Get Updates
Get notified of breaking news, exclusive insights, and must-see stories!

ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರಿಂದ ಕ್ರಿಮಿನಲ್ ಕೇಸ್‌?: ಮಾರ್ಚ್ 1ರಿಂದ ಎಲ್ಲ ಕಾಮಗಾರಿ ಸ್ಟಾಪ್!

ಬೆಂಗಳೂರು, ಫೆಬ್ರವರಿ 20: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲ ಎಂಬ ಹಣೆಪಟ್ಟಿ ಸರ್ಕಾರಕ್ಕೆ ಇದೆ. ಈ ಮಧ್ಯೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಕಾಮಗಾರಿಗಳ ಹಣ ಬಾಕಿ ಉಳಿದಿಕೊಂಡಿದೆ. ಸಾವಿರಾರು ಕೋಟಿ ರೂಪಾಯಿ ಸರ್ಕಾರ ಪಾವತಿಸಬೇಕಿದೆ. ಸದ್ಯ ಗುತ್ತಿಗೆದಾರರು ಮುಂದಿನ ತಿಂಗಳಿಂದ ಕಾಮಗಾರಿ ಸ್ಥಗಿತಗೊಳಿಸಿ ಸರ್ಕಾರಕ್ಕೆ ಶಾಕ್ ನೀಡಲು, ಸರ್ಕಾರದ ವಿರುದ್ಧ ಕ್ರಮಿನಲ್ ಮೊಕದ್ಧಮತೆ ಹೂಡಲು ಸಜ್ಜಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷರು ಹೇಳಿದ್ದು ನಿಜ ಎಂದು ವಿಪಕ್ಷ ನಾಯಕರು ಹೇಳಿದರು.

ಕರ್ನಾಟಕ ರಾಜ್ಯ ಕಾಂಗ್ರೆಸ್‌ ಸರ್ಕಾರದ ಬಳಿ ರಸ್ತೆಗುಂಡಿಗೆ ಒಂದು ಬುಟ್ಟಿ ಮಣ್ಣು ಹಾಕಲೂ ದುಡ್ಡಿಲ್ಲ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಹೇಳಿದ್ದು ಹೇಳಿದ್ದು ಅಕ್ಷರಶಃ ನಿಜ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವರು ವಿವರ ಹಂಚಿಕೊಂಡಿದ್ದಾರೆ.

Karnataka Govt has Pending Rs 64000 Cr of Contractors Bills All Work will Stop From March 1st

ಸರ್ಕಾರದ ಬೊಕ್ಕಸ ಬರಿದಾಗಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಸುಳ್ಳು ಹೇಳುತ್ತಲೇ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಗುತ್ತಿಗೆದಾರರಿಗೆ 64,000 ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿಕೊಂಡಿದೆ ಎಂದು ಅವರು ಲೆಕ್ಕ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದಮೇಲೆ ಕಳೆದ 20 ತಿಂಗಳುಗಳಲ್ಲಿ ಈವರೆಗೂ ಒಂದೇ ಒಂದು ಹೊಸ ಕಾಮಗಾರಿಗೂ ಗುದ್ದಲಿ ಪೂಜೆ ಮಾಡಿಲ್ಲ. ಈಗ ಬಿಲ್ ಬಾಕಿ ಪಾವತಿ ಮಾಡದಿದ್ದರೆ ಜಾರಿಯಲ್ಲಿರುವ ಕಾಮಗಾರಿಗಳು ನಿಲ್ಲುತ್ತವೆ. ಸರ್ಕಾರದ ಮೇಲೆ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ ಎಂದು ಹೇಳಿದರು.

Karnataka Govt has Pending Rs 64000 Cr of Contractors Bills All Work will Stop From March 1st

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ದುರಾಸೆಗೆ ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಯಾವ ದುಸ್ಥಿತಿಗೆ ತಂದಿಟ್ಟಿದ್ದೀರಿ ನೋಡಿ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹಾಳುಗೆಡವಿ 16 ಬಜೆಟ್ ಮಂಡಿಸುವ ದಾಖಲೆ ಬರೆದರೇನು, ಎರಡೆರಡು ಬಾರಿ ಮುಖ್ಯಮಂತ್ರಿ ಆದರೇನು? ಕರ್ನಾಟಕ ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂದೇ ಇತಿಹಾಸ ತಮ್ಮನ್ನ ನೆನಪಿಡುತ್ತದೆ ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಾರ್ಚ್ 1ರಿಂದ ಕಾಮಗಾರಿ ಬಂದ್: ಗುತ್ತಿಗೆದಾರರು

ಈಗಾಗಲೇ ರಾಜ್ಯ ಸರ್ಕಾರ ನೆಚ್ಚಿಕೊಂಡು ಎಲ್ಲ ಜಿಲ್ಲೆಗಳಲ್ಲಿ ಕಾಮಗಾರಿ ನಡೆಸಿಕೊಂಡು ಬಂದಿರುವ ಗುತ್ತಿಗೆದಾರರಿಗೆ ರಾಜ್ಯ ಸರ್ಕಾರದಿಂದ 64000 ಕೋಟಿ ರೂಪಾಯಿ ಪಾವತಿಸುವುದು ಬಾಕಿ ಇದೆ. ಹೀಗಾಗಿ ಆಯಾ ಜಿಲ್ಲೆಗಳಲ್ಲಿ ಸಂಬಂಧ ಪಟ್ಟ ಹೈಕೋರ್ಟ್‌ ಪೀಠಗಳಲ್ಲಿ ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸಲು ಅವರು ಚಿಂತನ ನಡೆಸಿದ್ದಾರೆ. ಮಾರ್ಚ್ ತಿಂಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ವಿಧದ ಕಾಮಗಾರಿಗಳು ಸ್ಥಗಿತಗೊಳ್ಳಲಿವೆ.

ಗುತ್ತಿಗೆದಾರರಿಗೆ 2023ರಿಂದ ಬಾಕಿ ಬಿಲ್ ಪಾವತಿ ಮಾಡಿಲ್ಲ. ಇತ್ತೀಚೆಗೆ ಸರ್ಕಾರ ವಿವಿಧ ಕಾರಣ ಹೇಳುತ್ತಲೇ ಬಂದಿದೆ. ಆದರೆ ಬಿಲ್ ಪಾವತಿಸದೇ ಕಾಲಹರಣ ಮಾಡುತ್ತಿದೆ ಎಂದು ಗುತ್ತಿಗೆದಾರರು ತಿಳಿಸಿದ್ದಾರೆ.

ಇಲಾಖಾವಾರು ಬಾಕಿ ಬಿಲ್ ಮೊತ್ತದ ವಿವರ

  • ಕೊಳಗೇರಿ ಮಂಡಳಿ: 2410 ಕೋಟಿ ರೂಪಾಯಿ
  • ಗ್ರಾಮೀಣಾಭಿವೃದ್ಧಿ ಇಲಾಖೆ: 7912 ಕೋಟಿ ರೂಪಾಯಿ
  • ಸಣ್ಣ ನೀರಾವರಿ ಇಲಾಖೆ : 10,741
  • ಲೋಕೋಪಯೋಗಿ ಇಲಾಖೆ : 12,400 ಕೋಟಿ ರೂಪಾಯಿ
  • ನೀರಾವರಿ ಇಲಾಖೆ: 25,980 ಕೋಟಿ ರೂಪಾಯಿ
  • ಇತರ ಇಲಾಖೆಗಳ ಕಾಮಗಾರಿಗಳದ್ದು 8900 ಕೋಟಿ ರೂಪಾಯಿ ಬಿಲ್ ಬಾಕಿ ಇದೆ.
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+