ನೀವು ಮಾವಿನ ಹಣ್ಣು ಆರ್ಡರ್ ಮಾಡಿದರೆ, ಅಂಚೆ ಮೂಲಕ ಹಣ್ಣುಗಳು ನಿಮ್ಮ ಮನೆ ಬಾಗಿಲಿಗೆ
ಬೆಂಗಳೂರು, ಮೇ 16: ರಾಜ್ಯ ಸರ್ಕಾರ ಆನ್ಲೈನ್ನಲ್ಲಿ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲು ಮುಂದಾಗಿದೆ. ಇಂದಿನಿಂದ ಆನ್ಲೈನ್ನಲ್ಲಿ ರೈತ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲಿದೆ. 2020ರಲ್ಲಿ ಕರ್ನಾಟಕ ಸರ್ಕಾರವು ಕರೋನಾ ಸಾಂಕ್ರಾಮಿಕ ಮತ್ತು ಲಾಕ್ಡೌನ್ ಮಧ್ಯೆ ಆನ್ಲೈನ್ ಮಾರ್ಕೆಟಿಂಗ್ ಮತ್ತು ಅಂಚೆ ಸೇವೆಯನ್ನು ಬಳಸಿಕೊಂಡು ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ರೈತರಿಗೆ ಮಾವಿನ ಹಣ್ಣನ್ನು ಮಾರಾಟ ಮಾಡಿತ್ತು ಆದರೆ, ಈ ಬಾರಿ ವೆಬ್ಸೈಟ್ ಬಳಸಿಕೊಂಡು ಆನ್ಲೈನ್ ವ್ಯಾಪಾರದ ಮೂಲಕ ಮಾವು ಮಾರಾಟವಾಗಲಿದೆ.
ನೀವು ಹಣ್ಣುಗಳನ್ನು ತಿಂದು ಸವಿಯಬೇಕೆಂದು ಅಂದುಕೊಂಡಿದ್ದರೆ ಅಥವಾ ಮಾವು ಬೇಕಾದರೆ ನಿಮಗೊಂದು ಸಿಹಿ ಸುದ್ದಿ ಇದೆ. ಕರ್ನಾಟಕ ಸರ್ಕಾರವು ಇಂದಿನಿಂದ ಆನ್ಲೈನ್ನಲ್ಲಿ ಮಾವಿನಹಣ್ಣುಗಳನ್ನು ಮಾರಾಟ ಮಾಡುತ್ತಿದೆ ಇದರಲ್ಲಿ ನೀವು ವಿವಿಧ ರೀತಿಯ ಮಾವಿನಹಣ್ಣುಗಳನ್ನು ಆನ್ಲೈನ್ನಲ್ಲಿ ನಿಮ್ಮ ಮನೆ ಬಾಗಿಲಿಗೆ ಆರ್ಡರ್ ಮಾಡಬಹುದು. ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ (KSMDMCL) ಭಾರತೀಯ ಅಂಚೆ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ಮಾವುಗಳನ್ನು ತಲುಪಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೆಬ್ಸೈಟ್ನ್ನು ಬಳಸಿ ಆನ್ಲೈನ್ನಲ್ಲಿ ಮಾವು ಮಾರಾಟಕ್ಕಾಗಿ ಪ್ರಾರಂಭಿಸಲಾಗಿದ್ದು, ಇದರಲ್ಲಿ ವಿವಿಧ ರೀತಿಯ ಮಾವಿನಹಣ್ಣುಗಳನ್ನು ಖರೀದಿಸಬಹುದು.
ಕರೋನಾ ಸಾಂಕ್ರಾಮಿಕ ಮತ್ತು ಲಾಕ್ಡೌನ್ ಮಧ್ಯೆ 2020ರಲ್ಲಿ ಕೆಎಸ್ಎಂಡಿಎಂಸಿಎಲ್ ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ರೈತರಿಂದ ಮಾವಿನ ಹಣ್ಣಿನ ಮಾರಾಟವನ್ನು ಪ್ರಾರಂಭಿಸಿದೆ. ಕೆಎಸ್ಎಂಡಿಎಂಸಿಎಲ್ 2021ರಲ್ಲಿ ಇಂಡಿಯಾ ಪೋಸ್ಟ್ ಮೂಲಕ ಮಾವಿನಹಣ್ಣನ್ನು ತಲುಪಿಸುತ್ತಿದೆ. ಆದರೆ, ಈ ಬಾರಿ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಮಾವು ಮಾರಾಟವಾಗಲಿದ್ದು ಈ ವರ್ಷವೂ ಇಲಾಖೆ ಉತ್ತಮ ಖರೀದಿ ನಿರೀಕ್ಷೆಯಲ್ಲಿದೆ.

ಗ್ರಾಹಕರು ಆನ್ಲೈನ್ನಲ್ಲಿ ಮಾವು ಖರೀದಿಸಲು ಆಸಕ್ತಿ
ಕೆಎಸ್ಎಂಡಿಎಂಸಿಎಲ್ ವ್ಯವಸ್ಥಾಪಕ ನಿರ್ದೇಶಕ ಸಿ.ಜಿ.ನಾಗರಾಜು ಮಾಧ್ಯಮಗಳೊಂದಿಗೆ ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿ ರೈತರು ಮತ್ತು ಗ್ರಾಹಕರು ಈ ಉಪಕ್ರಮದಿಂದ ಪ್ರಯೋಜನ ಪಡೆದಿದ್ದಾರೆ. 2020ರಲ್ಲಿ ರಾಜ್ಯದಾದ್ಯಂತ ಒಟ್ಟು 35 ಸಾವಿರ ಗ್ರಾಹಕರಿಗೆ 100 ಟನ್ ಮಾವಿನ ಹಣ್ಣಗಳನ್ನು ಸರಬರಾಜು ಮಾಡಲಾಗಿದೆ. ಇನ್ನು ಕಳೆದ 2021ರಲ್ಲಿ ಮಾವಿನ ಇಳುವರಿ ಕಡಿಮೆಯಾದ ನಂತರವೂ 45 ಸಾವಿರ ಗ್ರಾಹಕರಿಗೆ 79 ಟನ್ ಮಾವು ಮಾರಾಟವಾಗಿದೆ. ಗ್ರಾಹಕರು ಉತ್ತಮ ಗುಣಮಟ್ಟದ ಮಾವಿನ ಹಣ್ಣುಗಳನ್ನು ಆನ್ಲೈನ್ನಲ್ಲಿ ಖರೀದಿಸಲು ಆಸಕ್ತಿ ಹೊಂದಿದ್ದಾರೆ ಎಂಬುದನ್ನು ಇದು ತೋರಿಸುತ್ತದೆ ಎಂದರು.

ಮಾವಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ ವೈಬ್ಸೈಟ್ ಭೇಟಿ ನೀಡಿ
ಆನ್ಲೈನ್ ಮಾವು ಮಾರಾಟ ಪೋರ್ಟಲ್ ನಲ್ಲಿ ಮಾವು ಮಾರಾಟ ಮಾಡುವ ರೈತರ ಹೆಸರು, ಮಾವಿನ ತಳಿಗಳು ಮತ್ತು ಮಾವಿಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಲಭ್ಯವಿರುತ್ತದೆ. ಇದರೊಂದಿಗೆ ಗ್ರಾಹಕರು ಆರ್ಡರ್ ಮಾಡಿದ ನಂತರ, ರೈತರಿಗೆ ಪಠ್ಯ ಸಂದೇಶವನ್ನು ಕಳುಹಿಸಲಾಗುತ್ತದೆ. ನಂತರ ರೈತರು ಹಣ್ಣುಗಳನ್ನು ಪ್ಯಾಕ್ ಮಾಡಿ ಅಂಚೆ ಕಚೇರಿ (ಜಿಪಿಒ) ಬೆಂಗಳೂರಿಗೆ ಕಳುಹಿಸುತ್ತಾರೆ. ಮಾವುಗಳನ್ನು GPOಯಿಂದ ಅವರ ಗಮ್ಯಸ್ಥಾನಕ್ಕೆ ರವಾನಿಸಲಾಗುತ್ತದೆ.
-
2nd PUC 'ವಾಣಿಜ್ಯ' ವಿಭಾಗದಲ್ಲಿ ಶೇ.88.4ರಷ್ಟು ಸಾಧನೆ: ಇಬ್ಬರಿಗೆ 600ಕ್ಕೆ 600 ಅಂಕ, ಇವರೇ ಟಾಪರ್ಸ್ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
LPG: ಎಲ್ಪಿಜಿ ಹೆಚ್ಚಿನ ದರಕ್ಕೆ ಮಾರಿದರೆ ಕಂಪನಿಗಳಿಗೆ ಬೀಗ: ಸಚಿವ ಕೆ.ಎಚ್.ಮುನಿಯಪ್ಪ ಖಡಕ್ ಎಚ್ಚರಿಕೆ -
Peenya Flyover: ಏಪ್ರಿಲ್ 13ರಿಂದ ಪೀಣ್ಯ ಫ್ಲೈಓವರ್ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ -
Mangoes: ಮಾವಿನಹಣ್ಣು ಖರೀದಿ ಮಾಡುವಾಗ 3 ತಪ್ಪು ಮಾಡ್ಬೇಡಿ! ಈ 6 ಟ್ರಿಕ್ಸ್ ತಿಳ್ಕೊಂಡಿರಿ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ










Click it and Unblock the Notifications