ಟಾಟಾ ಸಮೂಹದಿಂದ 150 ಸರ್ಕಾರಿ ಐಟಿಐ ಅಭಿವೃದ್ಧಿ: ಅಶ್ವಥ್ ನಾರಾಯಣ
ಬೆಂಗಳೂರು, ಸೆಪ್ಟೆಂಬರ್ 17: ಯುವಜನರಿಗೆ ಗುಣಮಟ್ಟದ ಶಿಕ್ಷಣ ಮತ್ತು ಕೌಶಲ್ಯಗಳನ್ನು ಕಲಿಸಿದರೆ ಮತ್ತು ಸದೃಢ ಹಾಗೂ ಸ್ವಾವಲಂಬಿ ಭಾರತ ಕಟ್ಟಲು ಸಾಧ್ಯವಾಗುತ್ತದೆ, ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ಪೀಣ್ಯದಲ್ಲಿರುವ ಸರ್ಕಾರಿ ಐಟಿಐನಲ್ಲಿ ಆಯೋಜಿಸಿದ್ದ ಬೆಂಗಳೂರು ನಗರ ಜಿಲ್ಲಾ ಮಟ್ಟದ ಪ್ರಪ್ರಥಮ ಐಟಿಐ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಬಾಕಿ ಉಳಿದಿರುವ 120 ಸರ್ಕಾರಿ ಐಟಿಐಗಳನ್ನು ಉನ್ನತೀಕರಿಸಲಾಗುವುದು. ಇದರ ಜೊತೆಗೆ ಈ ವರ್ಷ ನೂತನವಾಗಿ 30 ಐಟಿಐಗಳನ್ನು ಸ್ಥಾಪಿಸಲಾಗುವುದು ಎಂದರು.
ಸರ್ಕಾರವು ಐಟಿಐ ಶಿಕ್ಷಣವನ್ನು ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಲಾಗುವುದು. ಜತೆಗೆ, ಇಂಗ್ಲಿಷ್ ಭಾಷೆಯ ಕಲಿಕೆಯನ್ನು ಇದರ ಭಾಗವಾಗಿ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಅವರು 2021-22ರ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಪ್ರದಾನ ಮಾಡಿದರು.

ಟಾಟಾ ಸಮೂಹದ ನೆರವಿನೊಂದಿಗೆ 150 ಸರ್ಕಾರಿ ಐಟಿಐ ಅಭಿವೃದ್ಧಿ:
ಟಾಟಾ ಸಮೂಹದ ನೆರವಿನಲ್ಲಿ ಈಗಾಗಲೇ 150 ಸರ್ಕಾರಿ ಐಟಿಐಗಳನ್ನು ಅಭಿವೃದ್ಧಿ ಪಡಿಸಿ, ಹೊಸ ಕೋರ್ಸುಗಳನ್ನು ಆರಂಭಿಸಲಾಗಿದೆ. ಇದಕ್ಕಾಗಿ 4,500 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಸಚಿವ ಅಶ್ವಥ್ ನಾರಾಯಣ ತಿಳಿಸಿದರು.
ಜಪಾನ್, ಚೀನಾ ತರಹದ ದೇಶಗಳು ಉತ್ಪಾದನಾ ವಲಯದಲ್ಲಿ ಸಾಕಷ್ಟು ಸಾಧಿಸಿವೆ. ಭಾರತ ಮತ್ತು ಕರ್ನಾಟಕ ಕೂಡ ಸೇವಾ ವಲಯದ ಜತೆಗೆ ಉತ್ಪಾದನಾ ರಂಗದಲ್ಲಿ ಮುಂಚೂಣಿಗೆ ಬರಬೇಕು. ಇದರಲ್ಲಿ ಐಟಿಐ ಪದವೀಧರರ ಪಾತ್ರವು ನಿರ್ಣಾಯಕವಾಗಿದೆ ಎಂದು ಸಲಹೆ ನೀಡಿದರು. ಸಮಾಜದಲ್ಲಿ ಎಲ್ಲೆಡೆ ಕೇವಲ ಪದವಿ ಶಿಕ್ಷಣದ ಮೋಹವಿದೆ. ಆದರೆ ಇವತ್ತು ಕೌಶಲ್ಯಗಳಿಗೆ ಮಹತ್ವ ಬಂದಿದೆ. ಇದನ್ನು ಯುವಜನರು ಅರ್ಥ ಮಾಡಿಕೊಂಡು ಮುನ್ನುಗ್ಗಬೇಕು. ಇದರಿಂದ ಕನಸಿನ ಉದ್ಯೋಗ ಪಡೆಯುವುದು ಸುಲಭವಾಗುತ್ತದೆ ಎಂದು ಕಿವಿಮಾತು ಹೇಳಿದರು.
14 ಸಾವಿರ ಐಟಿಐಗಳಲ್ಲಿ ಘಟಿಕೋತ್ಸವ:
ಪ್ರಧಾನಿ ಮೋದಿಯವರು ವಿಶ್ವಕರ್ಮ ಸಮುದಾಯದ ಕೌಶಲ್ಯವನ್ನು ಗೌರವಿಸಿ, 'ವಿಶ್ವಕರ್ಮ ದಿನ'ದಂದೇ ದೇಶದಲ್ಲಿ ಇರುವ ಎಲ್ಲಾ 14 ಸಾವಿರ ಐಟಿಐಗಳಲ್ಲಿ ಘಟಿಕೋತ್ಸವ ಆಚರಿಸುವ ಸಂಪ್ರದಾಯ ಆರಂಭಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತೆ ಕೆ.ಜ್ಯೋತಿ, ಐಎಸ್ಡಿಎಸ್ ಪ್ರಾಂತೀಯ ನಿರ್ದೇಶಕ ಬಿ ಎನ್ ಶ್ರೀಧರ್ ಉಪಸ್ಥಿತರಿದ್ದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications