳ ತೆರವು ಮಾಡಲು ಹೊಸ ಯೋಜನೆಯಲ್ಲಿ ನಗದು ಕೊರತೆ ಇತ್ತು. ಹೀಗಾಗಿಯೇ ರಾಜ್ಯ ಸರ್ಕರ ಹಣ ಪಡೆಯಲು ಬಿಬಿಎಂಪಿ ಸಮ್ಮತಿಸಿದೆ. ಅದಕ್ಕಾಗಿ ವಿನೂತನ ಯೋಜನೆ ಹೊರತರಲು ಬ್ಯಾಂಕ್ ಅನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಬಿಬಿಎಂಪಿಗೆ ಸೂಚಿಸಿದೆ.

ಯೋಜನೆಯಡಿ ಆಯ್ಕೆಯಾದ ಬಿಬಿಎಂಪಿ ವ್ಯಾಪ್ತಿಯ ಗುತ್ತಿಗೆದಾರರ ಪಟ್ಟಿಯನ್ನು ಸಾರ್ವಜನಿಕ ಡೊಮೈನ್ನಲ್ಲಿ ಲಭ್ಯವಾಗುವಂತೆ ಅಳವಡಿಸಬೇಕು. ಆ ಮೂಲಕ ಪಾರದರ್ಶಕ ಕಾರ್ಯವಿಧಾನವನ್ನು ರಚಿಸಲು ಸರ್ಕಾರ ತಿಳಿಸಿದ್ದು, ಈ ಸಂಬಂಧ ನಗರಾಭಿವೃದ್ಧಿ ಇಲಾಖೆ (UDD) ಆದೇಶ ಹೊರಡಿಸಿದೆ. ಜೇಷ್ಠತಾ ಪಟ್ಟಿ ಆಧರಿಸಿ ಬಾಕಿ ಬಿಲ್ ಪಾವತಿಯಾಗಲಿದೆ.
ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡಲು 'ಆಪ್ಶನಲ್ ವೆಂಡರ್ ಬಿಲ್ ಡಿಸ್ಕೌಂಟಿಂಗ್ ವ್ಯವಸ್ಥೆ' (ಒವಿಡಿಎಸ್) ತರಲಾಗುತ್ತಿದೆ. ಇದರಿಂದಲೇ ಕಾಮಗಾರಿಗಳ ಬಾಕಿ ಬಿಲ್ ಗುತ್ತಿಗೆದಾರರಿಗೆ ಪಾವತಿ ಆಗಲಿದೆ. ಈ ವ್ಯವಸ್ಥೆಯಲ್ಲೂ ಬಿಲ್ಗಳ ಜೇಷ್ಠತೆಯಡಿ ಬಿಬಿಎಂಪಿ ಹಣ ನೀಡಲಿದೆ. ಈ ವ್ಯವಸ್ಥೆಯಲ್ಲಿ ಸುಳ್ಳು ಬಿಲ್ ಸಲ್ಲಿಸಿ ಹಣ ಪಡೆಯಲು ಅವಕಾಶ ಇಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಗುತ್ತಿಗೆದಾರರ ಕೆಲಸವನ್ನು ಕಾರ್ಯಗತಗೊಳಿಸಲು ಮೂರನೇ ವ್ಯಕ್ತಿಗಳಿಂದ ಎರವಲು ಪಡೆದ ಅಥವಾ ಆರ್ಥಿಕ ಸಹಾಯವನ್ನು ಪಡೆದವರಿಗೆ ಈ ಯೋಜನೆ/ವ್ಯವಸ್ಥೆಯಿಂದ ವಿಶೇಷ ಪ್ರಯೋಜನ ಸಿಗಲಿದೆ. ಮೂಲಗಳ ಪ್ರಕಾರ, ಕಾಮಗಾರಿಗಳಿಗೇ ಹೆಚ್ಚು ಹಣ ಖರ್ಚು ಮಾಡುತ್ತಿರುವ ಬಿಬಿಎಂಪಿ ಗುತ್ತಿಗೆದಾರರಿಗೆ ಸಕಾಲದಲ್ಲಿ ಹಣ ಪಾವತಿ ಮಾಡುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿಯೇ ಎರಡು ವರ್ಷಗಳ ಬಿಲ್ ಪಾವತಿ ಆಗಿಲ್ಲ ಎನ್ನಲಾಗಿದೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು









Click it and Unblock the Notifications