ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರಿಂದ ಕ್ರಿಮಿನಲ್ ಕೇಸ್?: ಮಾರ್ಚ್ 1ರಿಂದ ಎಲ್ಲ ಕಾಮಗಾರಿ ಸ್ಟಾಪ್!
ಬೆಂಗಳೂರು, ಫೆಬ್ರವರಿ 20: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲ ಎಂಬ ಹಣೆಪಟ್ಟಿ ಸರ್ಕಾರಕ್ಕೆ ಇದೆ. ಈ ಮಧ್ಯೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಕಾಮಗಾರಿಗಳ ಹಣ ಬಾಕಿ ಉಳಿದಿಕೊಂಡಿದೆ. ಸಾವಿರಾರು ಕೋಟಿ ರೂಪಾಯಿ ಸರ್ಕಾರ ಪಾವತಿಸಬೇಕಿದೆ. ಸದ್ಯ ಗುತ್ತಿಗೆದಾರರು ಮುಂದಿನ ತಿಂಗಳಿಂದ ಕಾಮಗಾರಿ ಸ್ಥಗಿತಗೊಳಿಸಿ ಸರ್ಕಾರಕ್ಕೆ ಶಾಕ್ ನೀಡಲು, ಸರ್ಕಾರದ ವಿರುದ್ಧ ಕ್ರಮಿನಲ್ ಮೊಕದ್ಧಮತೆ ಹೂಡಲು ಸಜ್ಜಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷರು ಹೇಳಿದ್ದು ನಿಜ ಎಂದು ವಿಪಕ್ಷ ನಾಯಕರು ಹೇಳಿದರು.
ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಬಳಿ ರಸ್ತೆಗುಂಡಿಗೆ ಒಂದು ಬುಟ್ಟಿ ಮಣ್ಣು ಹಾಕಲೂ ದುಡ್ಡಿಲ್ಲ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಹೇಳಿದ್ದು ಹೇಳಿದ್ದು ಅಕ್ಷರಶಃ ನಿಜ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವರು ವಿವರ ಹಂಚಿಕೊಂಡಿದ್ದಾರೆ.

ಸರ್ಕಾರದ ಬೊಕ್ಕಸ ಬರಿದಾಗಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಸುಳ್ಳು ಹೇಳುತ್ತಲೇ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಗುತ್ತಿಗೆದಾರರಿಗೆ 64,000 ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿಕೊಂಡಿದೆ ಎಂದು ಅವರು ಲೆಕ್ಕ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದಮೇಲೆ ಕಳೆದ 20 ತಿಂಗಳುಗಳಲ್ಲಿ ಈವರೆಗೂ ಒಂದೇ ಒಂದು ಹೊಸ ಕಾಮಗಾರಿಗೂ ಗುದ್ದಲಿ ಪೂಜೆ ಮಾಡಿಲ್ಲ. ಈಗ ಬಿಲ್ ಬಾಕಿ ಪಾವತಿ ಮಾಡದಿದ್ದರೆ ಜಾರಿಯಲ್ಲಿರುವ ಕಾಮಗಾರಿಗಳು ನಿಲ್ಲುತ್ತವೆ. ಸರ್ಕಾರದ ಮೇಲೆ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ದುರಾಸೆಗೆ ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಯಾವ ದುಸ್ಥಿತಿಗೆ ತಂದಿಟ್ಟಿದ್ದೀರಿ ನೋಡಿ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹಾಳುಗೆಡವಿ 16 ಬಜೆಟ್ ಮಂಡಿಸುವ ದಾಖಲೆ ಬರೆದರೇನು, ಎರಡೆರಡು ಬಾರಿ ಮುಖ್ಯಮಂತ್ರಿ ಆದರೇನು? ಕರ್ನಾಟಕ ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂದೇ ಇತಿಹಾಸ ತಮ್ಮನ್ನ ನೆನಪಿಡುತ್ತದೆ ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಾರ್ಚ್ 1ರಿಂದ ಕಾಮಗಾರಿ ಬಂದ್: ಗುತ್ತಿಗೆದಾರರು
ಈಗಾಗಲೇ ರಾಜ್ಯ ಸರ್ಕಾರ ನೆಚ್ಚಿಕೊಂಡು ಎಲ್ಲ ಜಿಲ್ಲೆಗಳಲ್ಲಿ ಕಾಮಗಾರಿ ನಡೆಸಿಕೊಂಡು ಬಂದಿರುವ ಗುತ್ತಿಗೆದಾರರಿಗೆ ರಾಜ್ಯ ಸರ್ಕಾರದಿಂದ 64000 ಕೋಟಿ ರೂಪಾಯಿ ಪಾವತಿಸುವುದು ಬಾಕಿ ಇದೆ. ಹೀಗಾಗಿ ಆಯಾ ಜಿಲ್ಲೆಗಳಲ್ಲಿ ಸಂಬಂಧ ಪಟ್ಟ ಹೈಕೋರ್ಟ್ ಪೀಠಗಳಲ್ಲಿ ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸಲು ಅವರು ಚಿಂತನ ನಡೆಸಿದ್ದಾರೆ. ಮಾರ್ಚ್ ತಿಂಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ವಿಧದ ಕಾಮಗಾರಿಗಳು ಸ್ಥಗಿತಗೊಳ್ಳಲಿವೆ.
ಗುತ್ತಿಗೆದಾರರಿಗೆ 2023ರಿಂದ ಬಾಕಿ ಬಿಲ್ ಪಾವತಿ ಮಾಡಿಲ್ಲ. ಇತ್ತೀಚೆಗೆ ಸರ್ಕಾರ ವಿವಿಧ ಕಾರಣ ಹೇಳುತ್ತಲೇ ಬಂದಿದೆ. ಆದರೆ ಬಿಲ್ ಪಾವತಿಸದೇ ಕಾಲಹರಣ ಮಾಡುತ್ತಿದೆ ಎಂದು ಗುತ್ತಿಗೆದಾರರು ತಿಳಿಸಿದ್ದಾರೆ.
ಇಲಾಖಾವಾರು ಬಾಕಿ ಬಿಲ್ ಮೊತ್ತದ ವಿವರ
- ಕೊಳಗೇರಿ ಮಂಡಳಿ: 2410 ಕೋಟಿ ರೂಪಾಯಿ
- ಗ್ರಾಮೀಣಾಭಿವೃದ್ಧಿ ಇಲಾಖೆ: 7912 ಕೋಟಿ ರೂಪಾಯಿ
- ಸಣ್ಣ ನೀರಾವರಿ ಇಲಾಖೆ : 10,741
- ಲೋಕೋಪಯೋಗಿ ಇಲಾಖೆ : 12,400 ಕೋಟಿ ರೂಪಾಯಿ
- ನೀರಾವರಿ ಇಲಾಖೆ: 25,980 ಕೋಟಿ ರೂಪಾಯಿ
- ಇತರ ಇಲಾಖೆಗಳ ಕಾಮಗಾರಿಗಳದ್ದು 8900 ಕೋಟಿ ರೂಪಾಯಿ ಬಿಲ್ ಬಾಕಿ ಇದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications