ತಕ್ಷಣವೇ ರಸ್ತೆ ಗುಂಡಿ ಮುಚ್ಚುವ ಕಾರ್ಯ ಆರಂಭಿಸಲು ಹೈಕೋರ್ಟ್ ಆದೇಶ
ಬೆಂಗಳೂರು ಏ.22: ಹೈಕೋರ್ಟ್ ಬೀಸಿದ ಚಾಟಿಗೆ ಏಟಿಗೆ ಎಚ್ಚೆತ್ತುಕೊಂಡಿರುವ ಬಿಬಿಎಂಪಿ, ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ತಕ್ಷಣ ಆರಂಭಿಸಲು ಕಾರ್ಯಾದೇಶವನ್ನು ನೀಡಿದೆ.
ಪೈಥಾನ್ ಯಂತ್ರದ ಮೂಲಕ ಗುಂಡಿ ಮುಚ್ಚುವ ಅಮೆರಿಕನ್ ರೋಡ್ ಟೆಕ್ನಾಲಜೀಸ್ ಸಲ್ಯೂಷನ್ಸ್ (ಎಆರ್ಟಿಎಸ್) ಸಂಸ್ಥೆಗೆ ಏ.20ರಂದು ತಾತ್ಕಾಲಿಕ ಕಾರ್ಯಾದೇಶ ನೀಡಲಾಗಿದೆ ಎಂದು ಬಿಬಿಎಂಪಿ ನೀಡಿದೆ. ಹಾಗಾಗಿ ನ್ಯಾಯಾಲಯ ತಕ್ಷಣವೇ ಗುಂಡಿ ಮುಚ್ಚುವ ಕಾರ್ಯ ಆರಂಭಸುವಂತೆ ಆದೇಶಿಸಿ ವಿಚಾರಣೆಯನ್ನು ಮುಂದೂಡಿತು.
ಬೆಂಗಳೂರು ನಗರದ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಕೋರಮಂಗಲದ ವಿಜಯ್ ಮೆನನ್ 2015ರಲ್ಲಿ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕಾರ್ಯಾದೇಶ ನೀಡಿರುವ ಬಗ್ಗೆ ಬಿಬಿಎಂಪಿ ವಕೀಲರು ನೀಡಿದ ಮಾಹಿತಿ ದಾಖಲಿಸಿಕೊಂಡ ನ್ಯಾಯಪೀಠ, ಪಾಲಿಕೆ ಹೊರಡಿಸಿರುವ ಕಾರ್ಯಾದೇಶದ ಪ್ರಕಾರ ಎಆರ್ಟಿಎಸ್ ಸಂಸ್ಥೆಯು ತಕ್ಷಣವೇ ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕೆಲಸ ಆರಂಭಿಸಬೇಕು ಎಂದು ನಿರ್ದೇಶಿಸಿತು.

ಪೈಥಾನ್ ಯಂತ್ರಕ್ಕೆ ಪ್ರತಿ ಗಂಟೆಗೆ 1449 ರೂ
ಅಲ್ಲದೆ, ಲೋಕೋಪಯೋಗಿ ಇಲಾಖೆಯು ರಸ್ತೆ ಗುಂಡಿ ಮುಚ್ಚುವ ಪೈಥಾನ್ ಯಂತ್ರಕ್ಕೆ ಪ್ರತಿ ಗಂಟೆಗೆ 1449 ರೂ. ನೀಡಲಾಗುವುದು ಎಂದು ಷೆಡ್ಯೂಲ್ ದರ ಪಟ್ಟಿಯಲ್ಲಿ ಉಲ್ಲೇಖಿಸಿದೆ. ಅದನ್ನು ಗಮನದಲ್ಲಿಟ್ಟುಕೊಂಡು ರಸ್ತೆ ಗುಂಡಿ ಮುಚ್ಚುವ ಪೈಥಾನ್ ಯಂತ್ರಕ್ಕೆ ಪ್ರತಿ ಗಂಟೆಗೆ ಎಷ್ಟು ಹಣ ಪಾವತಿಸಬೇಕು ಎಂಬುದನ್ನು ಬಿಬಿಎಂಪಿ ಮುಖ್ಯ ಆಯುಕ್ತರು ಪುನರ್ ಪರಿಗಣಿಸಬೇಕು ಎಂದು ಸೂಚಿಸಿತು. ಹಾಗೆಯೇ, ದರ ನಿಗದಿ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತರು ಕೈಗೊಂಡ ನಿರ್ಧಾರ ಹಾಗೂ ರಸ್ತೆ ಗುಂಡಿ ಮುಚ್ಚಿರುವುದಕ್ಕೆ ಸಂಬಂಧಿಸಿದ ಪ್ರಗತಿ ವರದಿಯನ್ನು ಮುಂದಿನ ವಿಚಾರಣೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಕೆಲಸ ಆರಂಭಿಸಲು ಕಂಪೆನಿಯು ಮುಂಗಡ ಹಣಕ್ಕೆ ಬೇಡಿಕೆ ಸಲ್ಲಿಸಿದರೆ, ಅದನ್ನು ಬಿಬಿಎಂಪಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಮೇ 31ಕ್ಕೆ ಮಂದೂಡಿತು.

36 ಗಂಟೆ ಗಡುವು
36 ಗಂಟೆ ಗಡುವು: ಮಂಗಳವಾರ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ವಿಚಾರದಲ್ಲಿ ಬಿಬಿಎಂಪಿ ವಿಳಂಬ ನೀತಿಗೆ ಹೈಕೋರ್ಟ್ ಮತ್ತೆ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, 36 ಗಂಟೆಯೊಳಗೆ ಅಮೆರಿಕನ್ ರಸ್ತೆ ತಂತ್ರಜ್ಞಾನ ಸಂಸ್ಥೆಯೊಂದಿಗೆ ರಸ್ತೆ ಗುಂಡಿ ಮುಚ್ಚಲು ಒಪ್ಪಂದ ಹಾಗೂ ಕಾರ್ಯಾದೇಶ ಹಾಜರುಪಡಿಸಬೇಕು ಎಂದು ಆದೇಶಿಸಿದೆ.
ನ್ಯಾಯಪೀಠ, ಪದೇ ಪದೇ ಒಂದಿಲ್ಲೊಂದು ನೆಪ ಹೇಳುತ್ತಿರುವ ಬಿಬಿಎಂಪಿ, ಒಮ್ಮೆ ರಸ್ತೆ ಗುಂಡಿ ಅಗೆಯುವ ಸಂಸ್ಥೆ ಹೊಣೆ ಎನ್ನುತ್ತೀರಾ. ಮತ್ತೊಮ್ಮೆ ಮಳೆ, ಟೆಂಡರ್ ಇತ್ಯಾದಿ ಒಂದಲ್ಲಾ ಒಂದು ನೆಪ ಹೇಳುತ್ತೀರಾ? ರಸ್ತೆ ಗುಂಡಿ ಸರಿಪಡಿಸಲೂ ನಿಮ್ಮಿಂದಾಗುವುದಿಲ್ಲವೇ? ಎಲ್ಲದಕ್ಕೂ ಒಂದು ಮಿತಿ ಇದೆ, ವಿಳಂಬ ಸಹಿಸಲಾಗದು'' ಎಂದು ಖಡಕ್ ಆಗಿ ಹೇಳಿತು.

ವಲಯವಾರು ಕ್ರಿಯಾ ಯೋಜನೆ
ಕಳೆದ ವಿಚಾರಣೆ ವೇಳೆ ನ್ಯಾಯಪೀಠ, ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಲಯವಾರು ಕ್ರಿಯಾ ಯೋಜನೆ ರೂಪಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಬಿಬಿಎಂಪಿಗೆ ಆದೇಶಿಸಿತ್ತು. ಮಿಲಿಟರಿಗೆ ವಹಿಸುವುದಾಗಿ ಎಚ್ಚರಿಕೆ; ನ್ಯಾಯಪೀಠ ''ರಸ್ತೆ ಗುಂಡಿಗಳಿಂದಾಗಿ ಜನ ಸಾಯುತ್ತಿದ್ದಾರೆ, ಗುಂಡಿಗಳಿಂದಾಗಿ ಜನ ಸಾಯುತ್ತಿದ್ದಾರೆ,ಗುಂಡಿಗಳಿಂದಾಗಿ ಜನ ಸಾಯುತ್ತಿದ್ದಾರೆ, ಬಿಬಿಎಂಪಿ ಏಕೆ ರಸ್ತೆ ಗುಂಡಿ ಸಮಸ್ಯೆ ಬಗೆಹರಿಸಿಲ್ಲ. ಉದ್ದೇಶಪೂರ್ವಕವಾಗಿ ಬಿಬಿಎಂಪಿ ಇಂಜಿನಿಯರ್ ಗಳು ಹೀಗೆ ಮಾಡುತ್ತಿದ್ದಾರೆ. ಸಾವಿರಾರು ಕೋಟಿ ನೀಡಿದರೂ ರಸ್ತೆ ಸರಿಯಾಗುತ್ತಿಲ್ಲ. ಹಾಗಾಗಿ ಬಿಬಿಎಂಪಿ ಇಂಜಿನಿಯರ್ ಗಳನ್ನೇ ಬದಲಿಸಲು ಸರ್ಕಾರಕ್ಕೆ ಆದೇಶ ನೀಡುತ್ತವೆ'' ಎಂದು ಎಚ್ಚರಿಕೆ ನೀಡಿತ್ತು. ಆಗ ನ್ಯಾಯಪೀಠ, ರಸ್ತೆ ಗುಂಡಿ ಮುಚ್ಚಲು ಉತ್ತಮ ತಂತ್ರಜ್ಞಾನ ಬಳಸಿ, ಬರೀ ಕಣ್ಣೊರೆಸುವ ತಂತ್ರ ಇಲ್ಲಿ ನಡೆಯುವುದಿಲ್ಲ ಎಂದಿದ್ದ ನ್ಯಾಯಪೀಠ,ಸುದೀರ್ಘ ಬಾಳಿಕೆಯ ರಸ್ತೆಗಳನ್ನು ನಿರ್ಮಿಸದಿದ್ದರೆ ರಸ್ತೆ ನಿರ್ವಹಣೆ ಹೊಣೆಯನ್ನು ಮಿಲಿಟರಿಗೆ ವಹಿಸುವುದಾಗಿ ಎಚ್ಚರಿಕೆ ನೀಡಿತು.

ಇಂಜಿನಿಯರ್ಗೆ ಕ್ಲಾಸ್:
ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿರುವುದು ಗೊತ್ತಿದೆಯೇ? ನಿಮ್ಮ ಇಂಜಿನಿಯರ್ಗಳು ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ರಸ್ತೆ ಗುಂಡಿ ಸಮಸ್ಯೆ ಸರಿಪಡಿಸಲು ಏನು ಕ್ರಮ ಕೈಗೊಂಡಿದ್ದೀರಿ? ಜೈಲಿಗೆ ಕಳುಹಿಸದೇ ನಿಮಗೆ ಕರುಣೆ ತೋರಿದ್ದೇವೆ. ಗುಣಮಟ್ಟದ ಕಾಮಗಾರಿಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕ್ಲಾಸ್ ತೆಗೆದುಕೊಂಡಿತು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications