ಬೆಂಗಳೂರಿನ ಹೊರೆ ತಗ್ಗಿಸಲು 5 ಸೆಟಲೈಟ್ ಟೌನ್ಗಳ ನಿರ್ಮಾಣ- ಸಿದ್ದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಿಂದ ಯಾರಿಗೆಲ್ಲಾ ಅನುಕೂಲ?
ಬೆಂಗಳೂರು, ಜೂನ್ 09: ರಾಜ್ಯ ರಾಜಧಾನಿಯ ಮೇಲಿರುವ ಅಭಿವೃದ್ಧಿ ಹೊರೆಯನ್ನು ತಗ್ಗಿಸಲು ಕರ್ನಾಟಕ ಸರ್ಕಾರವು ಬೆಂಗಳೂರಿನ ಹೊರಗೆ ಐದು ಹೈಟೆಕ್ ಸೆಟಲೈಟ್ ಟೌನ್ಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ. ಈ ಮೂಲಕ ಉಪಗ್ರಹ ಪಟ್ಟಣಗಳನ್ನು ಅಭಿವೃದ್ಧಿಪಡಿಸಲು ಸಜ್ಜಾಗಿದೆ.
ಈ ಹಿನ್ನೆಲೆಯಲ್ಲಿ ನಗರದ ಹೊರವಲಯದಲ್ಲಿ ಐಷಾರಾಮಿ ವಿಲ್ಲಾಗಳನ್ನು ನಿರ್ಮಿಸಲು ಯೋಜನಾ ವರದಿಯನ್ನು ಸಿದ್ಧಪಡಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಅವರು ಕರ್ನಾಟಕ ಗೃಹ ಮಂಡಳಿಗೆ (ಕೆಎಚ್ಬಿ) ನಿರ್ದೇಶನ ನೀಡಿದರು.

ಪ್ರತಿ ಉದ್ದೇಶಿತ ಉಪಗ್ರಹ ಪಟ್ಟಣವು 500 ಎಕರೆಗಳಲ್ಲಿ 1,000 ವಿಲ್ಲಾಗಳನ್ನು ಹೊಂದಿರುತ್ತದೆ. ಅದು ಸ್ವಚ್ಛ ಹಾಗೂ ಸುಂದರವಾದ ಪರಿಸರವನ್ನು ಹೊಂದಿರಲಿದೆ ಎಂದು ಜೂನ್ 7 ರಂದು ಕೆಹೆಚ್ಬಿ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಸಚಿವರು ಹೇಳಿದರು.
ಪ್ರತಿ ಉಪಗ್ರಹ ಪಟ್ಟಣವನ್ನು 2,000 ಎಕರೆಗಳಲ್ಲಿ ವಿಸ್ತರಿಸಬಹುದು. ಒಟ್ಟಾರೆಯಾಗಿ ಸುಮಾರು 1.50 ಲಕ್ಷ ನಿವೇಶನಗಳು ಮತ್ತು 25,000 ಮನೆಗಳನ್ನು ಒಳಗೊಂಡಿರುತ್ತದೆ ಎಂದು ಸಚಿವ ಜಮೀರ್ ತಿಳಿಸಿದರು.
'ಬೆಂಗಳೂರು ಅಂತರರಾಷ್ಟ್ರೀಯ ಖ್ಯಾತಿಯನ್ನು ಗಳಿಸಿದೆ. ನಗರದ ಹೊರವಲಯಗಳಿಗೆ ಹಲವಾರು ಕೈಗಾರಿಕೋದ್ಯಮಿಗಳು ಮತ್ತು ವಿವಿಐಪಿಗಳು ವಿದೇಶದಿಂದ ಭೇಟಿ ನೀಡುವುದರಿಂದ ವಿಲ್ಲಾಗಳಿಗೆ ಬೇಡಿಕೆ ಹೆಚ್ಚಿದೆ. ಈ ಎರಡು ಯೋಜನೆಗಳಿಗೆ ಅಗತ್ಯವಿರುವ ಭೂಮಿಯನ್ನು ಶೀಘ್ರವಾಗಿ ಗುರುತಿಸಬೇಕು' ಎಂದು ಜಮೀರ್ ಅಹ್ಮದ್ ಖಾನ್ ಹೇಳಿದರು.

ಮುಂದಿನ ವಾರದ ಅಂತಿಮ ಸಭೆಯ ನಂತರ ಆಯಕಟ್ಟಿನ ಸ್ಥಳಗಳು ಮತ್ತು ಹೂಡಿಕೆಯನ್ನು ನಿರ್ಧರಿಸಲಾಗುವುದು ಎಂದು ಕೆಎಚ್ಬಿಯ ಮೂಲಗಳು ಮನಿಕಂಟ್ರೋಲ್ ಪೋರ್ಟ್ಲ್ಗೆ ತಿಳಿಸಿವೆ.
ಪ್ರಸ್ತಾವನೆಯ ಪ್ರಕಾರ, ಭೂಸ್ವಾಧೀನ ವೆಚ್ಚಗಳು ಕೆಎಚ್ಬಿಗೆ ಹೊರೆಯಾಗದಂತೆ ಭೂಮಾಲೀಕರೊಂದಿಗೆ 50:50 ಪಾಲುದಾರಿಕೆಯಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು.
ಪ್ರಸ್ತುತ, ಮೂಲಗಳು ಹೇಳುವಂತೆ, ಕೆಎಚ್ಬಿ ಬೆಂಗಳೂರಿನ ನೈಋತ್ಯ ಭಾಗದಲ್ಲಿ ಮೈಸೂರು ರಸ್ತೆಯ ಪಕ್ಕದಲ್ಲಿ ಪ್ರತ್ಯೇಕ 2,000 ಎಕರೆ ಟೌನ್ಶಿಪ್ ಅನ್ನು ಯೋಜಿಸುತ್ತಿದೆ. ಹೊಸ ಟೌನ್ಶಿಪ್ ಅನ್ನು ಬಿಜಿಎಸ್ ಇಂಟರ್ನ್ಯಾಶನಲ್ ಸ್ಕೂಲ್ ಪಕ್ಕದಲ್ಲಿ ನಿರ್ಮಿಸಲಾಗುವುದು. 10,000 ಕ್ಕೂ ಹೆಚ್ಚು ವಸತಿ ಘಟಕಗಳನ್ನು ಇದು ಹೊಂದಿರುತ್ತದೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಮುಂದೆ ಇನ್ನೂ 1,000 ಎಕರೆ ಟೌನ್ಶಿಪ್ ನಿರ್ಮಾಣಗೊಳ್ಳುತ್ತಿದೆ ಎಂದು ಇಲಾಖೆ ಈ ಹಿಂದೆ ಮನಿ ಕಂಟ್ರೋಲ್ಗೆ ತಿಳಿಸಿತ್ತು.
ಈ ಟೌನ್ಶಿಪ್ಗಳು ಬೆಂಗಳೂರಿನ ಟ್ರಾಫಿಕ್ ಹಾಗೂ ಮಾಲಿನ್ಯ ಸಮಸ್ಯೆಯನ್ನು ತಗ್ಗಿಸಲು ಸಹಕಾರಿಯಾಗಲಿವೆ ಎಂದು ನಂಬಲಾಗಿದೆ.
-
ಮರ್ಯಾದೆ ಹತ್ಯೆಗೆ ಬೀಳಲಿದೆ ಬ್ರೇಕ್: ವಿಧಾನಸಭೆಯಲ್ಲಿ ಐತಿಹಾಸಿಕ 'ಇವ ನಮ್ಮವ' ಮಸೂದೆ ಮಂಡಿಸಿದ ಸರ್ಕಾರ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ











Click it and Unblock the Notifications