ನೀವು ಮಾವಿನ ಹಣ್ಣು ಆರ್ಡರ್ ಮಾಡಿದರೆ, ಅಂಚೆ ಮೂಲಕ ಹಣ್ಣುಗಳು ನಿಮ್ಮ ಮನೆ ಬಾಗಿಲಿಗೆ
ಬೆಂಗಳೂರು, ಮೇ 16: ರಾಜ್ಯ ಸರ್ಕಾರ ಆನ್ಲೈನ್ನಲ್ಲಿ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲು ಮುಂದಾಗಿದೆ. ಇಂದಿನಿಂದ ಆನ್ಲೈನ್ನಲ್ಲಿ ರೈತ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲಿದೆ. 2020ರಲ್ಲಿ ಕರ್ನಾಟಕ ಸರ್ಕಾರವು ಕರೋನಾ ಸಾಂಕ್ರಾಮಿಕ ಮತ್ತು ಲಾಕ್ಡೌನ್ ಮಧ್ಯೆ ಆನ್ಲೈನ್ ಮಾರ್ಕೆಟಿಂಗ್ ಮತ್ತು ಅಂಚೆ ಸೇವೆಯನ್ನು ಬಳಸಿಕೊಂಡು ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ರೈತರಿಗೆ ಮಾವಿನ ಹಣ್ಣನ್ನು ಮಾರಾಟ ಮಾಡಿತ್ತು ಆದರೆ, ಈ ಬಾರಿ ವೆಬ್ಸೈಟ್ ಬಳಸಿಕೊಂಡು ಆನ್ಲೈನ್ ವ್ಯಾಪಾರದ ಮೂಲಕ ಮಾವು ಮಾರಾಟವಾಗಲಿದೆ.
ನೀವು ಹಣ್ಣುಗಳನ್ನು ತಿಂದು ಸವಿಯಬೇಕೆಂದು ಅಂದುಕೊಂಡಿದ್ದರೆ ಅಥವಾ ಮಾವು ಬೇಕಾದರೆ ನಿಮಗೊಂದು ಸಿಹಿ ಸುದ್ದಿ ಇದೆ. ಕರ್ನಾಟಕ ಸರ್ಕಾರವು ಇಂದಿನಿಂದ ಆನ್ಲೈನ್ನಲ್ಲಿ ಮಾವಿನಹಣ್ಣುಗಳನ್ನು ಮಾರಾಟ ಮಾಡುತ್ತಿದೆ ಇದರಲ್ಲಿ ನೀವು ವಿವಿಧ ರೀತಿಯ ಮಾವಿನಹಣ್ಣುಗಳನ್ನು ಆನ್ಲೈನ್ನಲ್ಲಿ ನಿಮ್ಮ ಮನೆ ಬಾಗಿಲಿಗೆ ಆರ್ಡರ್ ಮಾಡಬಹುದು. ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ (KSMDMCL) ಭಾರತೀಯ ಅಂಚೆ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ಮಾವುಗಳನ್ನು ತಲುಪಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೆಬ್ಸೈಟ್ನ್ನು ಬಳಸಿ ಆನ್ಲೈನ್ನಲ್ಲಿ ಮಾವು ಮಾರಾಟಕ್ಕಾಗಿ ಪ್ರಾರಂಭಿಸಲಾಗಿದ್ದು, ಇದರಲ್ಲಿ ವಿವಿಧ ರೀತಿಯ ಮಾವಿನಹಣ್ಣುಗಳನ್ನು ಖರೀದಿಸಬಹುದು.
ಕರೋನಾ ಸಾಂಕ್ರಾಮಿಕ ಮತ್ತು ಲಾಕ್ಡೌನ್ ಮಧ್ಯೆ 2020ರಲ್ಲಿ ಕೆಎಸ್ಎಂಡಿಎಂಸಿಎಲ್ ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ರೈತರಿಂದ ಮಾವಿನ ಹಣ್ಣಿನ ಮಾರಾಟವನ್ನು ಪ್ರಾರಂಭಿಸಿದೆ. ಕೆಎಸ್ಎಂಡಿಎಂಸಿಎಲ್ 2021ರಲ್ಲಿ ಇಂಡಿಯಾ ಪೋಸ್ಟ್ ಮೂಲಕ ಮಾವಿನಹಣ್ಣನ್ನು ತಲುಪಿಸುತ್ತಿದೆ. ಆದರೆ, ಈ ಬಾರಿ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಮಾವು ಮಾರಾಟವಾಗಲಿದ್ದು ಈ ವರ್ಷವೂ ಇಲಾಖೆ ಉತ್ತಮ ಖರೀದಿ ನಿರೀಕ್ಷೆಯಲ್ಲಿದೆ.

ಗ್ರಾಹಕರು ಆನ್ಲೈನ್ನಲ್ಲಿ ಮಾವು ಖರೀದಿಸಲು ಆಸಕ್ತಿ
ಕೆಎಸ್ಎಂಡಿಎಂಸಿಎಲ್ ವ್ಯವಸ್ಥಾಪಕ ನಿರ್ದೇಶಕ ಸಿ.ಜಿ.ನಾಗರಾಜು ಮಾಧ್ಯಮಗಳೊಂದಿಗೆ ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿ ರೈತರು ಮತ್ತು ಗ್ರಾಹಕರು ಈ ಉಪಕ್ರಮದಿಂದ ಪ್ರಯೋಜನ ಪಡೆದಿದ್ದಾರೆ. 2020ರಲ್ಲಿ ರಾಜ್ಯದಾದ್ಯಂತ ಒಟ್ಟು 35 ಸಾವಿರ ಗ್ರಾಹಕರಿಗೆ 100 ಟನ್ ಮಾವಿನ ಹಣ್ಣಗಳನ್ನು ಸರಬರಾಜು ಮಾಡಲಾಗಿದೆ. ಇನ್ನು ಕಳೆದ 2021ರಲ್ಲಿ ಮಾವಿನ ಇಳುವರಿ ಕಡಿಮೆಯಾದ ನಂತರವೂ 45 ಸಾವಿರ ಗ್ರಾಹಕರಿಗೆ 79 ಟನ್ ಮಾವು ಮಾರಾಟವಾಗಿದೆ. ಗ್ರಾಹಕರು ಉತ್ತಮ ಗುಣಮಟ್ಟದ ಮಾವಿನ ಹಣ್ಣುಗಳನ್ನು ಆನ್ಲೈನ್ನಲ್ಲಿ ಖರೀದಿಸಲು ಆಸಕ್ತಿ ಹೊಂದಿದ್ದಾರೆ ಎಂಬುದನ್ನು ಇದು ತೋರಿಸುತ್ತದೆ ಎಂದರು.

ಮಾವಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ ವೈಬ್ಸೈಟ್ ಭೇಟಿ ನೀಡಿ
ಆನ್ಲೈನ್ ಮಾವು ಮಾರಾಟ ಪೋರ್ಟಲ್ ನಲ್ಲಿ ಮಾವು ಮಾರಾಟ ಮಾಡುವ ರೈತರ ಹೆಸರು, ಮಾವಿನ ತಳಿಗಳು ಮತ್ತು ಮಾವಿಗೆ ಸಂಬಂಧಿಸಿದ ಎಲ್ಲಾ ಮಾಹಿತಿ ಲಭ್ಯವಿರುತ್ತದೆ. ಇದರೊಂದಿಗೆ ಗ್ರಾಹಕರು ಆರ್ಡರ್ ಮಾಡಿದ ನಂತರ, ರೈತರಿಗೆ ಪಠ್ಯ ಸಂದೇಶವನ್ನು ಕಳುಹಿಸಲಾಗುತ್ತದೆ. ನಂತರ ರೈತರು ಹಣ್ಣುಗಳನ್ನು ಪ್ಯಾಕ್ ಮಾಡಿ ಅಂಚೆ ಕಚೇರಿ (ಜಿಪಿಒ) ಬೆಂಗಳೂರಿಗೆ ಕಳುಹಿಸುತ್ತಾರೆ. ಮಾವುಗಳನ್ನು GPOಯಿಂದ ಅವರ ಗಮ್ಯಸ್ಥಾನಕ್ಕೆ ರವಾನಿಸಲಾಗುತ್ತದೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಕನ್ನಡಿಗರ ಮುಕ್ತಜ್ಞಾನದ ತಾಣ ‘ಕಣಜ’ಕ್ಕೆ ಸಿಕ್ಕಿಬಿಟ್ಟಿತೆ ಮುಕ್ತಿ? 3 ತಿಂಗಳಿಂದ ಕಣ್ಮರೆಯಾದ ವೆಬ್ಸೈಟ್ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು












Click it and Unblock the Notifications