Karnataka industry: ₹3,587 ಕೋಟಿ ಬಂಡವಾಳ ಹೂಡಿಕೆಯ 64 ಯೋಜನೆಗೆ ಅನುಮೋದನೆ, ಈ 8 ಜಿಲ್ಲೆಗಳಿಗೆ ಸಹಾಯ
ಬೆಂಗಳೂರು, ಜೂನ್ 23: ಇಂಟರ್ನ್ಯಾಷನಲ್ ಬ್ಯಾಟರಿ ಕಂಪನಿ ಇಂಡಿಯಾ, ರಿವರ್ ಮೊಬಿಲಿಟಿ, ವೆಗಾ ಆಟೊ ಆ್ಯಕ್ಸೆಸರೀಸ್, ಮಿರ್ರಾ ಆ್ಯಂಡ್ ಮಿರ್ರಾ ಇಂಡಸ್ಟ್ರೀಸ್, ಸೇರಿದಂತೆ ಒಟ್ಟಾರೆ 64 ಯೋಜನೆಗಳ ₹3,587 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಶುಕ್ರವಾರ ನಡೆದ 146 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಅನುಮೋದನೆ ನಿಡಲಾಯಿತು.
ಇತ್ತೀಚೆಗೆ ಕರ್ನಾಟಕ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿಸಭೆ ನಡೆಯಿತು. ಈ ವೇಳೆ ಒಪ್ಪಿಗೆ ನೀಡಲಾದ ಯೋಜನೆಗಳಿಂದ ಕರ್ನಾಟಕದಲ್ಲಿ ಭವಿಷ್ಯದಲ್ಲಿ 13,896 ಜನರಿಗೆ ಉದ್ಯೋಗ ಅವಕಾಶ ಸೃಷ್ಟಿ ಆಗಲಿವೆ.

ಇನ್ನೂ ಸಭೆಯಲ್ಲಿ ಅನುಮೋದನೆ ಪಡೆದ ಯೋಜನೆಗಳಲ್ಲಿ ವಿದ್ಯುತ್ಚಾಲಿತ ದ್ವಿಚಕ್ರ ವಾಹನ ತಯಾರಿಕಾ ಘಟಕ, ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರ, ವಿದ್ಯುತ್ ಉತ್ಪಾದನಾ ಕೇಂದ್ರ ಹಾಗೂ ಹಾಲು ಉತ್ಪಾದನಾ ಘಟಕಗಳು ಸೇರಿವೆ ಎಂದು ಎಂಬಿ ಪಾಟೀಲ್ ಅವರು ಮಾಹಿತಿ ನೀಡಿದರು.
ಕರ್ನಾಟಕದ ಯಾವೆಲ್ಲ ಜಿಲ್ಲೆಗಳಿಗೆ ಉಪಯೋಗ?
ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿಂದ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ತುಮಕೂರು, ಯಾದಗಿರಿ, ಹಾವೇರಿ, ಗದಗ, ಮೈಸೂರು ಜಿಲ್ಲೆಗಳಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಇನ್ನಷ್ಟು ಉತ್ತೇಜನ ದೊರೆಯಲಿರುವುದರ ಜೊತೆಗೆ ಹೊಸ ಉದ್ಯೋಗ ಅವಕಾಶಗಳೂ ಸೃಷ್ಟಿಯಾಗಲಿವೆ ಎಂದರು.

'ಇಂಟರ್ನ್ಯಾಷನಲ್ ಬ್ಯಾಟರಿ ಕಂಪನಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ದೇವನಹಳ್ಳಿ ಬಳಿ ₹390 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಿರುವ ಪ್ರೈಮರಿ ಸೆಲ್ಸ್ ಆ್ಯಂಡ್ ಬ್ಯಾಟರೀಸ್ ಘಟಕವು 300 ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲಿದೆ. ಬೆಂಗಳೂರು ಮೂಲದ ರಿವರ್ ಮೊಬಿಲಿಟಿ ಪ್ರೈವೇಟ್ ಲಿಮಿಟೆಡ್ ನವೋದ್ಯಮವು ಹೊಸಕೋಟೆ ಬಳಿ ₹306.9 ಕೋಟಿ ವೆಚ್ಚದಲ್ಲಿ ವಿದ್ಯುತ್ಚಾಲಿತ ದ್ವಿಚಕ್ರ ವಾಹನ ತಯಾರಿಕಾ ಘಟಕ ಸ್ಥಾಪಿಸಲಾಗುವುದು.
ಇದರಿಂದ 690 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ವೆಗಾ ಆಟೊ ಆ್ಯಕ್ಸೆಸರೀಸ್ ಪ್ರೈವೇಟ್ ಲಿಮಿಟೆಡ್ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನಲ್ಲಿ ಇಪಿಎಸ್ ಲೀನರ್ ತಯಾರಿಕಾ ಘಟಕ ಸ್ಥಾಪಿಸಲು ₹205 ಕೋಟಿ ವೆಚ್ಚ ಮಾಡಲಿದೆ. ಮಿರ್ರಾ ಆ್ಯಂಡ್ ಮಿರ್ರಾ ಇಂಡಸ್ಟ್ರೀಸ್ ತುಮಕೂರು ಜಿಲ್ಲೆಯ ವಸಂತನರಸಾಪುರದಲ್ಲಿ ಉಕ್ಕಿನ ತಂತಿ ಸಂಸ್ಕರಣಾ ಘಟಕ ಸ್ಥಾಪಿಸಲು ₹200 ಕೋಟಿ ವೆಚ್ಚ ಹೂಡಿಕೆ ಮಾಡಲಿರುವುದು ಪ್ರಮುಖ ಯೋಜನೆಗಳಾಗಿವೆ ಎಂದು ಅವರು ವಿವರಿಸಿದರು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications