ಟಾಟಾ ಸಮೂಹದಿಂದ 150 ಸರ್ಕಾರಿ ಐಟಿಐ ಅಭಿವೃದ್ಧಿ: ಅಶ್ವಥ್ ನಾರಾಯಣ
ಬೆಂಗಳೂರು, ಸೆಪ್ಟೆಂಬರ್ 17: ಯುವಜನರಿಗೆ ಗುಣಮಟ್ಟದ ಶಿಕ್ಷಣ ಮತ್ತು ಕೌಶಲ್ಯಗಳನ್ನು ಕಲಿಸಿದರೆ ಮತ್ತು ಸದೃಢ ಹಾಗೂ ಸ್ವಾವಲಂಬಿ ಭಾರತ ಕಟ್ಟಲು ಸಾಧ್ಯವಾಗುತ್ತದೆ, ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ಪೀಣ್ಯದಲ್ಲಿರುವ ಸರ್ಕಾರಿ ಐಟಿಐನಲ್ಲಿ ಆಯೋಜಿಸಿದ್ದ ಬೆಂಗಳೂರು ನಗರ ಜಿಲ್ಲಾ ಮಟ್ಟದ ಪ್ರಪ್ರಥಮ ಐಟಿಐ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಬಾಕಿ ಉಳಿದಿರುವ 120 ಸರ್ಕಾರಿ ಐಟಿಐಗಳನ್ನು ಉನ್ನತೀಕರಿಸಲಾಗುವುದು. ಇದರ ಜೊತೆಗೆ ಈ ವರ್ಷ ನೂತನವಾಗಿ 30 ಐಟಿಐಗಳನ್ನು ಸ್ಥಾಪಿಸಲಾಗುವುದು ಎಂದರು.
ಸರ್ಕಾರವು ಐಟಿಐ ಶಿಕ್ಷಣವನ್ನು ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಲಾಗುವುದು. ಜತೆಗೆ, ಇಂಗ್ಲಿಷ್ ಭಾಷೆಯ ಕಲಿಕೆಯನ್ನು ಇದರ ಭಾಗವಾಗಿ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಅವರು 2021-22ರ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಪ್ರದಾನ ಮಾಡಿದರು.

ಟಾಟಾ ಸಮೂಹದ ನೆರವಿನೊಂದಿಗೆ 150 ಸರ್ಕಾರಿ ಐಟಿಐ ಅಭಿವೃದ್ಧಿ:
ಟಾಟಾ ಸಮೂಹದ ನೆರವಿನಲ್ಲಿ ಈಗಾಗಲೇ 150 ಸರ್ಕಾರಿ ಐಟಿಐಗಳನ್ನು ಅಭಿವೃದ್ಧಿ ಪಡಿಸಿ, ಹೊಸ ಕೋರ್ಸುಗಳನ್ನು ಆರಂಭಿಸಲಾಗಿದೆ. ಇದಕ್ಕಾಗಿ 4,500 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಸಚಿವ ಅಶ್ವಥ್ ನಾರಾಯಣ ತಿಳಿಸಿದರು.
ಜಪಾನ್, ಚೀನಾ ತರಹದ ದೇಶಗಳು ಉತ್ಪಾದನಾ ವಲಯದಲ್ಲಿ ಸಾಕಷ್ಟು ಸಾಧಿಸಿವೆ. ಭಾರತ ಮತ್ತು ಕರ್ನಾಟಕ ಕೂಡ ಸೇವಾ ವಲಯದ ಜತೆಗೆ ಉತ್ಪಾದನಾ ರಂಗದಲ್ಲಿ ಮುಂಚೂಣಿಗೆ ಬರಬೇಕು. ಇದರಲ್ಲಿ ಐಟಿಐ ಪದವೀಧರರ ಪಾತ್ರವು ನಿರ್ಣಾಯಕವಾಗಿದೆ ಎಂದು ಸಲಹೆ ನೀಡಿದರು. ಸಮಾಜದಲ್ಲಿ ಎಲ್ಲೆಡೆ ಕೇವಲ ಪದವಿ ಶಿಕ್ಷಣದ ಮೋಹವಿದೆ. ಆದರೆ ಇವತ್ತು ಕೌಶಲ್ಯಗಳಿಗೆ ಮಹತ್ವ ಬಂದಿದೆ. ಇದನ್ನು ಯುವಜನರು ಅರ್ಥ ಮಾಡಿಕೊಂಡು ಮುನ್ನುಗ್ಗಬೇಕು. ಇದರಿಂದ ಕನಸಿನ ಉದ್ಯೋಗ ಪಡೆಯುವುದು ಸುಲಭವಾಗುತ್ತದೆ ಎಂದು ಕಿವಿಮಾತು ಹೇಳಿದರು.
14 ಸಾವಿರ ಐಟಿಐಗಳಲ್ಲಿ ಘಟಿಕೋತ್ಸವ:
ಪ್ರಧಾನಿ ಮೋದಿಯವರು ವಿಶ್ವಕರ್ಮ ಸಮುದಾಯದ ಕೌಶಲ್ಯವನ್ನು ಗೌರವಿಸಿ, 'ವಿಶ್ವಕರ್ಮ ದಿನ'ದಂದೇ ದೇಶದಲ್ಲಿ ಇರುವ ಎಲ್ಲಾ 14 ಸಾವಿರ ಐಟಿಐಗಳಲ್ಲಿ ಘಟಿಕೋತ್ಸವ ಆಚರಿಸುವ ಸಂಪ್ರದಾಯ ಆರಂಭಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತೆ ಕೆ.ಜ್ಯೋತಿ, ಐಎಸ್ಡಿಎಸ್ ಪ್ರಾಂತೀಯ ನಿರ್ದೇಶಕ ಬಿ ಎನ್ ಶ್ರೀಧರ್ ಉಪಸ್ಥಿತರಿದ್ದರು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications