ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ 35 ಎಕರೆ ಜಾಗ ನಿಗದಿ
ಬೆಂಗಳೂರು, ಜುಲೈ 02 : ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಗರದಲ್ಲಿ ಇದುವರೆಗೂ 97 ಜನರು ಮೃತಪಟ್ಟಿದ್ದಾರೆ. ಮೃತರ ಅಂತ್ಯ ಸಂಸ್ಕಾರ ನಡೆಸಲು ಜಾಗ ಹುಡುಹುವುದು ಬಿಬಿಎಂಪಿಗೆ ಸವಾಲಾಗಿತ್ತು.
Recommended Video
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೋವಿಡ್ - 19 ಸೋಂಕಿನಿಂದ ಮೃತಪಡುವ ನಾಗರಿಕರ ಅಂತ್ಯಕ್ರಿಯೆಗಾಗಿ ಕಂದಾಯ ಇಲಾಖೆಗೆ ಸೇರಿದ ನಗರದ ಸುತ್ತಮುತ್ತಲಿನ 35 ಎಕರೆ ಜಾಗವನ್ನು ಮೀಸಲಾಗಿಟ್ಟಿದೆ. ಬೆಂಗಳೂರು ನಗರ ಜಿಲ್ಲಾಡಳಿತ ಈ ಭೂಮಿಯನ್ನು ಪಾಲಿಕೆಗೆ ನೀಡಲಿದೆ.
ಕೋವಿಡ್ - 19 ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ಮಾಡಲು ಸಾರ್ವಜನಿಕ ಸ್ಮಶಾನವನ್ನು ಸ್ಥಾಪಿಸುವುದು ಅಗತ್ಯವಾಗಿತ್ತು. ಆದ್ದರಿಂದ 35 ಎಕರೆ 18 ಗುಂಟೆ ಜಾಗವನ್ನು ಗುರುತಿಸಲಾಗಿದೆ. ಲಭ್ಯವಿರುವ ಜಮೀನಿನ ಕುರಿತು ತಹಶೀಲ್ದಾರ್ ಲಿಖಿತ ಮತ್ತು ಮೌಖಿಕ ರೂಪದಲ್ಲಿ ಜಿಲ್ಲಾಧಿಕಾರಿ, ಪಾಲಿಕೆಗೆ ಮಾಹಿತಿ ನೀಡಿದ್ದಾರೆ.
ಈಗ ಗುರುತಿಸಿರುವ ಜಮೀನುಗಳ ಬಗ್ಗೆ ಘನ ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಾಗಿದ್ದಲ್ಲಿ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ. ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಲ್ಲಿ ಕೋವಿಡ್ - 19ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ನಡೆಸುವುದಕ್ಕೆ ಸ್ಥಳ ಹುಡುಕುವುದು ವಿವಾದಕ್ಕೆ ಕಾರಣವಾಗಿತ್ತು.

ಬೆಂಗಳೂರು ಉತ್ತರ ಮತ್ತು ದಕ್ಷಿಣ ತಾಲೂಕು
ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ಗಿಡ್ಡೆನಹಳ್ಳಿ ಗ್ರಾಮದ ಸರ್ವೆ ನಂಬರ್ 80ರಲ್ಲಿ ಸ್ಥಳವನ್ನು ಗುರುತಿಸಲಾಗಿದೆ. ಬೆಂಗಳೂರು ದಕ್ಷಿಣದಲ್ಲಿ ಉತ್ತರಹಳ್ಳಿ ಹೋಬಳಿಯ ಸೋಮನಹಳ್ಳಿ (ಸರ್ವೆ ನಂಬರ್ 259), ಗುಳಿಕಮಲೆ (ಸರ್ವೆ ನಂಬರ್ 35, 36), ತಾವರೆಕೆರೆಯ ತಿಮ್ಮಗೊಂಡನಹಳ್ಳಿ (ಸರ್ವೆ ನಂಬರ್ 4)ರಲ್ಲಿ ಸ್ಥಳ ಗುರುತಿಸಲಾಗಿದೆ.

ಆನೇಕಲ್, ಯಲಹಂಕ ತಾಲೂಕು
ಆನೇಕಲ್ ತಾಲೂಕಿನ ಜಿಗಣಿ ಹೋಬಳಿಯ ಗಿಡ್ಡೆನಹಳ್ಳಿ ಗ್ರಾಮದ ಸರ್ವೇ ನಂಬರ್ 23ರಲ್ಲಿ ಸ್ಥಳ ಗುರುತಿಸಲಾಗಿದೆ.ಯಲಹಂಕ ತಾಲೂಕಿನ ಜಾಲಾ ಹೋಬಳಿಯ ಎಂ. ಹೊಸಹಳ್ಳಿ ಗ್ರಾಮದ ಸರ್ವೇ ನಂಬರ್ 89, ಹೆಸರಘಟ್ಟ ಹೋಬಳಿ ಹುತ್ತನಹಳ್ಳಿ ಗ್ರಾಮದ ಸರ್ವೇ ನಂಬರ್ 72, ಜಾಲಾ ಹೋಬಳಿಯ ಮಾರೇನಹಳ್ಳಿ ಸರ್ವೇ ನಂಬರ್ 182, ಹೆಸರಘಟ್ಟ ಗ್ರಾಮದ ಮಾವಳ್ಳಿಪುರದ ಸರ್ವೆ ನಂಬರ್ 8ರಲ್ಲಿ ಜಾಗ ಗುರುತಿಸಲಾಗಿದೆ.

ಜಿಲ್ಲಾಧಿಕಾರಿಗಳ ಅನುಮೋದನೆ ಪಡೆಯಬೇಕು
ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಅವರು ಪ್ರತ್ಯೇಕವಾದ ಪ್ರಸ್ತಾವನೆಯನ್ನು ಸರ್ವೆ ನಂಬರ್ ವಾರು ಸಿದ್ಧಪಡಿಸಿ, ಸರ್ವೆ ಸ್ಕೆಚ್ ನೊಂದಿಗೆ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ಅನುಮೋದನೆಯನ್ನು ಪಡೆಯತಕ್ಕದ್ದು ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಿ. ಎನ್. ಶಿವಮೂರ್ತಿ ಆದೇಶದಲ್ಲಿ ತಿಳಿಸಿದ್ದಾರೆ.

ಬೇರೆ ಯಾವುದೇ ಉದ್ದೇಶಕ್ಕೆ ಬಳಸಲ್ಲ
ಈಗ ಗುರುತಿಸಿರುವ ಜಾವನ್ನು ಸ್ಮಶಾನಕ್ಕೆ ಅಲ್ಲದೇ ಯಾವುದೇ ಬೇರೆ ಉದ್ದೇಶಕ್ಕೆ ಬಳಕೆ ಮಾಡಬಾರದು ಎಂದು ಸೂಚಿಸಲಾಗಿದೆ. ಈ ಜಮೀನಿನ ಗಡಿ ಗುರುತಿಸಿ, ಸಂಬಂಧಿಸಿದವರಿಗೆ ಹಸ್ತಾಂತರ ಮಾಡಬೇಕು. ಈ ಜಮೀನು ಒತ್ತುವರಿ ಆಗದಂತೆ ತಂತಿ ಬೇಲಿ ನಿರ್ಮಾಣ ಮಾಡಿ, ಸಂರಕ್ಷಣೆ ಮಾಡಬೇಕು ಈ ಕುರಿತು ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಸೂಚನೆ ಕೊಡಲಾಗಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications