ಕೋವಿಡ್ ಸೋಂಕಿತರಿಗೆ ಸಮಾಧಾನಕರ ಸುದ್ದಿ; ಬೆಂಗಳೂರಿಗೆ ಬಂತು ಆಕ್ಸಿಬಸ್
ಬೆಂಗಳೂರು, ಮೇ 11: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಮತ್ತು ವೆಂಟಿಲೇಟರ್ ಸಮಸ್ಯೆಗಳು ಎದುರಾಗುತ್ತಿವೆ.
ಆದರೆ, ಈಗ ಕೊರೊನಾ ಸೋಂಕಿತರಿಗೆ ಸಮಾಧಾನ ತರುವ ಸುದ್ದಿಯೊಂದು ಸಿಕ್ಕಿದೆ. ಬೆಂಗಳೂರು ನಗರ ಸೋಂಕಿತರಿಗೆ ಆಕ್ಸಿಜನ್ ಸಮಸ್ಯೆ ನೀಗಿಸಲು ಆಕ್ಸಿಜನ್ ಬಸ್ ಬಂದಿದೆ. ತುರ್ತು ಸಂದರ್ಭದಲ್ಲಿ ತಕ್ಷಣವೇ ಸೋಂಕಿತರ ಜೀವ ಉಳಿಸಲಿದೆ.
ಇಂದು (ಮಂಗಳವಾರ) ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಆಕ್ಸಿಜನ್ ಬಸ್ ಅನ್ನು ಉದ್ಘಾಟಿಸಿ, ಅದು ಹೇಗೆ ಕಾರ್ಯನಿರ್ವಹಿಸಲಿದೆ ಎಂಬುದನ್ನು ಪರಿವೀಕ್ಷಣೆ ಮಾಡಿದ್ದಾರೆ.

ತಮಿಳುನಾಡು ಮಾದರಿಯ ಆಕ್ಸಿಜನ್ ಬಸ್ಸನ್ನು ಕರ್ನಾಟಕಕ್ಕೂ ಪರಿಚಯಿಸಲಾಗಿದೆ. ಶಾಲೆಯ ಬಸ್ಸನ್ನು ಆಕ್ಸಿಜನ್ ಬಸ್ ಆಗಿ ಪರಿವರ್ತನೆ ಮಾಡಲಾಗಿದೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಆರೋಗ್ಯ ಸೌಧದ ಎದುರು ಈ ಆಕ್ಸಿಜನ್ ಬಸ್ ಅನ್ನು ನಿಲ್ಲಿಸಲಾಗಿದೆ.
ಬಸ್ಸಿನಲ್ಲಿ ಏನೆಲ್ಲಾ ಇದೆ
ಆಕ್ಸಿಜನ್ ಬಸ್ಸಿನಲ್ಲಿ ಭರ್ತಿಯಾದ ಸಿಲಿಂಡರ್ ಇದ್ದು, ಅದಕ್ಕೆ ಬೇಕಾದ ಉಪಕರಣಗಳಿವೆ. ಬಸ್ಸಿನ ಸೀಟಿನಲ್ಲಿ ಸೋಂಕಿತ ಆರಾಮವಾಗಿ ಕುಳಿತುಕೊಳ್ಳಲು ಒಂದು ದಿಂಬು ಇಡಲಾಗಿದೆ.
ಕೊರೊನಾ ಸೋಂಕಿತರು ಬಂದ ತಕ್ಷಣ ನೀಡಲು ಫೇಸ್ ಶಿಲ್ಡ್ (ಮಾಸ್ಕ್) ಅನ್ನು ಸಹ ಬಸ್ಸಿನಲ್ಲಿ ಇರುತ್ತದೆ. ಬೆಂಗಳೂರು ಮಹಾನಗರದಲ್ಲಿರುವ ಈ ಬಸ್ಸಿನಲ್ಲಿ ಒಂದೇ ಬಾರಿಗೆ ೮ ಜನ ಸೋಂಕಿತರು ಕುಳಿತುಕೊಳ್ಳಬಹುದು. ಪ್ರತಿ ಸೀಟಿಗೂ ಸಣ್ಣ ಸಣ್ಣ ಸಿಲಿಂಡರ್ ಅಳವಡಿಸಿದ್ದು, ಅಲ್ಲಿ ಆಕ್ಸಿಜನ್ ಅವಶ್ಯವಿದ್ದರೆ ಅದರ ಬಳಕೆ ಮಾಡಿಕೊಳ್ಳಬಹುದು.

ಸದ್ಯಕ್ಕೆ ಬೆಂಗಳೂರಿನಲ್ಲಿ ಒಂದು ಆಕ್ಸಿಜನ್ ಬಸ್ ಸಂಚರಿಸಲಿದ್ದು, ಇದನ್ನು ಬಿಬಿಎಂಪಿ ನಿರ್ವಹಿಸಲಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಮತ್ತು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ವ್ಯವಸ್ಥೆ ಮಾಡಲಾಗುತ್ತದೆ.
"ತುರ್ತು ಸಂದರ್ಭಗಳಲ್ಲಿ ಕೋವಿಡ್-19 ರೋಗಿಗಳಿಗೆ ಸಹಾಯ ಮಾಡಲು ನವೀನ ಮಾದರಿಯ ಆಕ್ಸಿಬಸ್ ಸೇವೆಯನ್ನು ಪ್ರಾರಂಭಿಸಲಾಗಿದೆ. ಪ್ರತಿ ತಾತ್ಕಾಲಿಕ ಆಕ್ಸಿಬಸ್ ನಲ್ಲಿ 8 ರೋಗಿಗಳಿಗೆ ಸಹಾಯ ಮಾಡುತ್ತದೆ. ಅಂತಹ 20 ಘಟಕಗಳನ್ನು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಚಿಕಿತ್ಸಾ ಕೇಂದ್ರಗಳ ಬಳಿ ಸ್ಥಾಪಿಸಲಾಗುವುದು ಮತ್ತು ರಾಜ್ಯದಾದ್ಯಂತ ಹೆಚ್ಚಿನ ಘಟಕಗಳನ್ನು ಸ್ಥಾಪಿಸಲಾಗುವುದು'' ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications