ಬೆಂಗಳೂರು ಅರಮನೆ ಸ್ವತ್ತಿನ ಮೇಲೆ ಸರ್ಕಾರಕ್ಕೆ ಹಕ್ಕಿಲ್ಲ: ಸುಪ್ರೀಂ
ಬೆಂಗಳೂರಿನ ಪ್ರತಿಷ್ಠಿತ ಹಾಗೂ ವಿವಾದಿತ ತಾಣ ಅರಮನೆ ಮೈದಾನ ಹಾಗೂ ಅದಕ್ಕೆ ಹೊಂದಿಕೊಂಡಿರುವ ಸ್ವತ್ತಿನ ಮೇಲೆ ಕರ್ನಾಟಕ ಸರ್ಕಾರಕ್ಕೆ ಯಾವುದೇ ಹಕ್ಕು ಇಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ನವದೆಹಲಿ, ಏಪ್ರಿಲ್ 16: ಬೆಂಗಳೂರಿನ ಪ್ರತಿಷ್ಠಿತ ಹಾಗೂ ವಿವಾದಿತ ತಾಣ ಅರಮನೆ ಮೈದಾನ ಹಾಗೂ ಅದಕ್ಕೆ ಹೊಂದಿಕೊಂಡಿರುವ ಸ್ವತ್ತಿನ ಮೇಲೆ ಕರ್ನಾಟಕ ಸರ್ಕಾರಕ್ಕೆ ಯಾವುದೇ ಹಕ್ಕು ಇಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುಮಾರು 117 ವರ್ಷಗಳ ಹಿಂದೆ ಮೈಸೂರಿನ ದಿವಾನರು ನಡೆಸಿದ ಖರೀದಿ ವ್ಯವಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾಡಿದ ಮನವಿ ತಿರಸ್ಕೃತಗೊಂಡಿದೆ.
ನ್ಯಾಯಮೂರ್ತಿಗಳಾದ ಮದನ್ ಬಿ. ಲೋಕುರ್ ಮತ್ತು ದೀಪಕ್ ಗುಪ್ರಾ ಅವರನ್ನು ಒಳಗೊಂಡ ನ್ಯಾಯಪೀಠ ಈ ರೀತಿ ಆದೇಶ ನೀಡಿದೆಸ್ಪಷ್ಟಪಡಿಸಿದೆ. ಪ್ರಥಮ ರಾಜಕುಮಾರನ ಪರವಾಗಿ ಆಗಿನ ಮೈಸೂರು ದಿವಾನರು ಇದನ್ನು ಖರೀದಿ ಮಾಡಿದ್ದರು.

ಯುವರಾಜನ ವೈಯಕ್ತಿಕ ಹಣವನ್ನು ಸ್ವತ್ತಿಗೆ ಪ್ರತಿಫಲವಾಗಿ ನೀಡಲಾಗಿತ್ತು. ಕಾನೂನು ಬದ್ದವಾಗಿ ಮತ್ತು ನ್ಯಾಯಸಮ್ಮತವಾಗಿ ಈ ಖರೀದಿ ವ್ಯವಹಾರ ನಡೆದಿದೆ. ಹೀಗಿರುವಾಗ ಈ ಸ್ವತ್ತು ಹಸ್ತಾಂತರ ಒಪ್ಪಂದದಲ್ಲಿ ಅಕ್ರಮ ನಡೆದಿರುವುದು ಕಂಡುಬಂದಿಲ್ಲ. ಆದ್ದರಿಂದ ಈ ಅಸ್ತಿಯ ಮೇಲೆ ಕರ್ನಾಟಕ ರಾಜ್ಯಕ್ಕೆ ಯಾವುದೇ ಹಕ್ಕು ಇಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.[ಪ್ಯಾಲೆಸ್ ಗ್ರೌಂಡ್ಸ್ ಪ್ರಮುಖ ಘಟನಾವಳಿಗಳು]
ಅರಮನೆ ಎಸ್ಟೇಟ್ 24 ಎಕರೆ ವಿಸ್ತೀರ್ಣ ಹೊಂದಿದ್ದು, ಈ ಪಾರಂಪರಿಕ ಸ್ವತ್ತು ಬೆಂಗಳೂರಿನ ಪ್ರತಿಷ್ಠಿತ ಅರಮನೆ ರಸ್ತೆಯಲ್ಲಿದ್ದು, ಅನೇಕ ವಾಣಿಜ್ಯ ಕಟ್ಟಡಗಳು ಮತ್ತು ಬಂಗಲೆಗಳು ಇಲ್ಲಿ ತಲೆ ಎತ್ತಿವೆ. ಸ್ಥಳದ ಅಧಿಭೋಗದಾರರ (ಸ್ವಾಧೀನದಾರರ) ವಿರುದ್ಧ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಸೆಕ್ಷನ್ 67ರ ಅಡಿ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಈ ಹಿಂದೆ ರಾಜ್ಯ ಸರ್ಕಾರ ಹೊರಡಿಸಿತ್ತು.
ಇದನ್ನು ಕರ್ನಾಟಕ ಹೈಕೋರ್ಟ್ನ ಏಕ ಸದಸ್ಯ ಪೀಠವು ರದ್ದುಗೊಳಿಸಿ ಆದೇಶ ನೀಡಿತ್ತು. ಈಗ ಆ ಆದೇಶವನ್ನು ಸರ್ವೋಚ್ಚ ನ್ಯಾಯಾಲಯವು ಪುನಃ ಸ್ಥಾಪಿಸಿದ್ದು, ಈ ಸ್ವತ್ತಿನ ಮೇಲೆ ರಾಜ್ಯ ಯಾವುದೇ ಹಕ್ಕು ಹೊಂದಿಲ್ಲ ಎಂದು ಹೇಳಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications