Industry: ವೈದ್ಯಕೀಯ ಕ್ಷೇತ್ರಕ್ಕೆ ಬೇಕಾದ ಪ್ರಮುಖ 350 ಸಾಧನ ಕರ್ನಾಟಕದಲ್ಲೇ ತಯಾರು
ಬೆಂಗಳೂರು, ಮಾರ್ಚ್ 21: ನವೋದ್ಯಮ ಕ್ಷೇತ್ರದಲ್ಲಿ ವೈದ್ಯಕೀಯ ಮತ್ತು ಔಷಧ ತಯಾರಿಕೆ ವಲಯದ ನೂರಾರು ಕಂಪನಿಗಳು ಕರ್ನಾಟಕದಲ್ಲಿ ನೆಲೆಯೂರಿವೆ. ಚರ್ಮಶಾಸ್ತ್ರ ಮತ್ತು ಸೌಂದರ್ಯ ವರ್ಧಕ ವೈದ್ಯಕೀಯ ಚಿಕಿತ್ಸಾ ವಲಯದ ಹೂಡಿಕೆದಾರರಿಗೆ ಕ್ವಿನ್ ಸಿಟಿ ಯೋಜನೆ ಸೇರಿದಂತೆ ಹಲವೆಡೆ ಹೇರಳ ಅವಕಾಶಗಳಿವೆ. ಉದ್ಯಮಿಗಳು ನಮ್ಮಲ್ಲಿ ಹೂಡಿಕೆಗೆ ಮುಂದೆ ಬಂದರೆ ಅವರಿಗೆ ಸಂಪೂರ್ಣ ಸಹಕಾರ ಸರ್ಕಾರ ನೀಡಲಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.
ಬೆಂಗಳೂರಿನ ಹೊರವಲಯದ ವೈಟ್ ಫೀಲ್ಡ್ನಲ್ಲಿ ನಡೆದ ಅಖಿಲ ಭಾರತ ಲೇಸರ್ ಚಿಕಿತ್ಸೆ ಮತ್ತು ಸರ್ಜರಿ ಸಮಾವೇಶವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ವೈದ್ಯಕೀಯ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸುವಂತಹ 350 ಸಾಧನಗಳು ರಾಜ್ಯದಲ್ಲೇ ತಯಾರಾಗುತ್ತಿವೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಲೇಸರ್ ಮೆಡಿಸಿನ್ ವಲಯದ ಹೂಡಿಕೆಗೆ ರಾಜ್ಯ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು ಎಂದು ಭರವಸೆ ಕೊಟ್ಟರು.

ಚರ್ಮಕ್ಕೆ ಸಂಬಂಧಿಸಿದ ಚಿಕಿತ್ಸೆಗಳಲ್ಲಿ ಲೇಸರ್ ಮೆಡಿಸಿನ್ ಮಹತ್ತ್ವದ ಪಾತ್ರ ವಹಿಸುತ್ತಿದೆ. ಮೆಡ್-ಟೆಕ್ ಕ್ಷೇತ್ರದಲ್ಲಿ ಕರ್ನಾಟಕವು ಅತ್ಯುತ್ತಮ ಕಾರ್ಯಪರಿಸರ ಹೊಂದಿದೆ. ಕ್ಷಿಪ್ರ ಬೆಳವಣಿಗೆ ಕಾಣುತ್ತಿದೆ. ದೇಶದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯಗತ್ಯವಾಗಿರುವ ಸಾಧನಗಳ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇಕಡ 25ರಷ್ಟಿದೆ. ಇದರ ಜತೆಗೆ ದೇಶದ ಬಯೋಟೆಕ್ ಕಂಪನಿಗಳಲ್ಲಿ ಶೇಕಡ 60 ನಮ್ಮಲ್ಲೇ ಇದೆ. ದೇಶದ ಔಷಧ ರಫ್ತು ವಹಿವಾಟಿನಲ್ಲಿ ನಮ್ಮ ಪಾಲು ಶೇಕಡ 40ರಷ್ಟಿದೆ ಎಂದು ಅವರು ವಿವರಿಸಿದ್ದಾರೆ.
ರಾಜ್ಯದಲ್ಲಿ ಪಿಸಿಆರ್ ಯಂತ್ರ, ಸ್ಟಂಟ್ ಇತರ ಉತ್ಪಾದನೆ
ಮೆಡಿಕಲ್ ಐಟಿ, ಪಿಸಿಆರ್ ಯಂತ್ರಗಳು, ಹೃದಯದ ಚಿಕಿತ್ಸೆಗೆ ಬೇಕಾಗುವ ಸ್ಟೆಂಟ್, ಇನ್ಸುಲಿನ್ ಪೆನ್ ಮುಂತಾದವುಗಳ ತಯಾರಿಕೆಯಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ವೈದ್ಯಕೀಯ ಸಾಧನಗಳು, ಡಿಜಿಟಲ್ ಆರೋಗ್ಯ, ರೋಗ ಪತ್ತೆ ಮುಂತಾದವು ಹೊಸ ದಾರಿ ತುಳಿಯಲಿವೆ. ಅಂತಹ ತಂತ್ರಜ್ಞಾನವು ರಾಜ್ಯದಲ್ಲಿರುವ ಕಂಪನಿಗಳಿಂದ ಅಭಿವೃದ್ಧಿಯಾಗುತ್ತಿದೆ. ಲೇಸರ್ ಚಿಕಿತ್ಸೆ ವಲಯದಲ್ಲಿರುವವರು ಇದನ್ನು ಗಮನಿಸಬೇಕು ಎಂದು ಸಲಹೆ ನಿಡಿದರು.
ದೇಶದ ಆರೋಗ್ಯ ಸೇವೆ ಮತ್ತು ಹೂಡಿಕೆ ಎರಡರಲ್ಲೂ ರಾಜ್ಯವು ಅಗ್ರಸ್ಥಾನದಲ್ಲಿದೆ. ರಾಜ್ಯದಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕಾಲೇಜುಗಳ ಜಾಲವೇ ಇದ್ದು, ಇವುಗಳನ್ನು ನಾವು ಜನರ ಸಬಲೀಕರಣಕ್ಕೆ ಬಳಸಿಕೊಳ್ಳಬೇಕು. ಕೈಗೆಟುಕುವ ದರದಲ್ಲಿ ಮತ್ತು ಕ್ಷಿಪ್ರ ಗತಿಯಲ್ಲಿ ಅತ್ಯುತ್ತಮ ಚಿಕಿತ್ಸೆ ದೊರೆತರೆ ಮಾತ್ರ ವಿಶ್ವಾಸಾರ್ಹತೆ ಬೆಳೆಯುತ್ತದೆ. ಇವುಗಳ ಜತೆಗೆ ಸಂಶೋಧನೆ ಮತ್ತು ನಾವೀನ್ಯತೆ ಹಾಗೂ ಅವುಗಳ ವಾಣಿಜ್ಯ ಬಳಕೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಬೇಕು ಎಂದರು.

ಆಭರಣ ಉದ್ಯಮಿಗಳಿಗೆ ವಿಫುಲ ಅವಕಾಶ
ಈ ಕಾರ್ಯಕ್ರಮಕ್ಕೂ ಮೊದಲು ಅವರು ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನ ಆಯೋಜಿಸಿರುವ ಆಭರಣ ಮೇಳಕ್ಕೆ ಚಾಲನೆ ನೀಡಿದರು. ಆಭರಣ ಉದ್ಯಮಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ವಿಫುಲ ಅವಕಾಶಗಳು ಇವೆ. ಬೆಂಗಳೂರು ಏರ್ಪೋರ್ಟ್ ಬಳಿಕ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಉದ್ಯಮಿಗಳು ಮುಂದಾಗುವಂತೆ ಕೈಗಾರಿಕೆ ಸಚಿವರು ಕರೆ ನೀಡಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications