Corruption Case: ಮಾಡಾಳ್ ವಿರೂಪಾಕ್ಷಪ್ಪಗೆ ಕೆಎಸ್ಡಿಎಲ್ ಕಚೇರಿ ಪ್ರವೇಶ ರದ್ದು
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕೋರ್ಟ್ ಅಥವಾ ಸರ್ಕಾರದ ಅನುಮತಿ ಇಲ್ಲದೆ ಕೆಎಸ್ಡಿಎಲ್ ಕಚೇರಿಗೆ ಪ್ರವೇಶಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಭ್ರಷ್ಟಾಚಾರ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಮಾಡಾಳ್ ವಿರೂಪಾಕ್ಷಪ್ಪ ಅವರು ಕೋರ್ಟ್ ಅಥವಾ ಸರ್ಕಾರದ ಅನುಮತಿ ಇಲ್ಲದೆ ಕೆಎಸ್ಡಿಎಲ್ ಕಚೇರಿಗೆ ಪ್ರವೇಶಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ಹೇಳಿ ಜಾಮೀನು ನೀಡಿದೆ.
ರಾಜ್ಯ ಲೋಕಾಯುಕ್ತ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಿಂದ ಮುಕ್ತಿ ಕೋರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೋಮವಾರ ಹೈಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದು ಇಂದು(ಮಾರ್ಚ್ 7) ಅದರ ವಿಚಾರಣೆ ನಡೆಸಿತು. ಈ ವೇಳೆ ಮಾಡಾಳ್ ವಿರೂಪಾಕ್ಷಪ್ಪ ಅವರು ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪುತ್ರನ ಲಂಚ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಕೆಎಸ್ಡಿಎಸ್ ಮಾಜಿ ಚೇರ್ಮನ್ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪಗೆ ಜಾಮೀನು ಸಿಕ್ಕಿದೆ. ನ್ಯಾಯಮೂರ್ತಿ ನಡರಾಜನ್ ಅವರು ಮಾಡಳ್ ವಿರೂಪಕ್ಷಪ್ಪಗೆ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.
ಲೋಕಯುಕ್ತ ಪೊಲೀಸರು ದಾಖಲೆ ಸಲ್ಲಿಸುವವರೆಗೆ ಹೈಕೋರ್ಟ್ ಏಕಸದಸ್ಯ ಪೀಠ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ನೀಡಿದೆ. ಜೊತೆಗೆ ಐದು ಲಕ್ಷ ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿ ನೀಡುವಂತೆ ಕೆ. ನಟರಾಜನ್ ಹೇಳಿದ್ದು, ಆದೇಶ ತಲುಪಿದ 48 ಗಂಟೆಯಲ್ಲಿ ತನಿಖೆಗೆ ಹಾಜರಾಗಬೇಕು ಎಂದು ಖಡಕ್ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿದೆ.

ಶಾಸಕರ ಪರ ಹಿರಿಯ ವಕೀಲ ಕೆ.ಸುಮನ್ ವಾದ ಮಂಡಿಸಿದ್ದು, ಎಫ್ಐಆರ್ನಲ್ಲಿ ಯಾವುದೇ ಆರೋಪಗಳಿಲ್ಲ, ಪುತ್ರ ಲಂಚ ಪಡೆದಿರುವುದಕ್ಕೆ ಯಾವುದೇ ನೇರ ಸಾಕ್ಷಿ ಇಲ್ಲ ಎಂದು ವಾದಿಸಿದ್ದಾರೆ.
ಭಾರೀ ಕುತೂಹಲವನ್ನು ಹುಟ್ಟುಹಾಕಿದ ಮುಂದಿನ ಚುನಾವಣೆ
ಈ ಮಧ್ಯೆ ದಾವಣಗೆರೆಯ ಚನ್ನಗಿರಿಯಲ್ಲಿ ವಿರೂಪಾಕ್ಷಪ್ಪನವರ ಬೆಂಬಲಿಗರ ಪ್ರತಿಭಟನೆ, ತಮ್ಮ ನಾಯಕನನ್ನು ರಕ್ಷಿಸುವ ಪ್ರಯತ್ನ ಮುಂದುವರಿದಿದೆ. ಲಂಚ, ಭ್ರಷ್ಟಾಚಾರ ಪ್ರಕರಣದಲ್ಲಿ ಮಾಡಾಳ್ ಸಿಲುಕಿರುವುದರಿಂದ ಚನ್ನಗಿರಿಯಲ್ಲಿ ಈ ಬಾರಿ ಬಿಜೆಪಿಯ ಟಿಕೆಟ್ ಕೈತಪ್ಪಿ ಬೇರೆಯವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಲಿದೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ.
ಮಾಡಾಳ್ಗೆ ಟಿಕೆಟ್ ತಪ್ಪುತ್ತೆ ಎನ್ನುವ ಹಿನ್ನೆಲೆಯಲ್ಲಿ ನಿನ್ನೆಯಿಂದ ಕ್ಷೇತ್ರದಲ್ಲಿ ಬೆಂಬಲಿಗರು ಮಹತ್ವದ ಸಭೆ ನಡೆಸುತ್ತಿದ್ದು, ಬಿಜೆಪಿ ಕಾರ್ಯಕರ್ತರು ಹಾಗೂ ಮಾಡಾಳ್ ಅಭಿಮಾನಿಗಳೂ ನಿನ್ನೆ ಭಾಗಿಯಾಗಿದ್ದರು. ಚನ್ನಗಿರಿ ಬಿಜೆಪಿ ಕಚೇರಿಯಲ್ಲಿ ನಿನ್ನೆ ನಡೆದಿರುವ ಸಭೆಯಾಗಿದೆ. ಮಾಡಾಳ್ ಪರ ನಿಲ್ಲಬೇಕು ಎಂದು ಕೆಲವು ಬೆಂಬಲಿಗರು ವಾದ ನಡೆಸಿದ್ದಾರೆ.
ಎಲೆಕ್ಷನ್ ಹೊತ್ತಿನಲ್ಲಿ ಸಂಕಷ್ಟಕ್ಕೆ ಮಾಡಾಳ್ ಸಿಲುಕಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಹುಟ್ಟುತ್ತಲೇ ಆಗರ್ಭ ಶ್ರೀಮಂತರು, ಅಡಿಕೆ ಸೇರಿದಂತೆ ಹಲವಾರು ವ್ಯವಹಾರಗಳಿವೆ, ಇದು ಕಾಂಗ್ರೆಸ್ ಷಡ್ಯಂತ್ರ ಎಂದು ಕೆಲವು ಬೆಂಬಲಿಗರ ವಾದ ನಡೆಸಿದ್ದಾರೆ. ಹೀಗಾಗಿ ಮುಂದಿನ ಚುನಾವಣೆ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ.
ಮಾಡಾಳ್ ಪುತ್ರ ಪ್ರಶಾಂತ್ ಟ್ರ್ಯಾಪ್ ಪ್ರಕರಣದಲ್ಲಿ ತನಿಖಾಧಿಕಾರಿಗಳ ಬದಲಾವಣೆಯಾಗಿದೆ. ಟ್ರ್ಯಾಪ್ ತನಿಖಾಧಿಕಾರಿಗಳಿಬ್ಬರ ಬದಲಾವಣೆ ಮಾಡಲಾಗಿದೆ. ಡಿವೈಎಸ್ಪಿ ಪ್ರಮೋದ್ ಕುಮಾರ್, ಇನ್ಸ್ಪೆಕ್ಟರ್ ಕುಮಾರಸ್ವಾಮಿ ಚೇಂಜ್ ಆಗಿದ್ದು, ನೂತನ ತನಿಖಾಧಿಕಾರಿಯಾಗಿ ಡಿವೈಎಸ್ಪಿ ಆಂಥೋಣಿ ಜಾನ್, ಇನ್ಸ್ಪೆಕ್ಟರ್ ಬಾಲಾಜಿಬಾಬು ತನಿಖಾಧಿಕಾರಿಗಳಾಗಿ ನೇಮಕವಾಗಿದ್ದಾರೆ. ತನಿಖಾಧಿಕಾರಿಗಳ ಬದಲಾವಣೆ ಭಾರೀ ಕುತೂಹಲ ಕೆರಳಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications