ಹೆಬ್ಬಾಳದಲ್ಲಿ ಪುಷ್ಪ ಮಾರುಕಟ್ಟೆಗೆ ಜಾಗ ಮಂಜೂರಾತಿ; ಪುಷ್ಟ ಬೆಳೆಗಾರರ ಸಂಘದಿಂದ ಸ್ವಾಗತ

ಬೆಂಗಳೂರು, ಆಗಸ್ಟ್‌ 21: ಕರ್ನಾಟಕ ರಾಜ್ಯದ ರೈತರಿಗೆ ತಾವು ಬೆಳೆದ ಹೂಗಳನ್ನು ಮಾರಾಟ ಮಾಡಲು ಬೆಂಗಳೂರು ನಗರದಲ್ಲಿ ವ್ಯವಸ್ಥಿತವಾದ ಮಾರುಕಟ್ಟೆಯನ್ನು ನಿರ್ಮಿಸಲು ಕರ್ನಾಟಕ ಸರ್ಕಾರ ಉದ್ದೇಶಿಸಿದೆ.

ನಗರದ ಹೆಬ್ಬಾಳ ಪಶು ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರಿದ ಜಾಗದಲ್ಲಿ 10 ಏಕರೆ ಜಾಗವನ್ನು ತೋಟಗಾರಿಕಾ ಇಲಾಖೆಗೆ ಗುತ್ತಿಗೆ ಆಧಾರದ ಮೇಲೆ ಹಸ್ತಾಂತರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿರುವುದಕ್ಕೆ ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷ ಟಿ. ಎಂ. ಅರವಿಂದ್‌ ಹರ್ಷ ವ್ಯಕ್ತಪಡಿಸಿದ್ದಾರೆ.

ಹಲವಾರು ವರ್ಷಗಳಿಂದ ರಾಜ್ಯದ ರೈತರು ತಾವು ಬೆಳೆದಂತಹ ಹೂಗಳನ್ನು ಮಾರಾಟ ಮಾಡಲು ಸರಿಯಾದ ಮಾರುಕಟ್ಟೆಯ ವ್ಯವಸ್ಥೆ ಇರಲಿಲ್ಲ. ಕೆ. ಆರ್‌. ಮಾರುಕಟ್ಟೆಯಲ್ಲಿ ಸರಿಯಾದ ಜಾಗವಿಲ್ಲದೆ ಇಕ್ಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿತ್ತು. ಈ ಹಿನ್ನಲೆಯಲ್ಲಿ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ ಲಭ್ಯವಿರುವ ಜಾಗವನ್ನು ನೀಡುವಂತೆ ಈ ಹಿಂದೆ ಪತ್ರ ಬರೆದು ರಾಜ್ಯ ಸರಕಾರಕ್ಕೆ ಪುಷ್ಪ ಬೆಳೆಗಾರರು ಮತ್ತು ಮಾರಾಟಗಾರರ ಸಂಘ ಮನವಿ ಸಲ್ಲಿಸಿತ್ತು.

Karnataka Govt Sanctioned Land For Flower Market In Hebbal: Flower Growers Association Welcomed

ಅದರ ಫಲಶೃತಿಯಾಗಿ ತೋಟಗಾರಿಕಾ ಇಲಾಖೆಗೆ 10 ಎಕರೆಗಳ ಜಾಗವನ್ನು ಗುತ್ತಿಗೆ ಆಧಾರದ ಮೇಲೆ ಹಸ್ತಾಂತರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕೆ.ಆರ್‌. ಮಾರುಕಟ್ಟೆಯ ಬೀದಿಗಳಲ್ಲಿ ನಡೆಯುವ ಮಾರುಕಟ್ಟೆಗೆ ಪರ್ಯಾಯ ವ್ಯವಸ್ಥೆಯಾಗಿ ಹೆಬ್ಬಾಳದಲ್ಲಿ ಜಾಗ ನೀಡಲಾಗಿದೆ.

ರಾಜ್ಯ ಸರಕಾರ ಈ ನಿರ್ಧಾರ ಬಹಳ ಸ್ವಾಗತಾರ್ಹ ವಿಷಯವಾಗಿದೆ. ಸರಿಯಾದ ಮಾರುಕಟ್ಟೆ ಇಲ್ಲದೆ, ಸರಿಯಾದ ವ್ಯವಸ್ಥೆ ಇಲ್ಲದೆ ಪರಿತಪಿಸುತ್ತಿದ್ದ ಪುಷ್ಪ ಬೆಳೆಗಾರರಿಗೆ ಎಲ್ಲಾ ಋತುಮಾನಗಳಲ್ಲೂ ಕಾರ್ಯನಿರ್ವಹಿಸಲು ಅನುಕೂಲ ಮಾಡಿಕೊಡುವಂತಹ ವ್ಯವಸ್ಥೆ ನೂತನ ಮಾರುಕಟ್ಟೆಯಲ್ಲಿ ಇರಲಿದೆ. ನಮ್ಮ ಮನವಿಯನ್ನು ಅರಿತು ರೈತರ ಪರ ಆದೇಶ ನೀಡಿದ್ದಕ್ಕೆ ರಾಜ್ಯದ ಪುಷ್ಪ ಬೆಳೆಗಾರ ಸಂಘದ ಹಾಗೂ ರಾಜ್ಯದ ರೈತರ ಪರವಾಗಿ ಸರಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ. ಅರವಿಂದ್‌ ಹೇಳಿದರು.

Karnataka Govt Sanctioned Land For Flower Market In Hebbal: Flower Growers Association Welcomed

ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘದ ನಿರ್ದೇಶಕ ಶ್ರೀಕಾಂತ್‌ ಬೊಲ್ಲಂಪಳ್ಳಿ ಮಾತನಾಡಿ, ರಾಜ್ಯ ಸರಕಾರ ತನ್ನ 2021-22ನೇ ಆಯವ್ಯಯದಲ್ಲಿ ಈ ಘೋಷಣೆಯನ್ನು ಮಾಡಿತ್ತು. ಆದರೆ, ಈ ಬಗ್ಗೆ ಸರಿಯಾದ ಸಮಯದಲ್ಲಿ ಕಾರ್ಯಗಳು ಪ್ರಾರಂಭವಾಗಿರಲಿಲ್ಲ.

ಈ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಪುಷ್ಪ ಹರಾಜು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ ಹಾಗೂ ಪುಷ್ಪ ಬೆಳೆಗಾರ ರೈತರ ಸಹಯೋಗದಲ್ಲಿ ನಾವುಗಳು ರಾಜ್ಯ ಸರಕಾರದ ಮೇಲೆ ಮನವಿ ಸಲ್ಲಿಸಿದ್ದೇವು. ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯನ್ನು ಇಟ್ಟಿರುವುದು ನಮಗೆ ಬಹಳ ಸಂತಸದ ವಿಷಯವಾಗಿದೆ ಎಂದು ಹೇಳಿದರು.

Karnataka Govt Sanctioned Land For Flower Market In Hebbal: Flower Growers Association Welcomed

ಆಗಸ್ಟ್‌ 19, 2021 ರಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ಈ ಆದೇಶ ಹೊರಡಿಸಿದ್ದಾರೆ.

Recommended Video

      ಅಬ್ಬಾ!!ಮೆಸ್ಸಿ ಕಣ್ಣೀರು ಒರೆಸಿ ಬಿಸಾಡಿದ ಟಿಶ್ಯೂ ಬೆಲೆ ಕೋಟಿ ಕೋಟಿ ರೂಪಾಯಿ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+