Jayanagar: ಸರ್ಕಾರದಿಂದ ಜಯನಗರಕ್ಕೆ ಅನ್ಯಾಯ: 'ರಾಜಕೀಯ ಬದಿಗಿಡಿ, ಅನುದಾನ ನೀಡಿ'
ಬೆಂಗಳೂರು, ನವೆಂಬರ್ 06: ಕರ್ನಾಟಕದಲ್ಲಿ ಯಾವುದೇ ಸರ್ಕಾರಗಳು ಬಂದರೂ ಸಹಿತ ಕಳೆದ ಒಂದು ದಶಕದಿಂದ ಬೆಂಗಳೂರಿನ ಜಯನಗರವನ್ನು ಕಡೆಗಣಿಸಿವೆ ಎಂಬ ಮಾತುಗಳು ಬಲವಾಗಿ ಕೇಳಿ ಬರುತ್ತಿವೆ. ರಾಜಕೀಯ ಧ್ವೇಷ ಬದಿಗೆ ಇಡಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿ ಎಂಬ ಕೂಗು ಶುರುವಾಗಿದೆ. ಇತ್ತೀಚೆಗೆ ಆನ್ಲೈನ್ ನಲ್ಲೂ ಈ ಬಗ್ಗೆ ಒತ್ತಾಯ ಕೇಳಿ ಬಂದಿತ್ತು.
ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಯಾವುದೇ ಸರ್ಕಾರ ಬಂದರೂ ಅನುದಾನ ನೀಡುವಲ್ಲಿ ಅನ್ಯಾಯವಾಗುತ್ತಿದೆ, ಬಿಜೆಪಿ ಶಾಸಕ ರಾಮಮೂರ್ತಿಯವರು ಕಾಂಗ್ರೆಸ್ ಸರ್ಕಾರ ಅನುದಾನ ಕೊಡುತ್ತಿಲ್ಲ ಎಂದು ಕಾರಣ ಹೇಳುತ್ತಿದ್ದಾರೆ. ನಿಮ್ಮ ಕೈಯಲ್ಲಿ ಅನುದಾನ ತರಲು ಆಗದಿದ್ದ ಮೇಲೆ ರಾಜೀನಾಮೆ ಕೊಡಿ ಎಂದು ಆಮ್ ಆದ್ಮಿ ಪಕ್ಷದ ಜಯನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಡಾ. ಸರವಣ ಒತ್ತಾಯಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ಜಯನಗರ ಕ್ಷೇತ್ರದ ಜನತೆಗೆ ಅನ್ಯಾಯವಾಗುತ್ತಲೇ ಇದೆ. ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಜಯನಗರಕ್ಕೆ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಇದ್ದರು. ಬಿಜೆಪಿ ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ ಎಂದು ಅವರು ಹೇಳುತ್ತಿದ್ದರು ಎಂದರು.
ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು
ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಗಿದೆ, ಆದರೆ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದು, ಈ ಸರ್ಕಾರ ಕೂಡ ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ ಎಂದು ಆರೋಪಿಸಿದರು. ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎನ್ನುವಂತೆ ಇವರ ರಾಜಕೀಯ ಕಿತ್ತಾಟಕ್ಕೆ ಕ್ಷೇತ್ರದ ಜನ ದಿನನಿತ್ಯ ಸಮಸ್ಯೆ ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಳೆದ ಮೂರು ತಿಂಗಳಿನಿಂದ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳಾಗಿದೆ. ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ, ಕೆಲಸ ಮಾಡಿಸಿ ಎಂದರೆ ಶಾಸಕರು ಅನುದಾನ ಇಲ್ಲ ಎನ್ನುತ್ತಿದ್ದಾರೆ. ಶಾಸಕರು ಯಾವುದೇ ಪಕ್ಷದವರಾಗಲಿ ಅಭಿವೃದ್ಧಿಗೆ ಹಣ ಕೊಡಬೇಕಾಗಿರುವುದು ಸರ್ಕಾರದ ಕರ್ತವ್ಯ ಎಂಧು ತಿಳಿಸಿದರು.
ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ
ಬೆಂಗಳೂರಿನ ವ್ಯಾಪ್ತಿಯಲ್ಲಿರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅಭಿವೃದ್ಧಿಗಾಗಿ 10 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಆದರೆ ಜಯನಗರ ಕ್ಷೇತ್ರಕ್ಕೆ ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ, ಇಲ್ಲಿನ ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವಿನ ಮನಸ್ತಾಪವೇ ಇದಕ್ಕೆ ಕಾರಣ ಎನ್ನುತ್ತಿದ್ದಾರೆ. ನಿಮ್ಮ ರಾಜಕೀಯ ದ್ವೇಷಕ್ಕೆ ಕ್ಷೇತ್ರದ ಮತದಾರರು ಶಿಕ್ಷೆ ಅನುಭವಿಸಬೇಕಾ? ಅವರು ಖಾರವಾಗಿ ಪ್ರಶ್ನಿಸಿದ್ದಾರೆ.
ಸಿ.ಕೆ. ರಾಮಮೂರ್ತಿ ಬಿಜೆಪಿ ಶಾಸಕ ಮಾತ್ರವಲ್ಲ ಅವರು ಜಯನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ನಿಮ್ಮಿಬ್ಬರ ನಡುವಿನ ವೈಯಕ್ತಿಕ ಜಗಳಕ್ಕೆ ಕ್ಷೇತ್ರದ ಮತದಾರರಿಗೆ ಶಿಕ್ಷೆ ಯಾಕೆ?, ಶಾಸಕರೇ ನಿಮ್ಮ ಕ್ಷೇತ್ರಕ್ಕೆ ಅನುದಾನ ತರಲು ನಿಮಗೆ ತಾಕತ್ತಿಲ್ವಾ? ಬೇರೆ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಟ್ಟಿಲ್ವಾ? ನಿಮಗೆ ಅನುದಾನ ತರಲು ಆಗದಿದ್ದರೆ ರಾಜೀನಾಮೆ ಕೊಡಿ ಎಂದು ಅವರು ಆಗ್ರಹಿಸಿದರು.
ಜಯನಗರದಿಂದ ರೂ.540 ಕೋಟಿ ತೆರಿಗೆ
ಜಯನಗರ ಕ್ಷೇತ್ರವೊಂದರಿಂದಲೇ ರಾಜ್ಯ ಸರ್ಕಾರಕ್ಕೆ 540 ಕೋಟಿ ರೂಪಾಯಿ ತೆರಿಗೆ ಪಾವತಿಸಿದ್ದೇವೆ. ಕ್ಷೇತ್ರದಿಂದ ಇಷ್ಟು ಆದಾಯ ಪಡೆದು ಈಗ ಅಭಿವೃದ್ಧಿಗೆ ಅನುದಾನ ಕೊಡದೆ ಅನ್ಯಾಯ ಮಾಡುತ್ತೀದ್ದೀರಾ?. ಕೂಡಲೇ ಡಿ.ಕೆ. ಶಿವಕುಮಾರ್ ತಮ್ಮ ರಾಜಕೀಯ ದ್ವೇಷವನ್ನು ಬದಿಗಿಟ್ಟು ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡಿ ಎಂದು ಆಗ್ರಹಿಸಿದರು.
ಪಕ್ಷದ ಬೆಂಗಳೂರು ದಕ್ಷಿಣ ವಿಭಾಗದ ಅಧ್ಯಕ್ಷ ಜೋಶ್ವಾ ಸಿಂಟು, ಬೆಂಗಳೂರು ದಕ್ಷಿಣ ವಿಭಾಗದ ಸಂಘಟನಾ ಕಾರ್ಯದರ್ಶಿ ಶಶಿಧರ್ ಆರಾಧ್ಯ, ಜೋಶ್ವ, ಬೆಂಗಳೂರು ದಕ್ಷಿಣ ಅಲ್ಪ ಸಂಖ್ಯಾತರದ ಘಟಕದ ಅಧ್ಯಕ್ಷ ಮುರ್ತುಜಾ, ಬೆಂಗಳೂರು ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಹಾಜರಿದ್ದರು.
-
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು? -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಸಂಭ್ರಮ: 'ಸಂಗೀತ' ರಾತ್ರಿಯ ನೆನಪುಗಳನ್ನು ಹಂಚಿಕೊಂಡ ನಟಿ -
RCB: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಪಂದ್ಯಗಳ ಆಯೋಜನೆಗೆ ಆರ್ಸಿಬಿ ಒಪ್ಪಿಗೆ -
Dharavi Slum: ಏಷ್ಯಾದ ದೊಡ್ಡ ಕೊಳಗೇರಿ ಧಾರಾವಿಯಲ್ಲಿ ಬಡತನವೂ ಬಂಡವಾಳ, ಧಾರಾವಿ ಸಂಪೂರ್ಣ ವಿವರ ಇಲ್ಲಿದೆ -
ದುಬೈಯಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು: ಪಿ.ವಿ ಸಿಂಧು, ಭೋಜೇಗೌಡ ಸೇರಿದಂತೆ ಹಲವರು ಬೆಂಗಳೂರಿಗೆ ವಾಪಾಸ್ -
ಇರಾನ್-ಇಸ್ರೇಲ್ ಸಂಘರ್ಷ: ಕತಾರ್ನಲ್ಲಿ LNG ಉತ್ಪಾದನೆ ಸ್ಥಗಿತ: ಗಗನಕ್ಕೇರಿದ ತೈಲ ಮತ್ತು ಅನಿಲ ಬೆಲೆ












Click it and Unblock the Notifications