ಕೋವಿಡ್ ರೋಗಿಗಳಿಗೆ ಆಮ್ಲಜನಕ ಬಳಕೆ: ಸರ್ಕಾರದ ಹೊಸ ನಿಯಮ
ಬೆಂಗಳೂರು, ಆಗಸ್ಟ್ 22: ನಗರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ದ್ರವ ಆಮ್ಲಜನಕದ ಕೊರತೆ ಉದ್ಭವಿಸಿದ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರವು ಪ್ರಕರಣದಿಂದ ಪ್ರಕರಣದ ಆಧಾರದಲ್ಲಿ ಎಷ್ಟು ಪ್ರಮಾಣದ ಆಮ್ಲಜನಕ ಬಳಕೆ ಮಾಡಬೇಕು ಎಂದು ವೈದ್ಯಕೀಯ ಸಂಸ್ಥೆಗಳಿಗೆ ಶಿಷ್ಟಾಚಾರವನ್ನು ನಿಗದಿಪಡಿಸಿದೆ.
Recommended Video
ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ (ಕಿಮ್ಸ್) ಸೋಮವಾರ 47 ಗಂಭೀರ ಅಸ್ವಸ್ಥ ರೋಗಿಗಳನ್ನು ದ್ರವ ಆಮ್ಲಜನಕದ ಕೊರತೆ ಕಾರಣ ಬೇರೆ ಆಸ್ಪತ್ರೆಗಳಿಗೆ ವರ್ಗಾಯಿಸಬೇಕಾದ ಘಟನೆಯ ಬಳಿಕ ಸರ್ಕಾರ ಈ ಬಗ್ಗೆ ಕಠಿಣ ನಿರ್ಧಾರ ತೆಗೆದುಕೊಂಡಿದೆ.
ಕೊರೊನಾ ವೈರಸ್ ಪಿಡುಗಿನ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯವಿರುವ ದ್ರವ ಆಮ್ಲಜನಕದ ಪ್ರಮಾಣವನ್ನು ಅಂದಾಜು ಮಾಡಿರಲಿಲ್ಲ. ಇದು ಯಾರ ತಪ್ಪೂ ಅಲ್ಲ ಎಂದು ಸಚಿವ ಕೆ. ಸುಧಾಕರ್ ಹೇಳಿಕೆ ನೀಡಿದ್ದರು. ಮುಂದೆ ಓದಿ.

ಆಮ್ಲಜನಕ ಬಳಕೆಗೆ ಮಾರ್ಗದರ್ಶಿ
ಆದರೆ ಈಗ ಈ ಸಂಬಂಧ ಕ್ರಮ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದ್ದು, ವೈದ್ಯಕೀಯ ಸಿಬ್ಬಂದಿ ವಿವಿಧ ಸನ್ನಿವೇಶಗಳಿಗೆ ಅನುಗುಣವಾಗಿ ಹೇಗೆ ಮತ್ತು ಯಾವಾಗ ಆಮ್ಲಜನಕವನ್ನು ಬಳಸಬೇಕು ಎಂಬ ಬಗ್ಗೆ ಸೂಚನೆಗಳನ್ನು ನೀಡಿದೆ. ಕೋವಿಡ್ 19 ರೋಗಿಗಳಿಗೆ ಚಿಕಿತ್ಸೆಯನ್ನಾಗಿ ಆಕ್ಸಿಜನ್ ಬಳಕೆ ಮಾಡುವಾಗ ಮಾರ್ಗದರ್ಶಿಗಳನ್ನು ಪಾಲಿಸಬೇಕು ಎಂದು ಸರ್ಕಾರ ಹೇಳಿದೆ.

ಎಗ್ಗುಸಿಗ್ಗಿಲ್ಲದೆ ಆಕ್ಸಿಜನ್ ಬಳಕೆ
'ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ಅನಿರೀಕ್ಷಿತ ಪ್ರಮಾಣದಲ್ಲಿ ಆಮ್ಲಜನಕಕ್ಕೆ ಬೇಡಿಕೆ ಏರಿಕೆಯಾಗಿದೆ. ಕ್ಲಿನಿಕಲ್ ಪರಿಣತರ ಸಮಿತಿಯು ಆಮ್ಲಜನಕದ ಬಳಕೆಯ ಕುರಿತು ವಿಶ್ಲೇಷಣೆ ನಡೆಸಿದ್ದು, ಸೂಕ್ತವಾದ ನಿರ್ವಹಣೆ ಇಲ್ಲದೆ ಮನಬಂದಂತೆ ಮತ್ತು ಅತಿಯಾಗಿ ಆಮ್ಲಜನಕ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂಬ ಸಂಗತಿಯನ್ನು ಬಹಿರಂಗಪಡಿಸಿದೆ' ಎಂದು ಕರ್ನಾಟಕ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೈದ್ ಅಖ್ತರ್ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಸಂಪನ್ಮೂಲ ಮತ್ತು ಹಣ ವ್ಯರ್ಥ
'ಮಿತಿಮೀರಿದ ಬಳಕೆಯು ಆರೋಗ್ಯದ ಮೇಲೆ ಮತ್ತಷ್ಟು ಹಾನಿಯುಂಟು ಮಾಡುವುದರ ಜತೆಗೆ, ಅತ್ಯಮೂಲ್ಯ ಸಂಪನ್ಮೂಲದ ವ್ಯರ್ಥದಿಂದ ಸಂಪನ್ಮೂಲದ ಕೊರತೆ ಮತ್ತು ಹಣದ ವ್ಯರ್ಥಕ್ಕೆ ಕಾರಣವಾಗುತ್ತಿದೆ' ಎಂದು ಕೂಡ ಸರ್ಕಾರ ಹೇಳಿದೆ.

ಎಷ್ಟು ಪ್ರಮಾಣದ ಆಮ್ಲಜನಕ?
ಅಮೂಲ್ಯವಾದ ಲಿಕ್ವಿಡ್ ಆಕ್ಸಿಜನ್ಗಳನ್ನು ಹೇಗೆ ಮತ್ತು ಯಾವಾಗ ಬಳಸಬೇಕು ಎಂಬುದನ್ನು ಸರ್ಕಾರ ನೀತಿ ನಿಯಮಗಳನ್ನು ರೂಪಿಸಿದೆ. ವಿಶೇಷ ಮಾಸ್ಕ್ಗಳ ಅಗತ್ಯವಿರುವವರಿಂದ ಹಿಡಿದು ಸರಳವಾದ ಮಾಸ್ಕ್ ಸಾಕಾಗುವ ರೋಗಿಗಳವರೆಗೆ ಯಾವ ಪ್ರಮಾಣದಲ್ಲಿ ಆಮ್ಲಜನಕವನ್ನು ಬಳಸಬಹುದು ಎಂಬ ವಿವರವಾದ ಸಂಖ್ಯಾ ಪ್ರಮಾಣವನ್ನು ನಿಗದಿಪಡಿಸಿದೆ. ರೋಗಿಯ ರೋಗ ಲಕ್ಷಣ ಅಥವಾ ಅವರ ಸ್ಥಿತಿಯ ಆಧಾರದಲ್ಲಿ ಮಾತ್ರವೇ ಆಮ್ಲಜನಕ ಬಳಕೆ ಮಾಡುವಂತೆ ಕೂಡ ಸೂಚನೆ ನೀಡಲಾಗಿದೆ.
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ












Click it and Unblock the Notifications