ಪಬ್-ವೈನ್ ಸೆಂಟರ್ಗಳಿಗೆ ಅಪ್ರಾಪ್ತರ ಪ್ರವೇಶ ನಿಷೇಧಕ್ಕೆ ಹೈಕೋರ್ಟ್ ಸೂಚನೆ; ಐಡಿ ಪರಿಶೀಲಿಸಲು ಸಲಹೆ
ಬೆಂಗಳೂರು: ಕರ್ನಾಟಕ ರಾಜ್ಯ ಹೈಕೋರ್ಟ್ ನಿರ್ದೇಶನ ಬೆನ್ನಲ್ಲೆ ರಾಜ್ಯಾದ್ಯಂತ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಪಬ್ ಹಾಗೂ ಬ್ರೂವರೀಸ್ (ವೈನ್ ಸೆಂಟರ್) ಗಳಿಗೆ ಪ್ರವೇಶ ನಿರ್ಬಂಧಿಸುವ ಕುರಿತು ಮಹತ್ವದ ಚರ್ಚೆಗಳು ಆಗುತ್ತಿದೆ. ಪ್ರಕರಣವೊಂದರ ವಿಚಾರಣೆ ನಡೆಸಿ, ತೀರ್ಪು ಕಾಯ್ದಿರಿಸಿದ ನ್ಯಾಯಪೀಠವು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
ಬೆಂಗಳೂರು ಪೊಲೀಸ್ ಆಯುಕ್ತರು ನಗರದಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವೈನ್ ಸೆಂಟರ್ (ಬ್ರೂವರೀಸ್) ಹಾಗೂ ಪಬ್ಗಳಿಗೆ ಪ್ರವೇಶಿಸುವುದನ್ನು ತಡೆಯಲು ಕಠಿಣ ಕ್ರಮ ಜಾರಿಗೊಳಿಸುವಂತೆ ಬುಧವಾರ ಮೌಖಿಕ ನಿರ್ದೇಶನ ನೀಡಿದೆ. ಹತ್ತನೇ ತರಗತಿ ಬಾಲಕನ ಸಾವಿನ ಪ್ರಕರಣದಲ್ಲಿ ಹೈಕೋರ್ಟ್ ಈ ರೀತಿ ಮೌಖಿಕವಾಗಿ ತಿಳಿಸಿದೆ.

ಪಬ್, ವೈನ್ ಸೆಂಟರ್ಗಳಿಗೆ ಬರುವ ಅಪ್ರಾಪ್ತರ ಆಧಾರ್ ಕಾರ್ಡ್ ಅಥವಾ ಇನ್ನಿತರ ಗುರುತಿನ ಚೀಟಿಯನ್ನು ಪರಿಶೀಲಿಸುವುದು ಕಡ್ಡಾಯ. ನಿರ್ಲಕ್ಷ್ಯ ತೋರಿದರೆ ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಟ್ಟುನಿಟ್ಟಿನ ಎಚ್ಚರಿಕೆ ನೀಡಬೇಕೆಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತಿಳಿಸಿದರು.
ಪ್ರಕರಣದ ಹಿನ್ನೆಲೆ ಏನು?
ರಾಜರಾಜೇಶ್ವರಿ ನಗರದ ಬ್ರೂವರೀಸ್ನ ಪಾಲುದಾರ ವಿ.ಚಿಟ್ಟಿ ಬಾಬು ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ ಮತ್ತು ಕರ್ನಾಟಕ ಅಬಕಾರಿ ಕಾಯ್ದೆ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿದ್ದರು. ಈ ಅರ್ಜಿ ವಿಚಾರಣೆ ವೇಳೆ ನಡೆಸಿದ ಆದೇಶವನ್ನು ಕಾಯ್ದಿರಿಸಿದ ಹೈಕೋರ್ಟ್ ಈ ಮೇಲಿನಂತೆ ಮೌಖಿಕ ನಿರ್ದೇಶನ ನೀಡಿತು.
ವಿದ್ಯಾರ್ಥಿ ಸಾವು ಬೆನ್ನಲ್ಲೆ ಕ್ರಮಕ್ಕೆ ಸೂಚನೆ
15 ವರ್ಷದ 10 ನೇ ತರಗತಿಯ ವಿದ್ಯಾರ್ಥಿ ಕಳೆದ ಜನವರಿ 31 ರಂದು ಮೃತಪಟ್ಟಿದ್ದರು. ಈ ಬಾಲಕ ತಂದೆ ತಾಯಿಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪೊಲೀಸ್ ತನಿಖೆ ಪ್ರಕಾರ, ಶಾಲೆಯ ಬೀಳ್ಕೊಡುಗೆ ಸಮಾರಂಭದ ಬಳಿಕ ಮೃತ ವಿದ್ಯಾರ್ಥಿ ಸೇರಿ ಸಹಪಾಠಿಗಳು ಪಬ್ಗೆ ತೆರಳಿದ್ದಾರೆ. ಅದಾದ ನಂತರ ಪೋಷಕರಿಗೆ ಹೆದರಿ ಪ್ರಾಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ. ನಿಯಮಗಳಡಿ ಆರ್ಆರ್ ನಗರ ವೈನ್ ಸೆಂಟರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಅರ್ಜಿದಾರರ ಪರ ವಾದಿಸಿದ ವಕೀಲ ಶರತ್ ಎಸ್ ಗೌಡ, ಸದರಿ ಅಪ್ರಾಪ್ತ ವಯಸ್ಕನಿಗೆ ಸಂಸ್ಥೆ ಮದ್ಯ ನೀಡಿಲ್ಲ. ಈ ಸಹಪಾಠಿಗಳ ಗುಂಪು ಹೊರಗಿನಿಂದ ಎಣ್ಣೆ ತರಿಸಿಕೊಂಡಿದೆ. ಸಂಸ್ಥೆ ಮದ್ಯದ ಎಲ್ಲ ನಿಯಮಗಳನ್ನು ಪಾಲಿಸುತ್ತಲೇ ಬಂದಿದೆ. 18 ವರ್ಷದೊಳಗಿನ ಯಾರಿಗಾದರೂ ಸೇವೆಯನ್ನು ನಿಷೇಧಿಸುವ ಸೂಚನೆಗಳನ್ನು ಪ್ರದರ್ಶಿಸಲಾಗಿದೆ ಎಂದು ಸಮರ್ಥಿಸಿಕೊಂಡರು.
ಅರ್ಜಿದಾರರು ವೈನ್ ಸೆಂಟರ್ ಪಾಲುದಾರರು. ಮೃತ ಬಾಲಕ ರೆಸ್ಟೋರೆಂಟ್ನಲ್ಲಿದ್ದಾಗ ಹಾಜರಿದ್ದ ಸಿಬ್ಬಂದಿ ಮತ್ತು ಇತರರನ್ನು ಪೊಲೀಸರು ಹೊಣೆಗಾರರನ್ನಾಗಿ ಮಾಡಬೇಕೆಂದರು. ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ ಎನ್ ಜಗದೀಶ ಅವರು, ಅರ್ಜಿದಾರರ ಪರ ವಾದವನ್ನು ಆಕ್ಷೇಪಿಸಿದರು. ತನಿಖೆ ಇನ್ನೂ ನಡೆಯುತ್ತಿದೆ. ಅಗತ್ಯವಿದ್ದರೆ ಪೊಲೀಸರು ಹೆಚ್ಚುವರಿ ಆರೋಪಗಳನ್ನು ಸೇರಿಸಬಹುದು ಎಂದು ಹೇಳಿದರು. ರೆಸ್ಟೋರೆಂಟ್ಗಳು ಮತ್ತು ಪಬ್ಗಳು ತಮ್ಮ ಆವರಣದಲ್ಲಿ ಮಕ್ಕಳು ಮದ್ಯ ಸೇವನೆ ತಡೆಯುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications